
ಮಡಿಕೇರಿ ಅ.30 NEWS DESK : ವಿರಾಜಪೇಟೆ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯ ಹಂತ -04 ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಗತ್ಯ ಕಿಟ್ಗಳನ್ನು ವಿತರಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು ರಾಫಿ, ಮತೀನ್,ಬೆನ್ನಿ ಆಗಷ್ಟಿನ್, ರಾಜೇಶ್, ಹಮೀದ್, ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.









