Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಗರಸಭೆಯ ಸಾಮಾನ್ಯ ಸಭೆ ನಡೆಸದಿದ್ದರೆ ನಾವೇ ಸಭೆ ನಡೆಸುತ್ತೇವೆ : ಎಸ್‍ಡಿಪಿಐ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು

*ನಗರಸಭೆಯ ಸಾಮಾನ್ಯ ಸಭೆ ನಡೆಸದಿದ್ದರೆ ನಾವೇ ಸಭೆ ನಡೆಸುತ್ತೇವೆ : ಎಸ್‍ಡಿಪಿಐ ಎಚ್ಚರಿಕೆ*

October 21, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.21 NEWS DESK : ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎರಡನೇ ಅವಧಿಯ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದು ಆರು ತಿಂಗಳುಗಳೇ ಕಳೆದಿದ್ದರೂ ನಿಯಮಾನುಸಾರ ಸಭೆ ನಡೆಸದೆ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಲಾಗಿದೆ. ಮುಂದಿನ ಎರಡು ವಾರದೊಳಗೆ ಸಾಮಾನ್ಯ ಸಭೆಯನ್ನು ನಡೆಸದಿದ್ದರೆ ಪ್ರಕರಣ ಸಂಖ್ಯೆ 47(3) ಪ್ರಕಾರ ಅಭಿವೃದ್ಧಿಯ ದೃಷ್ಟಿಯಿಂದ ನಾವುಗಳೇ ಸಭೆ ಕರೆಯುತ್ತೇವೆ ಎಂದು ನಗರಸಭೆಯ ವಿರೋಧ ಪಕ್ಷ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಅವರು ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 47(1) ರ ಪ್ರಕಾರ ಪ್ರತಿ ತಿಂಗಳು ಕನಿಷ್ಠ ಒಂದು ಸಭೆಯನ್ನಾದರೂ ನಡೆಸಬೇಕು. ಆದರೆ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಕಳೆದ ಆರು ತಿಂಗಳಿನಲ್ಲಿ ಕೇವಲ ಒಂದು ಸಾಮಾನ್ಯ ಸಭೆ ಮತ್ತು ಒಂದು ತುರ್ತು ಸಭೆಯನ್ನು ಮಾತ್ರ ನಡೆಸಿ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ಆರೋಪಿಸಿದರು. ತಕ್ಷಣ ಸಭೆ ನಡೆಸಬೇಕೆಂದು ಒತ್ತಾಯಿಸಿ ಅಧ್ಯಕ್ಷರಿಗೆ ಇಂದು ಎಸ್‍ಡಿಪಿಐ ವತಿಯಿಂದ ನವಿಪತ್ರ ಸಲ್ಲಿಸಿದ್ದು, ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ. ಒಂದು ವೇಳೆ ಸಭೆ ನಡೆಸದೇ ಇದ್ದರೆ ನಗರದ ಅಭಿವೃದ್ಧಿ ಮತ್ತು ಜನರ ಹಿತದೃಷ್ಟಿಯಿಂದ ಪೌರಸಭೆಗಳ ಅಧಿನಿಯಮದಡಿ ನಾವುಗಳೇ ಸಭೆ ಕರೆಯುತ್ತೇವೆ ಎಂದರು. ಬಿಜೆಪಿ ನೇತೃತ್ವದ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಅಭಿವೃದ್ಧಿ ಶೂನ್ಯವಾಗಿದೆ. ಒಳಜಗಳ ಮತ್ತು ಸ್ವಹಿತಾಸಕ್ತಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಅನಿತಾ ಪೂವಯ್ಯ ಅವರ ನೇತೃತ್ವದ ಆಡಳಿತ ಮಂಡಳಿ ಕೂಡ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಇವರ ಅವಧಿಯಲ್ಲಿ ನಗರೋತ್ಥಾನದ ಅನುದಾನ 5 ಕೋಟಿ ರೂ.ಗಳಷ್ಟು ಖರ್ಚಾಗದೆ ಸರಕಾರಕ್ಕೆ ವಾಪಾಸ್ಸಾಗಿದೆ ಎಂದು ಆರೋಪಿಸಿದರು. ಈಗಿನ ಆಡಳಿತ ಮಂಡಳಿ ನಗರೋತ್ಥಾನದ ಅನುದಾನವನ್ನು ಶೇ.30 ರಷ್ಟು ಮಾತ್ರ ಖರ್ಚು ಮಾಡಿದ್ದು, ಶೇ.70ರಷ್ಟು ಅನುದಾನ ಹಾಗೇ ಉಳಿದುಕೊಂಡಿದೆ. ನಗರದ ಜನತೆ ತಕ್ಷಣ ಎಚ್ಚೆತ್ತುಕೊಳ್ಳದಿದ್ದಲ್ಲಿ ನಗರಸಭೆಯ ನಿರ್ಲಕ್ಷ್ಯದಿಂದ ಸುಮಾರು 20 ಕೋಟಿ ರೂ.