
ಮಡಿಕೇರಿ ಅ.25 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಅಂಚಿನ ಮದೆನಾಡಿನ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ, ಯೋಗಪಟು ಕುಮಾರಿ ಸಿಂಚನ ಅವರಿಂದ ಅ.28 ರಂದು ವಿದ್ಯಾಸಂಸ್ಥೆಯಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಗಾಗಿ ಮೂರು ಯೋಗಾಸನಗಳ ಪ್ರದರ್ಶನ ಕಾರ್ಯಕ್ರಮ ನಡೆಯೊಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ಮೈಸೂರು ಮತ್ತು ಕೊಡಗು ಶಾಖೆÉಯ ಕಾರ್ಯದರ್ಶಿಗಳಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ಈ ಕುರಿತು ಮಾಹಿತಿ ನೀಡಿ, ಈಗಾಗಲೆ ಕೊಡಗಿನಲ್ಲಿ ವಿಶ್ವದಾಖಲೆಯ ಎರಡು ಯೋಗ ಪ್ರದರ್ಶನವನ್ನು ಸಿಂಚನ ನೀಡಿದ್ದು, ಇದೀಗ ಮೂರನೇ ಬಾರಿ ವಿಶ್ವ ದಾಖಲೆಯ ಯೋಗ ಪ್ರದರ್ಶನವನ್ನು ನೀಡಲಿದ್ದಾರೆಂದು ತಿಳಿಸಿದರು. ಯೋಗಪಟು ಸಿಂಚನಳ ತಾಯಿ ರೇಣುಕಾ ಅವರು ಮಾತನಾಡಿ, ಈ ಬಾರಿ ಸಿಂಚನ ಖಂಡಪೀಡಾಸನ ಭಂಗಿಯಲ್ಲಿ ಒಂದು ನಿಮಿಷ ಸಮ ಸ್ಥಿತಿಯಲ್ಲಿ ಇರುವ ಮೂಲಕ ವಿಶ್ವದಾಖಲೆಯ ಪ್ರಯತ್ನ ನಡೆಸಲಿದ್ದು, ಧನುರಾಸನದಲ್ಲಿ ಒಂದು ನಿಮಿಷಕ್ಕೆ 15 ಬಾರಿ ಸುತ್ತು ಹೊಡೆಯುವ ಹಾಗೂ ಡಿಂಬಾಸನದಲ್ಲಿ ಒಂದು ನಿಮಿಷಕ್ಕೆ 10 ಬಾರಿ ಸುತ್ತು ಹೊಡೆಯುವ ಯೋಗಾಸನ ಪ್ರದರ್ಶನ ಮಾಡುವ ಮೂಲಕ ವಿಶ್ವದಾಖಲೆ ಮಾಡಲು ಉದ್ದೇಶಿಸಿರುವುದಾಗಿ ಮಾಹಿತಿಯನ್ನಿತ್ತರು. ಸಿಂಚನಳ ಯೋಗ ಪ್ರದರ್ಶನ ಏಷ್ಯಾ ಹೆಡ್ ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್ನ ಮುಖ್ಯ ತೀರ್ಪುಗಾರರಾದ ಡಾ. ಮನೀಶ್ ವೈಶ್ನೋಯಿ ಉಪಸ್ಥಿತಿಯಲ್ಲಿ ನಡೆಯಲಿದೆಯೆಂದು ಮಾಹಿತಿ ನೀಡಿ, ಸಿಂಚನ ಈ ಹಿಂದೆ ‘ಡಿಂಬಾಸನ’ದಲ್ಲಿ 30 ನಿಮಿಷ 5 ಸೆಕೆಂಡ್ಗಳ ಕಾಲ ಸಮಸ್ಥಿತಿಯಲ್ಲಿ ಇರುವ ಮೂಲಕ ವಿಶ್ವದಾಖಲೆ ಮಾಡಿದ್ದಾಳೆÉ. ಅದರ ಪ್ರಮಾಣ ಪತ್ರವನ್ನು ಈ ಸಮಾರಂಭದಲ್ಲಿ ನೀಡಲಿದ್ದಾರೆ. ಇಲ್ಲಿಯವರೆಗೆ ಈಕೆ 9 ವಿಶ್ವ ದಾಖಲೆಯ ಯೋಗ ಪ್ರದರ್ಶನ ನೀಡಿದ್ದು, ಇದರಲ್ಲಿ ಏಳು ವಿಶ್ವದಾಖಲೆಗೆ ಸೇರ್ಪಡೆಯಾಗಿದೆಯೆಂದು ಹೆಮ್ಮೆಯಿಂದ ನುಡಿದರು. ಯೋಗ ಶಿಕ್ಷಕ ಕೆ.ಕೆ.ಮಹೇಶ್ ಕುಮಾರ್ ಮಾತನಾಡಿ, ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಿಂಚನ ಕೊಡಗಿನ ಅಪರೂಪದ ಯೋಗ ಪ್ರತಿಭೆ. ಈಕೆ ಇದೀಗ ಮತ್ತೊಂದು ಯೋಗಾಸನದ ಮೂಲಕ ವಿಶ್ವದಾಖಲೆ ಮಾಡಲು ಮುಂದಾಗಿರುವುದಾಗಿ ತಿಳಿಸಿದರು. :: ಕಾರ್ಯಕ್ರಮ :: ಮದೆನಾಡಿನ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಅ.28 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಹಿಸಲಿದ್ದು, ಕಾರ್ಯಕ್ರಮವನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ಏಷ್ಯಾ ಹೆಡ್ ಗೋಲ್ಡನ್ ಬುಕ್ ಆಫ್ ರೆಕಾರ್ಡ್ನ ಮುಖ್ಯ ತೀರ್ಪುಗಾರರಾದ ಡಾ.ಮನೀಶ್ ವೈಶ್ನೋಯಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯ್ತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜು, ಮಡಿಕೆರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಉಪಸ್ಥಿತರಿರಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯೋಗ ಪಟು ಸಿಂಚನ, ತಂದೆ ಕೀರ್ತಿ ಕುಮಾರ್, ಬಿಜಿಎಸ್ ಶಾಲೆಯ ಆಡಳಿತಾಧಿಕಾರಿ ಸುಧಾಕರ್ ಉಪಸ್ಥಿತರಿದ್ದರು.









