Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರದ್ಧಾಂಜಲಿಗಾಗಿ ಕಾಯುತ್ತಿರುವ ಶ್ರದ್ಧಾಂಜಲಿ ವಾಹನ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
ಇತ್ತೀಚಿನ ಸುದ್ದಿಗಳು

*ಶ್ರದ್ಧಾಂಜಲಿಗಾಗಿ ಕಾಯುತ್ತಿರುವ ಶ್ರದ್ಧಾಂಜಲಿ ವಾಹನ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

October 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.27 NEWS DESK : ಮೃತದೇಹಗಳನ್ನು ಉಚಿತವಾಗಿ ಕೊಂಡೊಯ್ಯಲು ಬಡವರಿಗೆ ಅನುಕೂಲವಾಗಲಿ ಎಂದು ಸರಕಾರ ಕೊಡಗು ಜಿಲ್ಲೆಗೆ ನೀಡಿದ್ದ ‘ಶ್ರದ್ಧಾಂಜಲಿ’ ವಾಹನ ಇದೀಗ ಸ್ವತ: ಶ್ರದ್ಧಾಂಜಲಿಗಾಗಿ ಕಾಯುತ್ತಿರುವ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಂಬ್ಯುಲೆನ್ಸ್ ಗಳಿಗೆ ಹಣ ನೀಡಿ ಶವಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಬಡವರ ಉಚಿತ ಸೇವೆಗಾಗಿ 2018 ರಲ್ಲಿ ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಆರೋಗ್ಯ ಇಲಾಖೆ ಮೂಲಕ ‘ಶ್ರದ್ಧಾಂಜಲಿ’ ವಾಹನವನ್ನು ನೀಡಲಾಯಿತು. ಈ ಯೋಜನೆಯಡಿ ಕೊಡಗು ಜಿಲ್ಲೆಗೂ ವಾಹನ ಬಂದಿದ್ದು, ಈಗಾಗಲೇ ಏಳು ವರ್ಷಗಳನ್ನು ಪೂರೈಸಿದೆ. ಆದರೆ ‘ಶ್ರದ್ಧಾಂಜಲಿ’ ವಾಹನದ ಸ್ಥಿತಿ ಆ ಸರಕಾರಕ್ಕೇ ಪ್ರೀತಿ ಎನ್ನುವಂತ್ತಿದೆ ಎಂದು ಟೀಕಿಸಿದ್ದಾರೆ. ಶ್ರದ್ಧಾಂಜಲಿ ವಾಹನ ದುರಸ್ತಿಗೀಡಾಗಿ ಮಂಗಳೂರು ವರ್ಕ್‍ಶಾಪ್ ಸೇರಿ ಹಲವು ದಿನಗಳೇ ಕಳೆದಿದೆ. ಜಿಲ್ಲಾಸ್ಪತ್ರೆಗೆ ಬರುವ ಬಡವರು ಮೃತದೇಹಗಳನ್ನು ಸ್ಥಳಾಂತರಿಸಲು ಆಂಬ್ಯುಲೆನ್ಸ್ ಗಳಿಗೆ ದುಬಾರಿ ಹಣ ನೀಡಲು ಸಾಧ್ಯವಾಗದೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇತ್ತೀಚೆಗೆ ಗೋಣಿಕೊಪ್ಪದ ಬಡ ಕುಟುಂಬವೊಂದು ತಮ್ಮ ಮಗುವಿನ ಮೃತದೇಹವನ್ನು ಕೊಂಡೊಯ್ಯಲು ಪರದಾಡಿದ ಉದಾಹರಣೆ ಇದೆ. ಮಡಿಕೇರಿಯ ಜಿಲ್ಲಾಸ್ಪತ್ರೆಗೆ 2018 ರಲ್ಲಿ ಹಾಸನ ಜಿಲ್ಲೆಯ 108 ವಾಹನವನ್ನು ‘ಶ್ರದ್ಧಾಂಜಲಿ’ ವಾಹನವನ್ನಾಗಿ ಪರಿವರ್ತಿಸಿ ನೀಡಲಾಗಿದೆ. ಇದು 2014 ರಲ್ಲಿ ಖರೀದಿಸಿದ ವಾಹನವಾಗಿದ್ದು, ಬಹುತೇಕ ಸಂಚಾರದ ಗುಣಮಟ್ಟವನ್ನು ಕಳೆದುಕೊಂಡಿದೆ. ಬೆಟ್ಟಗುಡ್ಡಗಳಿಂದ ಕೂಡಿರುವ ಮಳೆ ಪ್ರದೇಶ ಕೊಡಗು ಜಿಲ್ಲೆಗೆ ಈ ರೀತಿಯ ಯೋಗ್ಯವಲ್ಲದ ವಾಹನವನ್ನು ನೀಡಿರುವುದು ಸರಿಯಾದ ಕ್ರಮವಲ್ಲ. ಇದೀಗ ‘ಶ್ರದ್ಧಾಂಜಲಿ’ ವಾಹನ ಹೀನಾಯ ಸ್ಥಿತಿಯಲ್ಲಿದ್ದು, ತಾತ್ಕಾಲಿಕ ದುರಸ್ತಿಯಿಂದ ಯಾವುದೇ ಪ್ರಯೋಜವಿಲ್ಲ ಎಂದು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಬಹುಮತದಿಂದ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಪ್ರತಿ ಬಜೆಟ್ ನಲ್ಲೂ ಕೊಡಗು ಜಿಲ್ಲೆಯ ಆಸ್ಪತ್ರೆಗಳ ಉನ್ನತೀಕರಣ ಬಗ್ಗೆ ಭರವಸೆ ನೀಡುತ್ತಿದೆ. ಆದರೆ ಕನಿಷ್ಠ ಬಡವರಿಗಾಗಿ ನೂತನ ‘ಶ್ರದ್ಧಾಂಜಲಿ’ ವಾಹನವನ್ನು ನೀಡಲಾಗದ ದುಸ್ಥಿತಿಯಲ್ಲಿ ಸರಕಾರವಿದೆ ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ತಕ್ಷಣ ನೂತನ ವಾಹನದ ವ್ಯವಸ್ಥೆಯನ್ನು ಮಾಡಬೇಕು ಎಂದು ಒತ್ತಾಯಿಸಿರುವ ಅವರು, ಈ ಬೇಡಿಕೆಯ ಕುರಿತು ನಿರ್ಲಕ್ಷ್ಯ ವಹಿಸಿದರೆ ಬಡವರ ಪರವಾಗಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

   

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ : ಇಂದಿರಾನಗರದ ನಿವಾಸಿಗಳಿಂದ ಸ್ವಚ್ಛತಾ ಶ್ರಮದಾನ*
Next Article *ಶ್ರೀಮಂಗಲದಲ್ಲಿ ಸಿಎನ್‍ಸಿ ಕೊಡವ ಜನಜಾಗೃತಿ ಮಾನವ ಸರಪಳಿ : ಸಂವಿಧಾನದಿಂದ ಮಾತ್ರ ಕೊಡವರ ರಕ್ಷಣೆ ಸಾಧ್ಯ : ಎನ್.ಯು.ನಾಚ್ಚಪ್ಪ ಪ್ರತಿಪಾದನೆ : ಸಿಎನ್‍ಸಿ ಹೋರಾಟದ ಮೇಲೆ ವಿಶ್ವಾಸವಿಡಲು ಕರೆ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.