Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆಯಿಂದ ಗೋಣಿಕೊಪ್ಪಲುವರೆಗೆ ಏಕತಾ ಪಾದಯಾತ್ರೆ : ಮುಂದಿನ ಪೀಳಿಗೆಗೆ ದೇಶದ ಬಗ್ಗೆ ಗೌರವ, ಏಕತಾ ಮನೋಭಾವ ಬೆಳೆಸಬೇಕು : ಸಂಸದ ಯದುವೀರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆಯಿಂದ ಗೋಣಿಕೊಪ್ಪಲುವರೆಗೆ ಏಕತಾ ಪಾದಯಾತ್ರೆ : ಮುಂದಿನ ಪೀಳಿಗೆಗೆ ದೇಶದ ಬಗ್ಗೆ ಗೌರವ, ಏಕತಾ ಮನೋಭಾವ ಬೆಳೆಸಬೇಕು : ಸಂಸದ ಯದುವೀರ್*

ನವೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.14 NEWS DESK : ದೇಶದ ಏಕತಾ ಪುರುಷ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನದ ಪ್ರಯುಕ್ತ ‘ಏಕತಾ ನಡಿಗೆ’ ಪೆÇನ್ನಂಪೇಟೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಬಸ್ ನಿಲ್ದಾಣದಿಂದ ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರದವರೆಗೆ ಯದುವೀರ್ ಒಡೆಯರ್ ಅವರ ಮುಂದಾಳತ್ವದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಸಾಗಿ ಗೋಣಿಕೊಪ್ಪ ಪರಿಮಳ ಮಂಗಳ ವಿಹಾರದಲ್ಲಿ ಸಮಾವೇಶಗೊಂಡರು. ಸಭಾ ಕಾರ್ಯಕ್ರಮಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಅನೇಕ ಒಪ್ಪಂದಗಳ ಮೂಲಕ ಭಾರತದ ಏಕತೆಗಾಗಿ ಕೊನೆ ಉಸಿರಿನವರೆಗೂ ಶ್ರಮಿಸಿದ್ದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮಲು ಇವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ಮೈಸೂರು ಸಂಸ್ಥಾನದೊಂದಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಸಂಬಂಧವನ್ನು ಸಂಸದರು ವಿವರಿಸಿದರು.
ಸರ್ದಾರ್ ವಲ್ಲಭಬಾಯಿ ಪಟೇಲರು ಉಪ ಪ್ರಧಾನಿಯಾಗಿದ್ದ ಸಂದರ್ಭ ಅಂದಿನ ಮಹರಾಜಾ ಜಯ ಚಾಮರಾಜ ಒಡೆಯರ್ ಅವರು ಪಟೇಲ್ ಅವರಿಗೆ ಸಂಚರಿಸಲು ವಿಮಾನ ನೀಡಿದ ಕುರಿತು ಸ್ಮರಿಸಿದರು. ಇಂದಿಗೂ ಆ ವಿಮಾನವನ್ನು ಹುಡುಕುತ್ತಿದ್ದು ಅದನ್ನು ಹಿಂಪಡೆದು ಸಂರಕ್ಷಿಸುವ ಉದ್ದೇಶ ಹೊಂದಿದ್ದೇವೆ ಎಂದು ಮಾಹಿತಿ ನೀಡಿದರು. ಮುಖ್ಯವಾಗಿ ಮುಂದಿನ ಪೀಳಿಗೆಗೆ ದೇಶದ ಬಗ್ಗೆ ಗೌರವ, ಏಕತಾ ಮನೋಭಾವ ಬೆಳೆಸುವಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕಬ್ಬಡಿ ಕ್ರೀಡಾ ಕೂಟ ಹಾಗೂ ಗಣೇಶ ಚತುರ್ಥಿಯನ್ನು ಆಚರಿಸುವುದರ ಮೂಲಕ ಎಲ್ಲರನ್ನು ಒಗ್ಗೂಡಿಸಿ ಸ್ವತಂತ್ರ ಹೋರಾಟದಲ್ಲಿ ಭಾಗವಹಿಸಿದ್ದರು. ಸ್ವತಂತ್ರ ಸಿಕ್ಕಿದ ನಂತರ ಭಾರತದ ಉಪ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಅವರಿಗೆ ಗೃಹ ಖಾತೆ ನೀಡಿದಾಗ ಸಮರ್ಥವಾಗಿ ನಿಭಾಯಿಸಿ, ಎಲ್ಲ ರಾಜ್ಯಗಳನ್ನು ಒಗ್ಗೂಡಿಸಿ ಭಾರತ ಕಟ್ಟುವ ಕಾರ್ಯದಲ್ಲಿ ಕೈಜೋಡಿಸಿದ್ದರು. ಭಾರತವನ್ನು ಕಟ್ಟುವ ಕಾರ್ಯದಲ್ಲಿ ನಿರತರಾಗಿದ್ದ ಇವರನ್ನು ಸರ್ದಾರ್ ಪಟ್ಟ ಹಾಗೂ ಭಾರತ ರತ್ನ ಬಿರುದು ನೀಡಿ ಗೌರವಿಸಲಾಯಿತು ಎಂದು ಸ್ಮರಿಸಿದರು. ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಭಾರತ ದೇಶ ಸ್ವಾವಲಂಬಿಯಾಗಬೇಕೆಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ವಿಶ್ವದಲ್ಲಿಯೇ ಆರ್ಥಿಕತೆಯಲ್ಲಿ 4ನೇ ಸ್ಥಾನಕ್ಕೆ ಏರುವಂತೆ ಮಾಡಿದ್ದಾರೆ. ಇತರೆ ದೇಶಗಳು ನಮ್ಮ ಸ್ವದೇಶಿ ವಸ್ತುಗಳ ಮೇಲೆ ಅಧಿಕ ತೆರಿಗೆ ವಿಧಿಸಿ ಆರ್ಥಿಕತೆಯನ್ನು ಕುಗ್ಗಿಸಲು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ದೇಶದ ಜನರು ಸ್ವದೇಶಿ ವಸ್ತುಗಳನ್ನು ಬಳಸಿ ಭಾರತದ ಪ್ರಗತಿಗೆ ಸಹಕರಿಸಬೇಕು. ಭಾರತ ದೇಶ ಸ್ವಾವಲಂಬಿಯಾಗಬೇಕಾದರೆ ಜನರು ಮೊದಲು ಸ್ವದೇಶಿ ವಸ್ತುಗಳನ್ನು ಬಳಸುವಂತೆ ಆಗಬೇಕೆಂದರು. ಗೋಣಿಕೊಪ್ಪ ಕಾವೇರಿ ಕಾಲೇಜ್ ವಿದ್ಯಾರ್ಥಿಗಳಿಂದ ಕೊಡಗಿನ ಸಾಂಪ್ರದಾಯಿಕ ನೃತ್ಯಗಳಾದ ಕತ್ತಿಯಾಟ್, ಕೋಲಾಟ್ ಹಾಗೂ ಉಮ್ಮತ್ತಾಟ್ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಏಕತಾ ನಡಿಗೆಯಲ್ಲಿ ಭಾಗವಹಿಸಿದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಾಂಸನಾ ಪತ್ರ ನೀಡಿ ಗೌರವಿಸಲಾಯಿತು. ಇದೇ ಸಂದರ್ಭ ಮಿಸ್ಟರ್ ಇಂಡಿಯಾ ಯೂನಿವರ್ಸ್ 2025ಕ್ಕೆ ಆಯ್ಕೆಯಾದ ಕರಿನೆರವಂಡ ಬಿಷನ್ ಮಾದಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜೀ ಶಾಸಕ ಕೆ.ಜಿ. ಬೋಪಯ್ಯ, ಮೈ ಭರತ್ ಕೊಡಗು ಜಿಲ್ಲಾ ಯುವ ಒಕ್ಕೂಟ ಅಧಿಕಾರಿ ಕೆ.ಟಿ. ಉಲ್ಲಾಸ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಘದ ಅಧ್ಯಕ್ಷ ರಾಬಿನ್ ದೇವಯ್ಯ, ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಪಿ.ಸುಕುಮಾರ್, ಕೊಡಗು ಯುವ ಒಕ್ಕೂಟ ಸಂಚಾಲಕ ವಿ.ಕೆ ಲೋಕೇಶ್, ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ, ಗೋಣಿಕೊಪ್ಪ ಕಾವೇರಿ ಕಾಲೇಜು ಕಾರ್ಯದರ್ಶಿ ಕೆ.ಸಿ ಬೋಪಣ್ಣ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.