Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.5ರಂದು ಬಿಟ್ಟಂಗಾಲದಲ್ಲಿ ಸಿಎನ್‌ಸಿಯಿಂದ 18ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.5ರಂದು ಬಿಟ್ಟಂಗಾಲದಲ್ಲಿ ಸಿಎನ್‌ಸಿಯಿಂದ 18ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ನವೆಂಬರ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.2 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.5ರಂದು ಬಿಟ್ಟಂಗಾಲದಲ್ಲಿ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬಿಟ್ಟಂಗಾಲದಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಸೇರಿದಂತೆ ಕೊಡವರ ಎಲ್ಲಾ ಸಂವಿಧಾನಿಕ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು, ಇದರ ಆಧಾರದಡಿ ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿದೆ. ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್ ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
2026-27ರ 16ನೇ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ, ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್ಟಿ ಪಟ್ಟಿಯಲ್ಲಿ ವರ್ಗೀಕರಿಸಬೇಕು. ಕೊಡವರ ಧಾರ್ಮಿಕ ಸಂಸ್ಕಾರ ತೋಕ್ ಗನ್ ಹಕ್ಕು ಚಿರಸ್ಥಾಯಿಯಾಗಿ ಉಳಿಸಬೇಕು, ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು. ಅಲ್ಲದೆ ಜಾತಿ ಜನಗಣತಿಯ ಮೂರೂ ಕಾಲಂಗಳಲ್ಲಿ ಕೊಡವರು ‘ಕೊಡವ’ ಎಂದು ನಮೂದಿಸುವಂತೆ ಜನಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ. ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲಿದ್ದು, ಬಿಟ್ಟಂಗಾಲ ವ್ಯಾಪ್ತಿಯ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.