Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *”ಪತ್ತಲೋಧಿ” ದಿನದ ಅಂಗವಾಗಿ ಸಿಎನ್‌ಸಿಯಿಂದ ಮಡಿಕೇರಿ ಕೋಟೆ, ನಾಲ್ನಾಡ್ ಅರಮನೆ ಮತ್ತು ಮುಳ್ಳುಸೋಗೆಯಲ್ಲಿ ಮೀದಿ ಸಮರ್ಪಣೆ*
ಇತ್ತೀಚಿನ ಸುದ್ದಿಗಳು

*”ಪತ್ತಲೋಧಿ” ದಿನದ ಅಂಗವಾಗಿ ಸಿಎನ್‌ಸಿಯಿಂದ ಮಡಿಕೇರಿ ಕೋಟೆ, ನಾಲ್ನಾಡ್ ಅರಮನೆ ಮತ್ತು ಮುಳ್ಳುಸೋಗೆಯಲ್ಲಿ ಮೀದಿ ಸಮರ್ಪಣೆ*

October 26, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.26 : ಕಾವೇರಿ ತುಲಾ ಸಂಕ್ರಮಣದ “ಪತ್ತಲೋಧಿ” ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿ ಕೋಟೆ, ನಾಲ್ನಾಡ್ ಅರಮನೆ ಆವರಣ ಮತ್ತು ಮುಳ್ಳುಸೋಗೆಯ ಕಾವೇರಿ ನದಿಯ ದಡದಲ್ಲಿ ಹುತಾತ್ಮರಾದ ಹಿರಿಯ ಕೊಡವರಿಗೆ ಇಂದು ಮೀದಿ ಸಮರ್ಪಿಸಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪುಷ್ಪನಮನದ ಮೂಲಕ ಅಗಲಿದ ಹಿರಿಯರನ್ನು ಸ್ಮರಿಸಿಕೊಂಡರು. ಕೊಡವ ಜನಾಂಗೀಯ ಬುಡಕಟ್ಟು ಜನಾಂಗದ ಹತ್ಯೆಗಳು ಎರಡು ಶತಮಾನಗಳಿಗೂ ಹೆಚ್ಚು ಕಾಲ ನಿರಂತರವಾಗಿ ನಡೆದಿದೆ. ಷಡ್ಯಂತ್ರದಿಂದ ಪ್ರಾಣ ಕಳೆದುಕೊಂಡ ಅಮಾಯಕ ಹಿರಿಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಅರಸರ ಕಾಲದ ವಿಶ್ವಾಸಘಾತುಕ ಆಡಳಿತಗಾರರಿಂದ ಕೊಡವರ ದುರಂತ ಅಂತ್ಯವಾಗಿದೆ. ಕುಶಾಲನಗರ (ಫ್ರೇಜರ್ ಪೇಟ್) ಬಳಿಯ ಕಾವೇರಿ ನದಿಯ ದಡದಲ್ಲಿರುವ ಐತಿಹಾಸಿಕ ಸ್ಥಳದಲ್ಲಿ 32 ಕ್ಕೂ ಹೆಚ್ಚು ಯುದ್ಧಗಳಲ್ಲಿ ಹೈದರ್ ಅಲಿ ಹಾಗೂ ಟಿಪ್ಪು ಸುಲ್ತಾನನ ಪಡೆಗಳ ವಿರುದ್ಧ ಧೈರ್ಯದಿಂದ ಹೋರಾಡಿದ ವೀರ ಕೊಡವರು ಕೊಡವಲ್ಯಾಂಡ್ ಅನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದರು. ಎರಡು ಶತಮಾನಗಳ ಕಾಲ (1633–1834) ದಬ್ಬಾಳಿಕೆಯ ಆಡಳಿತದ ಪರಿಣಾಮ ಕೋಟೆ ಆವರಣದಲ್ಲಿ ಅಸಂಖ್ಯಾತ ಕೊಡವರು ಹುತಾತ್ಮರಾದರು. ಪಾಡಿನಾಡಿನ ಯವಕಪಾಡಿ ಗ್ರಾಮದ ನಾಲ್ನಾಡ್ ಅರಮನೆಯಲ್ಲಿ ಕೆಳದಿ, ಪಾಲೇರಿ ಆಡಳಿತಗಾರರ ದೌರ್ಜನ್ಯಕ್ಕೆ ಕೊಡವರು ನಲುಗಿ ಹೋದರು. ಕೊಡವರ ಬಲವಂತದ ಅಪಹರಣ, ಚಿತ್ರಹಿಂಸೆ ಮತ್ತು ಮರಣದಂಡನೆಯಂತಹ ಘಟನೆಗಳಿಗೆ ಈ ಐತಿಹಾಸಿಕ ಪ್ರದೇಶಗಳು ಸಾಕ್ಷಿಯಾಗಿವೆ. ಜೀವ ಕಳೆದುಕೊಂಡ ಕೊಡವರಿಗೆ ಶಾಂತಿ ಕೋರಿ ಪ್ರಾರ್ಥಿಸಲಾಯಿತು, ಅಲ್ಲದೆ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರಿಗೆ ಎಸ್‌ಟಿ ಟ್ಯಾಗ್ ಬೇಕೆಂದು ಒತ್ತಾಯಿಸಿ ಸಿಎನ್‌ಸಿ ನಡೆಸುತ್ತಿರುವ ಹೋರಾಟಕ್ಕೆ ಶಕ್ತಿ ತುಂಬುವಂತೆ ಕೋರಲಾಯಿತು ಎಂದು ಎನ್.