
ವಿರಾಜಪೇಟೆ ಅ.17 NEWS DESK : ಕುಶಾಲನಗರದ ಫಾತಿಮಾ ಕಾನ್ವೆಂಟ್ನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ ತಂಡ ವಿಜೇತರಾಗಿದ್ದು, ಮಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿರುತ್ತಾರೆ. ತಂಡದಲ್ಲಿ ಕ್ರೀಡಾಪಟುಗಳಾದ ಸಣ್ಣುವಂಡ ರಶ್ಮಿ ಪೊನ್ನಮ್ಮ, ಬೊಳ್ಳೆಪಂಡ ದೀಪ್ತಿ ತಂಗಮ್ಮ, ಪಳೆಯಂಡ ಕಾಜಲ್ ಸಿ, ಸೃಷ್ಟಿ ಬಿ.ಎಸ್, ನಿಲ್ಮಾಡ್ ತನ್ಯಾ ರೈ ಇದ್ದರು. ಕಾವೇರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಸಣ್ಣುವಂಡ ರಶ್ಮಿ ಪೊನ್ನಮ್ಮ ಹಾಗೂ ಪಳೆಯಂಡ ಕಾಜಲ್ ಸಿ ವಿಭಾಗ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಎಂ.ಪಿ.ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.









