
ಸುಂಟಿಕೊಪ್ಪ ನ.1 NEWS DESK : ಭಾರತಾಂಭೆಯ ಸೇವೆಯಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳಲು ಕನ್ನಡ ರಾಜ್ಯೋತ್ಸವ ನಮಗೆಲ್ಲರಿಗೂ ಪ್ರೇರಣೆ ನೀಡುವಂತ ಆಚರಣೆಯಾಗಬೇಕೆಂದು ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಕರೆ ನೀಡಿದ್ದಾರೆ. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಆಚರಣೆಯಲ್ಲ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು. ಭಾಷಾವರು ಪಾಂತ್ಯಗಳಾಗಿ ರಚನೆಯಾದ ಸಂದರ್ಭ ಮೈಸೂರು 1956 ರಲ್ಲಿ ಅಸಿತ್ವಕ್ಕೆ ಬಂದು ಮುಂದೆ 1973 ನವೆಂಬರ್ 1 ರಂದು ಕರ್ನಾಟಕವೆಂದು ಹೆಸರಾಯಿತು. ಅಂದಿನಿಂದ ಪ್ರತಿ ವರ್ಷವೂ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾ ಕನ್ನಡ ನಾಡು ನುಡಿ ಸಂಸ್ಕøತಿ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲಾರೂ ಮತ್ತೆ ಮತ್ತೆ ಕಟ್ಟಿಬದ್ದರಾಗಬೇಕೆಂದು ಅವರು ಕರೆ ನೀಡಿದರು. ಸುಂಟಿಕೊಪ್ಪ ಗ್ರೇಡ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್ಕುಮಾರ್ ಮಾತನಾಡಿ, ಕನ್ನಡ ವೃತ್ತದ ಐತಿಹಾಸಿಕ ಹಿನ್ನಲೆಯನ್ನು ಗತೌರವಿಸಿ ಕನ್ನಡ ರಾಜ್ಯೋತ್ಸವ ತಿಂಗಳಾದ ನವೆಂಬರ್ನಲ್ಲಿ ವೈವಿದ್ಯಮಯ ಭಾಷ ಸಂಸ್ಕøತಿ ಮೈಳಾಯಿಸಿದ ಹಮ್ಮಿಕೊಳ್ಳುವಂತಾಗಬೇಕೆಂದು ಕರೆ ನೀಡಿ, ಮುಂದಿನ ವರ್ಷದಿಂದ ಗ್ರಾಮ ಪಂಚಾಯಿತಿ ಕನ್ನಡ ಸಾಹಿತ್ಯ ಪರಿಷತ್ನೊಂದಿಗೆ ಕೈ ಜೋಡಿಸಲಿದೆ ಎಂದು ಅವರು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸುಂಟಿಕೊಪ್ಪ ಹೋಬಳಿ ಕಸಾಪ ಕಾರ್ಯದರ್ಶಿ ಕೆ.ಎಸ್.ಅನಿಲ್ಕುಮಾರ್ ಕನ್ನಡ ವೃತ್ತಕ್ಕೆ 4 ದಶಕಗಳ ಇತಿಹಾಸ ಇದ್ದು ಕಳೆದ 35 ವರ್ಷಗಳಿಂದ ಕನ್ನಡ ಧ್ವಜವನ್ನು ವರ್ಷಪೂರ್ತಿ ಕನ್ನಡ ವೃತ್ತದಲ್ಲಿ ಹಾರಾಟ ಮಾಡುತ್ತಿರುವ ಏಕೈಕ ಸ್ಥಳ ಸುಂಟಿಕೊಪ್ಪವಾಗಿದ್ದು ರಾಜ್ಯದಲ್ಲಿಯೂ ಕೂಡ ಪ್ರಸಿದ್ಧಿ ಪಡೆದಿದೆ ಎಂದು ಹೇಳಿದರು. ಸಮಾರಂಭದ ಮೊದಲಿಗೆ ಕನ್ನಡ ವೃತ್ತದಲ್ಲಿ ಧ್ವಜಾರೋಹಣವನ್ನು ಹಿರಿಯ ಪತ್ರಕರ್ತ ಮತ್ತು ಕೊಡಗು ಪತ್ರಕರ್ತರ ಸಂಘ ಕುಶಾಲನಗರ ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ಬಿ.ಸಿ.ದಿನೇಶ್ ನೇರವೇರಿಸಿದರು. ಇಕಾರ್ಯಕ್ರಮದಲ್ಲಿ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಬಿ.ಸಿ.ದಿನೇಶ್, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೆಸಿಂತ ಜೊವಿಟಾ ವಾಸ್ ಅವರು ಅನುದಾನಿತ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯ ಶಿಕ್ಷಕರ ಪ್ರಶಸ್ತಿಗೆ ಭಾಜನರಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಸಾಧನೆಗಾಗಿ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಎಫ್.ಸಬಾಸ್ಟಿನ್ ವಹಿಸಿದ್ದರು. ವೇದಿಕೆಯಲ್ಲಿ ಕ.ಸಾ.ಪ. ಹಿರಿಯ ಸದಸ್ಯ ಹಾಗೂ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಡಾ.ಯಶೋಧ, ಪೂಜಾರಿ, ಎಸ್.ಜಿ.ಶ್ರೀನಿವಾಸ್, ಸುಂಟಿಕೊಪ್ಪ ಹೋಬಳಿ ಕಸಾಪ ಕಾರ್ಯದರ್ಶಿ ಲೀಲಾವತಿ, ಖಜಾಂಚಿ ಸತೀಶ್ ಶೇಟ್, ಸದಸ್ಯರುಗಳಾದ ವಹೀದ್ಜಾನ್, ಆಶೋಕ್ ಶೇಟ್, ಗ್ರಾ.ಪಂ.ಸದಸ್ಯರುಗಳಾದ ವಸಂತಿ, ಜೀನಾಸುದ್ಧಿನ್, ರಫೀಕ್ ಖಾನ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋಚಾಲಕರ ಸಂಘದ ಅಧ್ಯಕ್ಷ ಕೆ.ಎಚ್.ಶರೀಫ್, ಕಾರ್ಯದರ್ಶಿ ಸಚಿನ್, ಕೆ.ಎಚ್.ಶಿವಣ್ಣ, ಹಿರಿಯ ಪತ್ರಕರ್ತ ಜಿ.ಕೆ.ಬಾಲಕೃಷ್ಣ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಶಾಲಾ ಕಾಲೇಜುಗಳ ಶಿಕ್ಷಕ ಶಿಕ್ಷಕಿಯರು ಮಕ್ಕಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.










