Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ ವಿಧಿಸಲಾಗಿದೆ : ವಿ.ಎಸ್.ಉಗ್ರಪ್ಪ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ ವಿಧಿಸಲಾಗಿದೆ : ವಿ.ಎಸ್.ಉಗ್ರಪ್ಪ*

ಅಕ್ಟೋಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಅ.29 NEWS DESK :  ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, “ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ, 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ. ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ/ಕಾಲೇಜುಗಳಲ್ಲಿ 100 ಮೀ. ವ್ಯಾಪ್ತಿಯಲ್ಲಿ 2470 ಜನರು ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿದವರಿಗೆÉ ದಂಡ ವಿಧಿಸಲಾಗಿದೆ. ಇದರಿಂದಾಗಿ ರೂ. 45 ಲಕ್ಷ ಪ್ರತಿ ವರ್ಷ ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದರು. 21 ವರ್ಷದೊಳಗಿನ ಯುವಜನರನ್ನು ಧೂಮಪಾನ, ಮಧ್ಯಪಾನ, ತಂಬಾಕು ಸೇವನೆ, ಡ್ರಗ್ಸ್ ಸೇವೆಯಂತಹ ಮಾದಕ ವಸ್ತುಗಳ ಸೇವನೆಯಿಂದ ವ್ಯಸನ ಮುಕ್ತರನ್ನಾಗಿಸಲು ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರಗಳ ಮೂಲಕ ಏಪ್ರಿಲ್ ನಿಂದ ಸೆಪ್ಟೆಂಬರ್-2025ರವರೆಗೆ ಸುಮಾರು 1 ಲಕ್ಷ ಯುವಜನರಿಗೆ ಸಮಾಲೋಚನೆಯನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಮತ್ತು ನಿಮಾನ್ಸ್ ಸಹಯೋಗದಲ್ಲಿ ಟೆಲಿಮಾನಸ್ 14416 ಸಹಾಯವಾಣಿಯನ್ನು ತೆರೆಯಲಾಗಿದೆ. ಈ ಸಹಾಯವಾಣಿ ಮೂಲಕ ಮಾದಕ ವ್ಯಸನ ಪೀಡಿತ ಮಕ್ಕಳ ಮುಂದಿನ ಭವಿಷ್ಯವನ್ನು ಈ ಸುಧಾರಿಸಲು ಅಗತ್ಯ ಸಹಾಯ ಮತ್ತು ಸಮಾಲೋಚನೆಯನ್ನು ಪಡೆಯಬಹುದಾಗಿದೆ. ದೃಶ್ಯ ಮಾಧ್ಯಮಗಳು ಅತ್ಯಾಚಾರ, ಮಹಿಳಾ ದೌರ್ಜನ್ಯ ಆತ್ಮಹತ್ಯೆ ಮತ್ತು ಇತರ ಪ್ರಕರಣಗಳನ್ನು ವೈಭವೀಕರಿಸಿ ಭಯಗೊಳ್ಳುವಂತೆ ಪ್ರಸಾರ ಮಾಡುವುದನ್ನು ನಿಯಂತ್ರಿಸಬೇಕು. ಪ್ರೆಸ್ ಕೌನ್ಸಿಲ್ ಮಾರ್ಗಸೂಚಿಗಳನ್ನು ದೃಶ್ಯ ಮಾಧ್ಯಮಗಳು ಅಳವಡಿಸಿಕೊಳ್ಳಬೇಕು. ಯಾರು ಈ ರೀತಿಯ ಪ್ರಕರಣಳಿಗೆ ಪ್ರಚಾರ ನೀಡುತ್ತಾರೋ ಅವರ ಮೇಲೆ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ-1986 (Indescent Representation of Women (Prohibition) Act-1986) ರಡಿಯಲ್ಲಿ ಸ್ವಯಂ ಪ್ರೇರಿತವಾಗಿ ಕ್ರಮವನ್ನು ದೃಶ್ಯ ಮಾಧ್ಯಮಗಳು ತೆಗೆದುಕೊಳ್ಳಬೇಕು. ಅಥವಾ ಕೇಬಲ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮವಹಿಸಲು, ಅಥವಾ ಫಿಲ್ಮ್ಸ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮ ವಹಿಸಲು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದ್ದರೆ ಪತ್ರಿಕೋದ್ಯಮ ಕಾಯಿದೆಯಡಿ ಕ್ರಮವಹಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಹಾಗೂ ವಾರ್ತಾ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.