
ಸುಂಟಿಕೊಪ್ಪ ಅ.17 NEWS DESK : ಕಾನ್ಬೈಲ್ ಒಕ್ಕೂಟ ಕಾರ್ಯಕ್ಷೇತ್ರದಲ್ಲಿ ಲೆಕ್ಕ ಪರಿಶೋಧನೆಗೆ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಸದಸ್ಯೆ ರಾಧಮಣಿ, ಶ್ರೀ.ಕ್ಷೇ.ಧ.ಗ್ರಾ.ಯೋ.ವಲಯ ಮೇಲ್ವಿಚಾರಕ ಸಂತೋಷ್ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಒಕ್ಕೂಟದ ಕಾರ್ಯಕ್ಷೇತ್ರದ ಲೆಕ್ಕ ಪರಿಶೋಧನೆಯನ್ನು ಆರಂಭಗೊಳಿಸಲಾಗಿದೆ. ಈ ಸಂದರ್ಭ ಲೆಕ್ಕ ಪರಿಶೋಧಕರಾದ ಜಗನ್ನಾಥ್, ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು.









