Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ದುಡಿಯುವ ಮಹಿಳೆಯರ ಜಿಲ್ಲಾ ಸಮಾವೇಶ : ಮಹಿಳೆಯರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ : ಹೆಚ್.ಎಸ್.ಸುನಂದ ಸಲಹೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ದುಡಿಯುವ ಮಹಿಳೆಯರ ಜಿಲ್ಲಾ ಸಮಾವೇಶ : ಮಹಿಳೆಯರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ : ಹೆಚ್.ಎಸ್.ಸುನಂದ ಸಲಹೆ*

October 27, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಅ.27 NEWS DESK : ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದ್ದಾರೆ. ಶಿಕ್ಷಣ ಸಾಧನೆಯತ್ತಲೂ ಹೆಚ್ಚು ಸಾಗಬೇಕಾಗಿದೆ. ಆಗ ಮಾತ್ರ ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ, ದೌರ್ಜನ್ಯಗಳನ್ನು ಪ್ರಶ್ನಿಸಲು ಸಾಧ್ಯ ಎಂದು ದುಡಿಯುವ ಮಹಿಳೆಯರ ರಾಜ್ಯ ಸಂಚಾಲಕಿ ಹೆಚ್.ಎಸ್. ಸುನಂದ ಅಭಿಪ್ರಾಯಪಟ್ಟರು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿ ವತಿಯಿಂದ ವಿರಾಜಪೇಟೆ ಶಾಖೆಯ ಕಚೇರಿ ಸಭಾಂಗಣದಲ್ಲಿ ನಡೆದ ‘ದುಡಿಯುವ ಮಹಿಳೆಯರ ಕೊಡಗು ಜಿಲ್ಲಾ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಬೀದಿಯಲ್ಲಿ ಕಸ ತೆಗೆಯುವ, ತನ್ನದಲ್ಲದ ಮನೆಗಳಲ್ಲಿ ಕಸಮುಸುರೆ ಸ್ವಚ್ಛತೆ ಮಾಡುವ, ತನ್ನದಲ್ಲದ ಮಕ್ಕಳಿಗೆ ಆಹಾರ ಆರೋಗ್ಯ ಶಿಕ್ಷಣಕ್ಕೆ ಕೆಲಸ ಮಾಡುವ, ತನ್ನದಲ್ಲದ ಮನೆಯನ್ನು ಕಟ್ಟುವಲ್ಲಿ ಶ್ರಮ ಹಾಕುವ, ಬೀದಿಬದಿಯಲ್ಲಿ ದುಡಿದು ತನ್ನದಲ್ಲದ ಖಜಾನೆಗೆ ಲಾಭ ಮಾಡಿಕೊಡುವ ತನ್ನದಲ್ಲದ ಬದುಕನ್ನು ಬೇರೆಯವರಿಗೆ ಕಟ್ಟಿಕೊಡುವಲ್ಲೇ ನಿರತರಾದವರನ್ನು ಒಳಗೊಂಡು, ದೇಶದ ರಾಷ್ಟ್ರಾಧ್ಯಕ್ಷರವರೆಗೆ, ವ್ಯೋಮಕ್ಕೆ ಜಿಗಿದು ವಾಪಸ್ ಬಂದ ಆ ಹೆಣ್ಮಗಳ ತನಕವೂ ಎಲ್ಲರೂ ದುಡಿಯುವ ಮಹಿಳೆಯರೇ ಆಗಿದ್ದಾರೆ. ಇವರಲ್ಲಿ ಬಹುತೇಕರು ತಮ್ಮ ಸ್ವಂತ ಬದುಕನ್ನು ಪಣಕ್ಕಿಟ್ಟೇ ಕೆಲಸ ಮಾಡುವವರು. ಕೆಲಸಕ್ಕೆ ಕೂಲಿ ಪಡೆದರೂ ಆದಾಯದ ಪಾಲು ಬಳಸಲು ಹಕ್ಕು ಇಲ್ಲದವಳು, ಇಂದು ಅವರ ಹಕ್ಕಿಗಾಗಿ ಹೋರಾಡಬೇಕಿದೆಯೆಂದು ಮಾರ್ಮಿಕವಾಗಿ ನುಡಿದರು. ದುಡಿಯುವ ಸ್ಥಳಗಳಲ್ಲಿ ಉಸಿರುಗಟ್ಟಿಸುವ ವಾತಾವರಣ ಖಂಡಿಸಿ, ದುಡಿಮೆಯ ಕಾಲಾವಧಿ ದಿನಕ್ಕೆ 8 ಗಂಟೆಗೆ ನಿಗದಿಪಡಿಸಬೇಕೆಂದು