ಗಳಷ್ಟು ಅನುದಾನ ಸರಕಾರಕ್ಕೆ ವಾಪಾಸ್ಸಾಗಲಿದೆ ಎಂದು ಗಮನ ಸೆಳೆದರು. ನಗರದಲ್ಲಿ ಸುಮಾರು 1400 ನಿವೇಶನ ರಹಿತ ಬಡವರಿದ್ದು, ಇವರಿಗೆ ನಿವೇಶನ ಒದಗಿಸುವ ಕಾಳಜಿಯನ್ನು ತೋರುತ್ತಿಲ್ಲ. ಅಸಂಖ್ಯಾತ ಬೀದಿ ನಾಯಿಗಳು ಅಪಾಯಕಾರಿಯಾಗಿ ಸಂಚರಿಸುತ್ತಿವೆ. ತೀವ್ರ ಮಳೆಯಿಂದಾಗಿ ರಸ್ತೆ ಮತ್ತು ಚರಂಡಿಗಳು ಹದಗೆಟ್ಟಿವೆ, ನಗರದಲ್ಲಿ ಅಶುಚಿತ್ವದ ವಾತಾವರಣ ಸೃಷ್ಟಿಯಾಗಿದೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ನಗರಸಭೆಯ ಹಿಡಿತದಲ್ಲಿಲ್ಲ, ಕಾಮಗಾರಿ ಕೈಗೊಳ್ಳದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಧೈರ್ಯ ತೋರುತ್ತಿಲ್ಲವೆಂದು ಆರೋಪಿಸಿದರು. ಈ ಹಿಂದೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿದ್ದಾಗ ಸಭೆಗಳನ್ನು ನಡೆಸಿ ಅಭಿವೃದ್ಧಿಪರ ಕಾಳಜಿ ತೋರಿದ್ದರು. ಆದರೆ ಅಧಿಕಾರದಲ್ಲಿರುವ ಬಿಜೆಪಿ ಜನರ ಹಿತವನ್ನು ಕಡೆಗಣಿಸಿದೆ, ನಗರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಮ್ಮ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ ಅಮೀನ್ ಮೊಹಿಸಿನ್, ತಕ್ಷಣ ಸಾಮಾನ್ಯ ಸಭೆ ನಡೆಸುವಂತೆ ಒತ್ತಾಯಿಸಿದರು. ನಗರಸಭಾ ಸದಸ್ಯ ಹಾಗೂ ಎಸ್‍ಡಿಪಿಐ ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ ಅವರು ಮಾತನಾಡಿ ಕೆಲವು ವರ್ಷಗಳ ಹಿಂದೆ ಯುಜಿಡಿ ಯೋಜನೆಯಡಿ ಕೈಗೊಂಡಿದ್ದ ಕಾಮಗಾರಿ ವಿಫಲವಾಗಿದ್ದು, ಸುಮಾರು 70 ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಇದೀಗ ಅಮೃತ್ ಕುಡಿಯುವ ನೀರಿನ ಯೋಜನೆಯಡಿ ರಸ್ತೆಗಳನ್ನು ಅಗೆದು ಹಾಕಲಾಗುತ್ತಿದ್ದು, ಕೋಟಿಗಟ್ಟಲೆ ಹಣ ವ್ಯರ್ಥವಾಗುತ್ತಿದೆ. ನಗರದ ವಿವಿಧೆಡೆ ಅನಧಿಕೃತ ಕಟ್ಟಡಗಳು ತಲೆ ಎತ್ತುತ್ತಿವೆ, ಕೆಲವು ಕಟ್ಟಡಗಳು ರಸ್ತೆ ಮತ್ತು ಪಾರ್ಕಿಂಗ್ ಗೆ ಜಾಗ ಬಿಡದೆ ನಿಯಮ ಉಲ್ಲಂಘಿಸಿವೆ. ಆದರೆ ನಗರಸಭೆ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿದರು. ಈ ಹಿಂದಿನ ಶಾಸಕರು ಹಾಗೂ ಈಗಿನ ಶಾಸಕರು ನಗರಸಭೆಗೆ ಯಾವುದೇ ವಿಶೇಷ ಅನುದಾನ ತರಲಿಲ್ಲ ಎಂದು ಟೀಕಿಸಿದ ಅವರು, ಇನ್ನಾದರೂ ವಿಶೇಷ ಅನುದಾನ ಕೋರಲು ಸರಕಾರದ ಬಳಿಗೆ ನಿಯೋಗ ಕರೆದೊಯ್ಯಬೇಕು ಎಂದು ಒತ್ತಾಯಿಸಿದರು. ಮತ್ತೊಬ್ಬ ಸದಸ್ಯ ಬಶೀರ್ ಅಹಮ್ಮದ್ ಅವರು ಮಾತನಾಡಿ ನಗರಸಭೆ ಜನರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಮೂಲಭೂತ ಸೌಲಭ್ಯಗಳನ್ನು ನೀಡುತ್ತಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯೆ ಮೇರಿ ವೇಗಸ್, ಎಸ್‍ಡಿಪಿಐ ನಗರಾಧ್ಯಕ್ಷ ಮಹಮ್ಮದ್ ಆಲಿ ಹಾಗೂ ಕಾರ್ಯದರ್ಶಿ ಜಲೀಲ್ ಮಡಿಕೇರಿ ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಸತ್ಯ ಪ್ರಕಾಶ್ ರಚಿತ ‘ಬ್ಲಾಕ್ ಚೈನ್’ ಇಂಗ್ಲೀಷ್ ಕೃತಿ ಬಿಡುಗಡೆ*
Next Article *ಕಲಾ ನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.