
ಮಡಿಕೇರಿ NEWS DESK ಅ.30 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025- 28ನೇ ಸಾಲಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಾಚರಣಿಯಂಡ ಅನು ಕಾರ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ.ರಾಕೇಶ್,ಉಪಾಧ್ಯಕ್ಷರಾಗಿ ನವೀನ್ ಸುವರ್ಣ, ವನಿತಾ ಚಂದ್ರಮೋಹನ್, ಎ.ಎನ್.ವಾಸು, ಕಾರ್ಯದರ್ಶಿಗಳಾಗಿ ಮಲ್ಲಿಕಾರ್ಜುನ, ರಿಜ್ವಾನ್ ಹುಸೇನ್, ಚೆರಿಯಮನೆ ಸುರೇಶ್ ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು, ರಾಜ್ಯ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಹಾಗೂ ರಾಜ್ಯ ಸಮಿತಿ ಸದಸ್ಯರಾಗಿ ಸವಿತಾ ರೈ ಆಯ್ಕೆಗೊಂಡಿದ್ದಾರೆ.