ಆಗ್ರಹಿಸಿದರು. ಸಮಾನ ವೇತನಕ್ಕಾಗಿ, ಹೆರಿಗೆಯ ರಜೆ ಹಕ್ಕಿಗಾಗಿ ಧ್ವನಿ ಎತ್ತಿದರು. ಮಹಿಳೆಯರು ದುಡಿಯುವ ಸ್ಥಳದಲ್ಲಿನ ತಾರತಮ್ಯ ಮತ್ತು ದೌರ್ಜನ್ಯ, ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ, ಅಭಿರುಚಿ, ಹೆಣ್ಣು ಭ್ರೂಣಹತ್ಯೆ ಮೊದಲಾದ ವಿಚಾರಗಳ ಕುರಿತು ಅವರು ಬೆಳಕು ಚೆಲ್ಲಿದರು. ದೇಶದ ಸಂವಿಧಾನ, ಕಾನೂನು, ಕೋರ್ಟ್ ತೀರ್ಪುಗಳು ಇದಾಗ್ಯೂ ಪ್ರಭುತ್ವವೇ ನಿಂತು ಮಹಿಳಾ ಶ್ರಮ ಶಕ್ತಿಗೆ ಮೌಲ್ಯ ಕಟ್ಟಿಕೊಡುತ್ತಿಲ್ಲ, ಹೆಣ್ಣುಮಕ್ಕಳಿಗೆ ಅಪಾಯಕಾರಿ ಸ್ಥಳಗಳಲ್ಲಿ ರಾತ್ರಿಪಾಳಿ ಕೆಲಸ ಹಾಕುತ್ತಿದೆ. ಕಾರ್ಮಿಕ ಕಾ0iÉ್ದುಗಳನ್ನೆಲ್ಲ ತೆಗೆದು ಕಾರ್ಮಿಕ ಸಂಹಿತೆಗಳನ್ನಾಗಿ ಮಾಡಿ ಹಕ್ಕುಗಳನ್ನೆಲ್ಲ ಕಸಿದು ನವ ಉದಾರವಾದಿ ಆರ್ಥಿಕ ನೀತಿಗಳಿಗೆ ಬಲಿ ಕೊಡಲಾಗುತ್ತಿದೆ. ಮಹಿಳೆಯರ ಜೀವಕ್ಕೆ ಬೆಲೆ ಕೊಡದ ಸಮಾಜವನ್ನು ಎದುರು ಹಾಕಿಕೊಂಡು ಸಮಾನತೆಯ ಆಶಯಗಳ ಈಡೇರಿಕೆಗೆ ಹೋರಾಡುತ್ತಲೇ ನಮ್ಮ ತನವನ್ನು ಕಾಪಿಟ್ಟುಕೊಳ್ಳಬೇಕಿದೆ ಎಂದರು. ಮಹಿಳಾ ಕಾರ್ಮಿಕರ ಶೋಷಣಾತ್ಮಕ ಕೆಲಸದ ಪರಿಸ್ಥಿತಿ ವಿರುದ್ಧ ಎಲ್ಲಾ ಕಾರ್ಮಿಕರಂತೆ ತಮಗೂ ನಾಗರಿಕ ಹಕ್ಕುಗಳು ಬೇಕು, 8 ಗಂಟೆಗಳ ಕೆಲಸ ಮತ್ತು ಸಮಾನ ಕನಿಷ್ಟ ವೇತನ, ಮತದಾನದ ಹಕ್ಕುಗಳನ್ನು ಪ್ರತಿಪಾದಿಸಲು ನಡೆಸಲಾದ ಹಕ್ಕೊತ್ತಾಯಗಳಲ್ಲಿ ಅಂತರ್ಗತವಾದ ಅನೇಕ ಬೇಡಿಕೆಗಳನ್ನು ಈಗಲೂ ಪಡೆಯಲು ಬೀದಿಯಲ್ಲೇ ಇದ್ದೇವೆ. ಕೆಲವನ್ನು ಪಡೆದಿದ್ದೇವೆ. ಹಲವನ್ನು ಪಡೆಯಲು ಮುಂದೆ ಸಾಗುತ್ತಿದ್ದೇವೆ. ಆರ್ಥಿಕವಾಗಿ ನಿರ್ಬಲಳು ಎಂದು ದೂಷಿಸುತ್ತಲೇ ಮಹಿಳೆಯರಿಂದಲೇ ಬಹುಪಾಲು ಕೆಲಸ ಮಾಡಿಸುವ ವ್ಯವಸ್ಥೆಯ ರಾಜಕಾರಣ ಬದಲಾಗಬೇಕಿದೆ ಎಂದರು. ಸಿಐಟಿಯುನ ಜಿಲ್ಲಾ ಅಧ್ಯಕ್ಷ ಪಿ.ಆರ್ ಭರತ್ ಮಾತನಾಡಿ ದುಡಿಯುವ ಮಹಿಳೆ ಎಂದರೆ ಯಾರು, ಯಾಕೆ ಮಹಿಳೆಯರ ದುಡಿಮೆಯನ್ನು ಪ್ರಗತಿಯ ಮಾನದಂಡದಲ್ಲಿ ಪರಿಗಣಿಸುತ್ತಿಲ್ಲ. ಮಹಿಳೆಯರ ದುಡಿಮೆ, ಶ್ರಮ ಪರಿಗಣನೆ ಆಗುತ್ತಿಲ್ಲ. ಕೆಲಸ ಮಾಡುವ ವಿಭಿನ್ನ ವಲಯಗಳಾದ ಉತ್ಪಾದನೆ, ಕೃಷಿ, ಸೇವಾ ವಲಯಗಳಲ್ಲಿ ಮಹಿಳಾ ಶ್ರಮ ಶಕ್ತಿಗೆ ಅನೇಕ ಅಡೆತಡೆಗಳಿವೆ. ಇವೇ ತಾರತಮ್ಯಗಳು ಮತ್ತು ಅವುಗಳೇ ದೌರ್ಜನ್ಯಕ್ಕೂ ಕಾರಣಗಳಾಗಿವೆ. ಉದ್ಯೋಗ ರಕ್ಷಣೆ ಇಲ್ಲದಿರುವುದು, ಸಾಮಾಜಿಕ ಸುರಕ್ಷೆ, ಹೆರಿಗೆ ಸೌಲಭ್ಯದಿಂದ ವಂಚಿಸುತ್ತಿರುವುದು ಹೀಗೆ ಇವೆಲ್ಲ ಮಹಿಳಾ ಶ್ರಮ ಶಕ್ತಿಗೆ ಇರುವ ಅಡೆತಡೆಗಳು, ಇಡೀ ಸಮಾಜದ ಬದಲಾವಣೆಗೆ ಪ್ರಜ್ಞಾಪೂರ್ವಕ ಹೋರಾಟ ಮಾಡದೇ ಪ್ರತ್ಯೇಕವಾಗಿ ಮಹಿಳೆಯರ ಮೇಲಿನ ಯಾವುದೇ ಸ್ವರೂಪದ ದಾಳಿ, ದಬ್ಬಾಳಿಕೆ, ದೌರ್ಜನ್ಯ, ತಾರತಮ್ಯ ನಿವಾರಿಸಲು, ಶೋಷಣೆ ಹೋಗಲಾಡಿಸಲು, ಸಮಾನತೆಯ ಆಶಯ ಸಾಕಾರಗೊಂಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಸಂಘಟನೆ ನಿರಂತರ ಹೋರಾಟ ನಡೆಸುತ್ತಾ ಬಂದಿದೆ ಎಂದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸುಮಿತ್ರ, ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ ದುಡಿಯುವ ಮಹಿಳೆಯರ ಗೋಳು ಒಂದೆರಡಲ್ಲ. ಒಟ್ಟಾರೆ ಸಂಘಟಿತ ಅಸಂಘಟಿತ ವಲಯ, ಸೇವಾ ವಲಯಗಳ ಕೆಲಸಗಳಲ್ಲಿ ಮಹಿಳೆಯರನ್ನು ದುಡಿಸಿಕೊಳ್ಳಲಾಗುತ್ತಿದೆ. ದುಡಿಮೆಯಲ್ಲಿ ಖಾಯಂ ಸ್ವರೂಪದ, ಕನಿಷ್ಟ ಕೂಲಿ ಕಾನೂನಿನಡಿ ಬರುವ, ಕೆಲಸದ ಭದ್ರತೆ, ವೇತನ, ಪಿಂಚಣಿ, ರಜೆ ಸೌಲಭ್ಯ ಇತ್ಯಾದಿ. ಮಹಿಳೆಯರ ಕೆಲಸಗಳನ್ನೇ ಗೌಣವಾಗಿಸಿ ಅವರನ್ನು ಅದೃಶ್ಯ ಕಾರ್ಮಿಕರನ್ನಾಗಿಸಲಾಗುತ್ತಿದೆ. ಕೆಲಸದ ಸ್ಥಳಗಳಲ್ಲಿ ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮವಹಿಸಬೇಕು. ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಹಕ್ಕುಗಳ ರಕ್ಷಣೆಗೆ ಇರುವ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದರು. ಈ ಸಂದರ್ಭ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಂಚಾಲಕಿ ಪದ್ಮಿನಿ, ಬಿಸಿಯೂಟ ನೌಕರರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಸುಮ, ಆದಿವಾಸಿ ಸಂಘಟನೆಯ ಜಿಲ್ಲಾ ಮುಖಂಡರಾದ ಪ್ರೇಮ, ಕಾಫಿ ಕ್ಯೂರಿಂಗ್ ವಕ್ರ್ಸ್ ಜಿಲ್ಲಾಧ್ಯಕ್ಷ ಮಂಜು ಹಾಗೂ ಮುಖಂಡರಾದ ಪುಷ್ಪ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ವೇದಿಕೆಯಲ್ಲಿದ್ದರು. ಸಮಾವೇಶದಲ್ಲಿ ವಿವಿಧ ಸಂಘಟನೆಗಳ ಮಹಿಳಾ ಪ್ರಮುಖರು ಪಾಲ್ಗೊಂಡಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಾಸಕ್ಕೆ ಸಹಕಾರಿ : ದೇಚಮ್ಮ ಕಾಳಪ್ಪ*   
Next Article *ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ : ವಿಧಾನ ಪರಿಷತ್‌ ಸದಸ್ಯ ಕೆ.ಶಿವಕುಮಾರ್‌ ಘೋಷಣೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.