Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಕಾವೇರಿ ಜಾಗೃತಿ ರಥಯಾತ್ರೆ : 178ನೇ ವಿಶೇಷ ಮಹಾಆರತಿ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಕಾವೇರಿ ಜಾಗೃತಿ ರಥಯಾತ್ರೆ : 178ನೇ ವಿಶೇಷ ಮಹಾಆರತಿ*

October 27, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ  ಅ.27 NEWS DESK : ನಾಗಾಲೋಟದ ಅಭಿವೃದ್ಧಿಯ ನಡುವೆ ಪರಿಸರದಲ್ಲಿ ಏರುಪೇರು ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರು ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಮಾರ್ಗದರ್ಶಕರಾದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ಕುಶಾಲನಗರದಲ್ಲಿ ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಮತ್ತು 178ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವ್ಯಾಪಾರ ವಹಿವಾಟು ಮಾಡುವ ಕಾಯಕದ ಸಂದರ್ಭ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಉಂಟಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾಗಿದೆ ಎಂದರು. ನೆಮ್ಮದಿ ಮತ್ತು ಆರೋಗ್ಯಕರ ಬದುಕಿಗೆ ನೀರಿನ ಅವಲಂಬನೆಯ ಅಗತ್ಯತೆ ಇದ್ದು ಯಾವುದೇ ಸಂದರ್ಭ ಜಲಮೂಲಗಳು ನಾಶವಾಗದಂತೆ ಎಚ್ಚರ ವಹಿಸಬೇಕು. ಯೋಜನೆಗಳು ಅಭಿವೃದ್ಧಿ ವೈಜ್ಞಾನಿಕವಾಗಿ ನಡೆಯುವ ಮೂಲಕ ಪರಿಸರ ಜಾಗೃತಿ ಅಗತ್ಯ ಎಂದು ಸ್ವಾಮೀಜಿ ಹೇಳಿದರು.
ಮುಂದಿನ ಜನಾಂಗಕ್ಕೆ ಉತ್ತಮ ಪರಿಸರವನ್ನು ಹಸ್ತಾಂತರ ಮಾಡುವ ಕೆಲಸ ಎಲ್ಲರದ್ದಾಗಿದೆ ಎಂದರು. ಸ್ವಚ್ಛ ಕಾವೇರಿಗಾಗಿ ತಲಕಾವೇರಿ ಕ್ಷೇತ್ರದಿಂದ ಪೂಂಪ್ ಹಾರ್ ತನಕ ಕಾವೇರಿ ಜಾಗೃತಿ ರಥಯಾತ್ರೆ ಹಮ್ಮಿಕೊಂಡಿರುವ ಅಖಿಲ ಭಾರತೀಯ ಸನ್ಯಾಸಿ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನದ ಯಾತ್ರೆಗೆ ಶುಭ ಕೋರಿದ ಸ್ವಾಮೀಜಿಗಳು ನಿರಂತರ ಕಾರ್ಯಕ್ರಮಗಳ ಮೂಲಕ ಸ್ವಚ್ಛ ಕಾವೇರಿಯನ್ನು ಮತ್ತೆ ಕಾಣಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಪಿ ಸಹಿದರು ಮಾತನಾಡಿ ಅಭಿವೃದ್ಧಿಯ ನಡುವೆ ಪ್ರಕೃತಿಯ ಬಗ್ಗೆ ಕಾಳಜಿ ಮರೆಯುವಂತಿಲ್ಲ ನದಿಗಳೊಂದಿಗೆ ಭಾವನಾತ್ಮಕ ಸಂಬಂಧ ಹೊಂದುವಂತಾಗಬೇಕು ಬದುಕಿಗೆ ಆಶ್ರಯ ಆಧಾರವಾಗಿರುವ ನದಿಗಳನ್ನು ಆರಾಧಿಸುವ ಮೂಲಕ ಸಂರಕ್ಷಣೆ ಸಾಧ್ಯ ಎಂದು ಅವರು ಹೇಳಿದರು. ನದಿ ದಂಡೆಗಳಲ್ಲಿ ನಾಗರೀಕತೆ ಉದಯವಾಗಿದ್ದು ಯಾವುದೇ ಸಂದರ್ಭ ನದಿ ಜಲಮೂಲಗಳಿಗೆ ಹಾನಿಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು. ಕಳೆದ ಹಲವು ವರ್ಷಗಳಿಂದ ನದಿ ಸ್ವಚ್ಛತೆಯ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸುತ್ತಿರುವ ಕಾವೇರಿ ಮಹಾ ಆರತಿ ಬಳಗ ಮತ್ತು ಸ್ವಚ್ಛ ಕಾವೇರಿಗಾಗಿ ನಡೆಯುತ್ತಿರುವ ಕಾವೇರಿ ಜಾಗೃತಿ ರಥಯಾತ್ರೆಯ ಬಗ್ಗೆ ಶಶಿಧರ್ ಶ್ಲಾಘನೆ ವ್ಯಕ್ತಪಡಿಸಿದರು. ಅಖಿಲ ಭಾರತೀಯ ಸನ್ಯಾಸಿ ಸಂಘದ ಪ್ರಮುಖರಾದ ಸ್ವಾಮಿ ಶಿವರಾಮನಂದ ಅವರು ಕಳೆದ 15 ವರ್ಷಗಳ ಕಾಲದಿಂದ ನಿರಂತರವಾಗಿ ಭಾರತದ ನದಿಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಕಾವೇರಿ ನದಿ ಸಂರಕ್ಷಣೆಗಾಗಿ ಕಳೆದ 15 ವರ್ಷಗಳಿಂದ ತಲಕಾವೇರಿಯಿಂದ ಕಾವೇರಿ ಜಾಗೃತಿ ರಥಯಾತ್ರೆ ನಡೆಯುತ್ತಿದೆ ಎಂದು ಹೇಳಿದರು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಲೀಲಾವತಿ ಫಾರಂಪರಿಕ ವೈದ್ಯರಾದ ಸುಮನ ಮಳಲಗದ್ದೆ, ಸ್ವಚ್ಛತಾ ಆಂದೋಲನ ಹಾಸನ ಜಿಲ್ಲಾ ಸಂಚಾಲಕರಾದ ಎಂ ಎನ್ ಕುಮಾರಸ್ವಾಮಿ, ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ ಆರ್ ನಾಗೇಂದ್ರ ಪ್ರಸಾದ್, ಶ್ರೀ ಗಣಪತಿ ದೇವಾಲಯ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು, ಮಹಿಳಾ ಭಜನಾ ಮಂಡಳಿಯ ಪ್ರಮುಖರಾದ ಪದ್ಮ ಪುರುಷೋತ್ತಮ್ ಅವರುಗಳು ಪಾಲ್ಗೊಂಡು ಯಾತ್ರೆಗೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ಕುಶಾಲನಗರ ಭಜನಾ ಮಂಡಳಿ ಸದಸ್ಯರಿಂದ ಕುಂಕುಮಾರ್ಚನೆ, ಸಹಸ್ರ ಲಲಿತ ನಾಮ ಸಂಕೀರ್ತನೆ ನಡೆಯಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರ ನೇತೃತ್ವದಲ್ಲಿ ಕಾವೇರಿಗೆ 178 ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮ ಮತ್ತು ಕಾವೇರಿ ಮೂರ್ತಿಗೆ ಅಷ್ಟಾಭಿಷೇಕ ನಡೆಯಿತು. ಈ ಸಂದರ್ಭ ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ನಮಾಮಿ ಕಾವೇರಿ ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಆರತಿ ಬಳಗದ ಪ್ರಮುಖರಾದ ಧರಣಿ ಸೋಮಯ್ಯ, ಚೈತನ್ಯ ಸಿ ಮೋಹನ್,ಬಿ ಜೆ ಅಣ್ಣಯ್ಯ, ಕೊಡಗನ ಹರ್ಷ, ಪುರಸಭೆ ಸದಸ್ಯರಾದ ಡಿ ಕೆ ತಿಮ್ಮಪ್ಪ, ವಿ ಎಸ್ ಆನಂದಕುಮಾರ್, ಮಾಜಿ ಸೈನಿಕರ ಸಂಘದ ಎಳ್ತಂಡ ರಂಜಿತ್, ಅಖಿಲ ಭಾರತ ಸನ್ಯಾಸಿ ಸಂಘದ ಪ್ರಮುಖರು, ಮಹಿಳಾ ಭಜನಾ ಮಂಡಳಿ ಮತ್ತು ಕಾವೇರಿ ಆರತಿ ಬಳಗ ಸದಸ್ಯರು ಇದ್ದರು.

 

 

Share. Facebook Twitter Pinterest LinkedIn Tumblr Email WhatsApp
Previous Article*ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ : ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಲು ಬೇಬಿಮ್ಯಾಥ್ಯೂ ಕರೆ*
Next Article *ನ.1 ರಂದು ಸೋಮವಾರಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.