
ವಿರಾಜಪೇಟೆ ನ.18 NEWS DESK : ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಎಸ್ಡಿಎಂಸಿ ಅಧ್ಯಕ್ಷೆ ಫಾತಿಮಾ ಉದ್ಘಾಟಿಸಿದರು. ಸುಮಾರು 11 ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 40 ಶಿಕ್ಷಕರು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 24 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕಂಠಪಾಠ, ಧಾರ್ಮಿಕ ಪಠಣ, ಚಿತ್ರಕಲೆ ಕ್ಲೇ ಮಾಡಲಿಂಗ್, ದೇಶಭಕ್ತಿ ಗೀತೆ, ಪ್ರಬಂಧ, ರಸಪ್ರಶ್ನೆ ಇನ್ನಿತರ ವಿಷಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರು ಹಾಗು ದಾನಿಗಳು ಆದ ಸಲಾಂ ಎಂ.ಕೆ. ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಬಹುಮಾನಕ್ಕಿಂತ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೀರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಗಳು ಉತ್ತಮ ವೇದಿಕೆಯಾಗಿದ್ದು, ಇದನ್ನು ಸದುಪಯೋಗ ಪಡೆಯಬೇಕಾಗಿದೆ ಎಂದು ನುಡಿದರು. ಚೆಯ್ಯಂಡಾಣೆ ಪ್ರಾರ್ಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಕೆ.ಎಂ.ವಿಮಲಾ ಮತ್ತು ಮೂರ್ನಾಡು ಶಾಲಾ ಮುಖ ಶಿಕ್ಷಕರಾದ ಪ್ರೇಮಕುಮಾರಿ ಶುಭ ಕೋರಿದರು. ವೇದಿಕೆಯಲ್ಲಿ ಶಾಲಾ ಶಿಕ್ಷಕರಾದ ಶೋಭಾ, ಎಂ.ಬಿ.ವತ್ಸಲ ಉಪಸ್ಥಿತರಿದ್ದರು. ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಶುಭ ಹಾರೈಸಲಾಯಿತು.