ಯು.ನಾಚಪ್ಪ ಹೇಳಿದರು. ಕೊಡವರು ಶ್ರೀಮಂತ ಪರಂಪರೆ, ವಿಶಿಷ್ಟ ಆಧ್ಯಾತ್ಮಿಕ ಆಚರಣೆ ಮತ್ತು ಪೂರ್ವಜರ ಗೌರವವನ್ನು ಹೊಂದಿದ್ದಾರೆ. ಪೂರ್ವಜರನ್ನು ಗೌರವಿಸುವುದು ಕೊಡವರ ಆದ್ಯ ಕರ್ತವ್ಯವಾಗಿದೆ. ಅಗಲಿದವರ ಆತ್ಮಗಳಿಗೆ ಮೀದಿ ಸಮರ್ಪಿಸುವುದು ಕೃತಜ್ಞತೆ ಮತ್ತು ಆಧ್ಯಾತ್ಮಿಕ ನಿರಂತರತೆಯನ್ನು ಪುನರುಚ್ಚರಿಸುತ್ತವೆ. ಎಲ್ಲಾ ನೈಸರ್ಗಿಕ ಶಕ್ತಿಗಳನ್ನು ಜೀವಂತ ಘಟಕಗಳಾಗಿ ನೋಡುವ ಕೊಡವರು ಪ್ರಕೃತಿಯೊಂದಿಗೆ ಪವಿತ್ರ ಸಂಪರ್ಕವನ್ನು ಕಾಯ್ದುಕೊಂಡಿದ್ದಾರೆ. ನದಿಗಳು, ವಿಶೇಷವಾಗಿ ದೈವಿಕ ಕಾವೇರಿ, ಪರ್ವತಗಳು, ಪವಿತ್ರ ಕಾಡುಗಳು ಮತ್ತು ಮಂದ್ ಗಳು ಕೊಡವರ ಆರಾಧನೆಯ ಅವಿಭಾಜ್ಯ ಅಂಗವಾಗಿವೆ. ಸಾಂಪ್ರದಾಯಿಕ ತೋಕ್ ಗನ್ ಮತ್ತು ಗೆಜ್ಜೆತಂಡ್ ಕೊಡವರ ವಿಶಿಷ್ಟ ಪರಂಪರೆಯನ್ನು ಸಂಕೇತಿಸುತ್ತದೆ. ಪವಿತ್ರ “ಪತ್ತಲೋಧಿ” ದಿನದಂದು ಕೊಡವ ಪರಂಪರೆಯನ್ನು ಕಾಪಾಡಿದ ಕೊಡವ ಪೂರ್ವಜರು, ಯೋಧರು ಹಾಗೂ ಬಲಿಪಶುಗಳನ್ನು ಸಿಎನ್‌ಸಿ ಭಕ್ತಿಪೂರ್ವಕವಾಗಿ ಸ್ಮರಿಸಿಕೊಳ್ಳುತ್ತದೆ ಎಂದು ವಿವರಿಸಿದರು. 2026-27 ರಲ್ಲಿ ನಡೆಯುವ ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರ ಸಾಂವಿಧಾನಿಕ ಮಾನ್ಯತೆ ಮತ್ತು ಸಂರಕ್ಷಣೆಗಾಗಿ ಕೊಡವರಿಗೆ ಪ್ರತ್ಯೇಕ ಕಾಲಂ ಮತ್ತು ಕೋಡ್ ನ್ನು ಅಳವಡಿಸಬೇಕು ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು.
ಚಂಬಂಡ ಜನತ್, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ತೆನ್ನಿರ ಮೈನಾ, ನಂದಿನೆರವಂಡ ಬೋಪಣ್ಣ, ಪುಟ್ಟಿಚಂಡ ಡಾನ್ ದೇವಯ್ಯ, ಅಪ್ಪಾರಂಡ ವಿಜು, ಅಪ್ಪಾರಂಡ ಪ್ರಸಾದ್, ಅಪ್ಪಾರಂಡ ವಿವೇಕ್, ಅಪ್ಪಾರಂಡ ಪ್ರಕಾಶ್, ಅರೆಯಡ ಸಾವನ್ ಕೊಡವ, ಕೂಪದಿರ ಮೊಣ್ಣಪ್ಪ, ಕೂಪದಿರ ಶ್ರೀಮತಿ ಮೊಣ್ಣಪ್ಪ ಹಾಗೂ ಮೇಕೇರಿರ ಬಬ್ಬು ಅವರುಗಳು ಹಾಜರಿದ್ದು ಅಗಲಿದ ಹಿರಿಯರಿಗೆ ಗೌರವ ಅರ್ಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಬುದ್ಧ, ಬಸವ, ಡಾ.ಅಂಬೇಡ್ಕರ್ ಚಿಂತನೆ ಸಾಕಾರಗೊಳ್ಳಲು ಪ್ರತಿಯೊಬ್ಬರು ವಿದ್ಯಾವಂತರಾಗಬೇಕು : ಕೊಡಗು ವಿವಿ ಕುಲಪತಿ ಅಶೋಕ ಸಂಗಪ್ಪ ಆಲೂರ ಕರೆ*
Next Article *ಮಾನವ ಬಂಧುತ್ವ ವೇದಿಕೆಯಿಂದ ಕೊಡಗು ಎಸ್‌ಪಿಗೆ ದೂರು*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.