Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಯುವ ಜನೋತ್ಸವ : ಜಾನಪದ ಸಂಸ್ಕೃತಿಯತ್ತ ಕ್ಷೀಣಿಸುತ್ತಿರುವ ಯುವ ಸಮೂಹದ ಒಲವು : ವಿ.ಟಿ.ವಿಸ್ಮಯಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಯುವ ಜನೋತ್ಸವ : ಜಾನಪದ ಸಂಸ್ಕೃತಿಯತ್ತ ಕ್ಷೀಣಿಸುತ್ತಿರುವ ಯುವ ಸಮೂಹದ ಒಲವು : ವಿ.ಟಿ.ವಿಸ್ಮಯಿ*

ಅಕ್ಟೋಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.16 NEWS DESK : ಅಭಿವೃದ್ಧಿ ಹೊಂದುತ್ತಿರುವ ದೇಶವಾದ ಭಾರತದಲ್ಲಿಂದು, ಅತ್ಯಂತ ಸಂಪದ್ಭರಿತವಾದ ಜಾನಪದ ಕಲಾ ಸಂಸ್ಕೃತಿಯತ್ತ ಯುವ ಪೀಳಿಗೆಯ ಆಸಕ್ತಿ ಕ್ಷೀಣಿಸುತ್ತಿರುವುದು ಕಂಡು ಬರುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಕಳವಳ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’ವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಇಂದಿನ ಯುವ ಶಕ್ತಿ ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿಯನ್ನು ತೋರಿ ಅದರತ್ತ ಮಾರುಹೋಗುತ್ತಿದೆ. ಮೊದಲು ನಾವು ನಾಡಿನೆಲ್ಲೆಡೆ ಇರುವ ವೈವಿಧ್ಯಮಯವಾದ ಜಾನಪದ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಸಕ್ತರಾಗಬೇಕು. ಇಂದಿನ ಯುವ ಸಮೂಹ ತಮ್ಮ ಬದುಕಿಗೆ ಒಳಿತಾಗುವಂತಹ ವಿದ್ಯಾಭ್ಯಾಸ ಪಡೆಯುವಂತಾಗಬೇಕೇ ಹೊರತು, ಕೇವಲ ಸರ್ಟಿಫಿಕೇಟ್‍ಗಾಗಿ ಓದುವಂತಾಗಬಾರದು ಎಂದು ವಿಸ್ಮಯಿ ಸಲಹೆ ನೀಡಿದರು. ರಾಜ್ಯದಾದ್ಯಂತ ಏಕಕಾಲದಲ್ಲಿ ಯುವ ಜನೋತ್ಸವ ನಡೆಸಲು ಸರ್ಕಾರದ ಸುತ್ತೋಲೆ ಇರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇದ್ದರೂ, ನಡೆಸಲೇಬೇಕಾಗಿದೆ. ಮಕ್ಕಳು ತಮ್ಮ ಪ್ರತಿಭೆಯನ್ನು ಯುವ ಜನೋತ್ಸವದಲ್ಲಿ ಪ್ರದರ್ಶಿಸಿ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವಂತಾಗಲಿ ಎಂದು ಹಾರೈಸಿದರು. ಮೈ ಭಾರತ್ ಕೊಡಗು ಯುವ ಅಧಿಕಾರಿ ಕೆಟಿಕೆ ಉಲ್ಲಾಸ್ ಮಾತನಾಡಿ, ಯುವ ಶಕ್ತಿಯಲ್ಲಿ ಗುರಿ ಇರಬೇಕು. ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಿ, ಬದುಕಿನಲ್ಲಿ ತಮ್ಮ ಕನಸನ್ನು ನನಸು ಮಾಡಿಕೊಳ್ಳುವಂತಾಗಬೇಕು. ದೇಶ ನನಗೇನು ನೀಡಿದೆ ಎನ್ನುವುದಕ್ಕಿಂತ ನಾನು ದೇಶಕ್ಕಾಗಿ ಏನು ಮಾಡಿದ್ದೇನೆ ಎನ್ನುವುದು ಮುಖ್ಯ ಎಂದರು. ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಯುವ ಸಮೂಹ ತನ್ನನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವುದಲ್ಲದೆ, ಮಾದಕ ಪದಾರ್ಥಗಳ ಸೇವನೆಗೆ ಮಾರುಹೋಗದೆ ಬದುಕಿನಲ್ಲಿ ಉತ್ತಮ ಹೆಸರನ್ನುಗಳಿಸಿ ಕೀರ್ತಿ ಗಳಿಸುವಂತಾಗಲಿ ಎಂದು ಆಶಿಸಿದರು. ಮಡಿಕೇರಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಮಾತನಾಡಿ, ಯುವ ಜನೋತ್ಸವದಲ್ಲಿ ಯುವ ಸಮೂಹ ಪಾಲ್ಗೊಳ್ಳುವುದರ ಮೂಲಕ ಪ್ರತಿಭೆಯನ್ನು ಹೊರಸೂಸಿ, ರಾಷ್ಟ್ರಮಟ್ಟದಲ್ಲಿ ಕೀರ್ತಿ ತರುವಂತಾಗಲಿ ಎಂದರು. ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆಯ ಸುತ್ತೋಲೆಯಂತೆ ನಿಗದಿತ ದಿನಾಂಕದಂದು ಯುವ ಜನೋತ್ಸವ ನಡೆಸಲಾಗಿದೆ. ಭಾಗವಹಿಸುವ ತಂಡಗಳ ಸದಸ್ಯರಿಗೆ 14 ರಿಂದ 29 ವರ್ಷದೊಳಗಿನ ವಯೋಮಿತಿ ನಿಗದಿಗೊಳಿಸುವ ಮೂಲಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಯುವಜನೋತ್ಸವದಲ್ಲಿ ಜಿಲ್ಲೆಯ ಕೆಲವೊಂದು ಆಯ್ದ ಸಂಘ-ಸಂಸ್ಥೆಗಳು ಸ್ಪರ್ಧೆಯಲ್ಲಿ ಭಾಗವಹಿಸಿರುವುದಾಗಿ ತಿಳಿಸಿದರು. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲಾ, ಉಪನ್ಯಾಸಕರಾದ ಚಿದಾನಂದ, ಡಾ.ವೇಣುಗೋಪಾಲ್, ಉದಯಕುಮಾರ್, ಕೆಂಬಡತಂಡ ಮುದ್ದಪ್ಪ, ಕಂಬೀರಂಡ ರಾಖಿ ಪೂವಣ್ಣ, ಜಿಲ್ಲಾ ಯುವ ಒಕ್ಕೂಟದ ಖಜಾಂಚಿ ಕುಂಜಿಲಂಡ ಮಧು ಮೋಹನ್, ಸ್ಥಳೀಯ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಚಿತ್ರಾ ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಜಿಲ್ಲಾ ಯುವ ಒಕ್ಕೂಟದ ಕಾರ್ಯಾಧ್ಯಕ್ಷ ಕೂಡಂಡ ಸಾಬ ಸುಬ್ರಮಣಿ ನಿರೂಪಿಸಿದರು. ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ವಂದಿಸಿದರು. :: ಬಹುಮಾನ ವಿತರಣೆ :: ಸಮಾರಂಭದಲ್ಲಿ ವಿಜ್ಞಾನ ಮೇಳ, ಜಾನಪದ ಗೀತೆ, ಜಾನಪದ ನೃತ್ಯ, ಕಥೆ ಬರೆಯುವುದು, ಕವಿತೆ ಬರೆಯುವುದು, ಚಿತ್ರಕಲೆ, ಭಾಷಣ (ಘೋಷಣೆ) ಸ್ಪರ್ಧೆ ನಡೆದು, ವಿಜೇತರಿಗೆ ಪಾರಿತೋಷಕದೊಂದಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.ಪ್ರಥಮ ಸ್ಥಾನ ಪಡೆದ ಜಿಲ್ಲೆಯ ತಂಡಗಳು ನವೆಂಬರ್ ತಿಂಗಳಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವ ಜನೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.