
ಮಡಿಕೇರಿ ನ.18 NEWS DESK : ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಅಶಿಕ್ ಮಂದಣ್ಣ ಕೆ. ಪಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಜೀವ ನಾಣಯ್ಯ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಶರಣ್ ಚಂಗಪ್ಪ ಪಿ. ಸಿ ತಟ್ಟೆ ಎಸೆತದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳೊಂದಿಗೆ ಶಾಲಾ ವ್ಯವಸ್ಥಾಪಕಿ ನಾಟೋಳಂಡ ಶ್ರೀಮತಿ ಸರೋಜಿನಿ, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸ್ವರೂಪ ಕೆ. ಬಿ. ದೈಹಿಕ ಶಿಕ್ಷಣ ಶಿಕ್ಷಕಿ ಕರವಂಡ ಸೀಮಾ ಗಣಪತಿ ಇದ್ದಾರೆ.









