Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಕುಡಿಯ ಸಮೂಹದ ಕಾಲೋನಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಕುಡಿಯ ಸಮೂಹದ ಕಾಲೋನಿ*

ನವೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.14 : ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದ ಕುಡಿಯ ಸಮೂಹ ವಾಸವಿರುವ ಎರಡು ಕಾಲೋನಿಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಇಲ್ಲಿನ ನಿವಾಸಿಗಳು ನಗರದ ಪತ್ರಿಕಾ ಭವನದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬೆಟ್ಟತ್ತೂರು ಗ್ರಾಮದ ಕೊಯಿನಾಲ್‌ಮಲೆ ಅರಣ್ಯ ಪ್ರದೇಶದ ಕಾಲೋನಿಗಳಿಗೆ ಇಂದಿಗೂ ವಿದ್ಯುತ್ ಸಂಪರ್ಕವಿಲ್ಲ. ಈ ಬಗ್ಗೆ ನೂರಾರು ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ, ಪರಿಹಾರ ಮಾತ್ರ ದೊರಕಿಲ್ಲ. ಕಾಲೋನಿಗಳಿಗೆ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ‘ಅರಣ್ಯ ಇಲಾಖೆ’ಯೆ ಅಡ್ಡಿಯಾಗಿದೆಯೆಂದು ಅಲ್ಲಿನ ನಿವಾಸಿ ಕೆ.ಎ.ಸೋಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ನೋವನ್ನು ತೋಡಿಕೊಂಡರು. ಈ ಹಿಂದಿನ ಸರಕಾರದ ಅವಧಿಯಲ್ಲಿ ಬೆಟ್ಟತ್ತೂರಿನ ಈ ಕಾಲೋನಿಗಳ ಬಳಿಯ ಸಮುದಾಯ ಭವನಕ್ಕೆ ವಿದ್ಯುತ್ ಸೌಲಭ್ಯವನ್ನು ಗ್ರಾಮೀಣ ವಿದ್ಯುದೀಕರಣ ಯೋಜನೆಯಡಿ ಒದಗಿಸಲಾಗಿದೆ. ಹೀಗಿದ್ದೂ ಅಲ್ಲೇ ಸಮೀಪದ ಮನೆಗಳು ಇಂದಿಗೂ ಕಗ್ಗತ್ತಲೆಯಲ್ಲೇ ಉಳಿದು ಬಿಟ್ಟಿವೆ. ಕಾಲೋನಿ ನಿವಾಸಿ ಕೆ.ಎ.ಸೋಮಯ್ಯ ಹೇಳುವಂತೆ, ಕಳೆದ ಚುನಾವಣೆಯ ಸಂದರ್ಭ ಕಾಲೋನಿಗೆ ವಿದ್ಯುತ್ ಒದಗಿಸುವುದಾಗಿ ಸುಮಾರು ಎಂಭತ್ತು ವಿದ್ಯುತ್ ಕಂಬಗಳನ್ನು ತಂದು ಹಾಕಲಾಗಿತ್ತು. ಚುನಾವಣೆ ಕಳೆದ ಬಳಿಕ ಅದು ಹಾಗೆಯೇ ಹಿಂದಕ್ಕೆ ಹೋಗಿಬಿಟ್ಟಿದೆ. ಒಂದು ಭಾಗದಲ್ಲಿ ಹತ್ತು ಕಟುಂಬಗಳು ವಾಸವಿದೆಯಾದರೆ, ಮತ್ತೊಂದು ಕಾಲೋನಿಯಲ್ಲಿ ಏಳು ಕುಡಿಯ ಸಮೂಹಕ್ಕೆ ಸೇರಿದ ಕುಟುಂಬಗಳು ಹಲ ದಶಕಗಳಿಂದ ಬದುಕು ನಡೆಸುತ್ತಿವೆ. ಆದರೆ, ಇವರಿಗೆ ಕನಿಷ್ಟ ಮೂಲ ಸೌಲಭ್ಯ ಒದಗಿಸಬೇಕೆನ್ನುವ ಕಿಂಚಿತ್ ಕಾಳಜಿ ಯಾರಲ್ಲೂ ಇದ್ದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು ಮಾತನಾಡಿ, ಇಂದಿಗೂ ನಮ್ಮ ನಡುವೆ ಕನಿಷ್ಟ ಮೂಲಸೌಲಭ್ಯಗಳಿಂದ ವಂಚಿತ ಬಡ ಮಂದಿ ಇದ್ದಾರೆ. ಅವರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆ ತರುವ ಕಾರ್ಯ ನಡೆಯಬೇಕಿದೆ. ಈ ನಿಟ್ಟಿನಲ್ಲಿ ತಾನು ಹಾಡಿಗಳಿಗೆ ಭೇಟಿಯನ್ನಿತ್ತು, ಅಲ್ಲಿನ ಸಮಸ್ಯೆಗಳ ಬಗ್ಗೆ ಅರಿತು ಸಂಬಂಧಂಪಟ್ಟ ಇಲಾಖೆಯೊಂದಿಗೆ ಸರ್ಕಾರದ ಗಮನ ಸೆಳೆೆಯುವ ಪ್ರಯತ್ನ ನಡೆಸುತ್ತಿರುವುದಾಗಿ ತಿಳಿಸಿದರು. ಬೆಟ್ಟತ್ತೂರಿನ ಎರಡು ಕಾಲೋನಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯನ್ನು ತಾನು ಸಂಪರ್ಕಿಸಿ, ಕಾಲೋನಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವಂತೆ ತಿಳಿಸಿದ್ದೆ, ಅವರು ಸದ್ಯದಲ್ಲೆ ಮಾಡಿಕೊಡುವುದಾಗಿ ತಿಳಿಸಿದ್ದಾರಾದರು, ಅದು ಕಾರ್ಯಗತವಾಗಿಲ್ಲವೆಂದರು. ಕೊಡಗು ಜಿಲ್ಲೆಯಲ್ಲಿ 2018ರ ಮುಂಗಾರಿನ ಸಂದರ್ಭ ಉಂಟಾದ ಜಲ ಪ್ರಳಯದಿಂದ ಸಂಭವಿಸಿದ ಭೂ ಕುಸಿತಗಳಿಂದ ಮನೆಗಳನ್ನು ಕಳೆದುಕೊಂಡ ಹಲವರಿಗೆ ಇಂದಿಗೂ ಮನೆ ಲಭಿಸಿಲ್ಲ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಡ ಮಂದಿ ಕಳೆದ ಹಲವು ದಶಕಗಳಿಂದ ಸಂಬಂಧಪಟ್ಟವರಿಗೆ ಅರ್ಜಿಗಳನ್ನು ಸಲ್ಲಿಸಿಕೊಂಡು ಬಂದಿದ್ದಾರಾದರು ಅವರಿಗೆ ಇಲ್ಲಿಯವರೆಗೆ ಮನೆಗಳು ದೊರಕಿಲ್ಲವೆಂದು ಟೀಕಿಸಿದರು. ಭೂ ಕುಸಿತದಿಂದ 2018ರಲ್ಲಿ ಮನೆ ಕಳೆದುಕೊಂಡ ಎರಡನೇ ಮೊಣ್ಣಂಗೇರಿಯ ನಿವಾಸಿ ಪಿ.ಬಿ.ರಾಧ ಅವರು ಮಾತನಾಡಿ, ಮನೆ ಸಂಪೂರ್ಣ ನಾಶವಾದ ಸಂದರ್ಭವೆ ತಾನು ಮನೆಗಾಗಿ ಅರ್ಜಿಯನ್ನು ಸಲ್ಲಿಸಿದ್ದೇನೆ. ಆದರೆ, ಇಲ್ಲಿಯವರೆಗೆ ಮನೆ ದೊರಕಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಮಡಿಕೇರಿ ನಗರದ ಮಹದೇವಪೇಟೆಯ ಜಯ ಹಾಗೂ ಮಲ್ಲಿಕಾರ್ಜುನ ನಗರದ ಪಿ.ಎ.ಪದ್ಮ ಅವರು ಮಾತನಾಡಿ, ಬಡವರ್ಗದ ನಾವು ಮನೆಗಾಗಿ ಹಲವು ಬಾರಿ ನಗರಸಭೆಗೆ ಅರ್ಜಿಗಳನ್ನು ಸಲ್ಲಿಸಿದ್ದೇವೆ, ಆದರೆ ಇಲ್ಲಿಯವರೆಗೆ ಪರಿಗಣಿಸಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಂತೆಯಂಡ ಬೋಪಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.13 NEWS DESK : ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ…

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.