Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರಿಗೆ “ಚಿತ್ರಶಿಲ್ಪ ಕಲಾ ತಪಸ್ವಿ” ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರಿಗೆ “ಚಿತ್ರಶಿಲ್ಪ ಕಲಾ ತಪಸ್ವಿ” ಪ್ರಶಸ್ತಿ ಪ್ರದಾನ*

ನವೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.24 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರ ಶಿಲ್ಪಕಲಾ ವೃತ್ತಿ ಜೀವನದ 50ನೇ ಸುವರ್ಣ ಮಹೋತ್ಸವಕ್ಕೆ ಮಡಿಕೇರಿಯ ಕಲಾನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ “ಚಿತ್ರಶಿಲ್ಪ ಕಲಾ ತಪಸ್ವಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ರಾಘವೇಂದ್ರ ದೇವಾಲಯದ ಬಳಿಯ ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಸೂರ್ಯ ಕುಮಾರ್, ಕಲಾನಗರ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಮಹೇಶ್ ಹಾಗೂ ಇತರ ಗಣ್ಯರು ಬಿ.ಕೆ.ಗಣೇಶ್ ರೈ ಅವರಿಗೆ ಹುಟ್ಟೂರ ಸನ್ಮಾನ ಮಾಡಿ, ಚಿತ್ರಶಿಲ್ಪ ತಪಸ್ವಿ ಬಿರುದು ಪ್ರದಾನಿಸಿ ಐವತ್ತು ವರ್ಷಗಳ ಹೆಜ್ಜೆಗುರುತುಗಳನ್ನು ದಾಖಲಿಸಿ “ಕಲಾ ದರ್ಪಣ” ಅಭಿನಂದನಾ ಗ್ರಂಥವನ್ನು ಪ್ರದಾನ ಮಾಡಿದರು.
ಕಾರ್ಯಕ್ರಮವನ್ನು ಪ್ರತಿಮಾ ರೈ ನಿರೂಪಿಸಿದರು. ಕೊಡಗಿನ ಮಡಿಕೇರಿಯವರಾಗಿರುವ ಚಿತ್ರ ಶಿಲ್ಪ ಕಲಾವಿದ ಹಾಗೂ ಕ್ರಿಯಾತ್ಮಕ ಕಲಾನಿರ್ದೇಶಕರಾಗಿರುವ ಬಿ.ಕೆ.ಗಣೇಶ್ ರೈ ತಮ್ಮ ಚಿತ್ರಶಿಲ್ಪ ಕಲಾ ವೃತ್ತಿಯನ್ನು 1974ರಲ್ಲಿ ಪ್ರಾರಂಭಿಸಿ, 2025ಕ್ಕೆ ತಮ್ಮ ವೃತ್ತಿ ಜೀವನದ 50ನೇ ವರ್ಷದ ಸುವರ್ಣ ಸಂಭ್ರಮ. ಮಡಿಕೇರಿ ಸರ್ಕಾರಿ ಜೂನಿಯರ ಕಾಲೇಜಿನ ಮಹದ್ವಾರದ ಎರಡು ಬದಿಗಳಲ್ಲಿ ಪುಷ್ಪಾಂಜಲಿ, ಆನೆಗಳು ಉಬ್ಬುಶಿಲ್ಪ ಮತ್ತು ಸಿಂಹಗಳ ವಿಗ್ರಹಗಳನ್ನು ಮಾಡುವಲ್ಲಿ ಕಲಾವಿದರಾಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಮೈಸೂರಿನ ಚಾಮರಾಜೇಂದ್ರ ಟೆಕ್ನಿಕಲ್ ಸ್ಕೂಲ್ (ಕಾವಾ) ನಲ್ಲಿ ಚಿತ್ರಕಲೆ, ಶಿಲ್ಪಕಲೆ, ಫೋಟೊಗ್ರಫಿ ಯಲ್ಲಿ ಡಿಪ್ಲೋಮಾ ಪಡೆಯುದರ ಜೊತೆಗೆ ಆರ್ಟ್ ಮಾಸ್ಟರ್ ಪದವಿಯನ್ನು ಸಹ ಪಡೆದಿದ್ದಾರೆ. ವಿರಾಜಪೇಟೆಸಂತ ಅನ್ನಮ್ಮ ಪ್ರೌಢ ಶಾಲೆಯಲ್ಲಿ ಚಿತ್ರಕಲಾ ಅಧ್ಯಾಪಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ವಿರಾಜಪೇಟೆ ತಾಲ್ಲೂಕು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಡಿಕೇರಿ ವಿದ್ಯುಚ್ಚಕ್ತಿ ಮಂಡಳಿಗೆ 1980 ದಶಕದಲ್ಲಿ ಬೃಹತ್ ಗಣಪತಿ ಮೂರ್ತಿಯನ್ನು ಮಾಡುತ್ತಾ ಮಡಿಕೇರಿ ದಸರ ಉತ್ಸವಕ್ಕೆ ಹಲವು ದೇವಾಸ್ಥಾನಗಳಿಗೆ ವಿವಿಧ ಭಂಗಿಯ ವಿವಿಧ ಅಳತೆಯ ದೇವತಾ ಮೂರ್ತಿಗಳನ್ನು ಮಾಡಿಕೊಟ್ಟಿರುವರು ಮಡಿಕೇರಿ ಪುರಭವನದ ಎದುರಿನಲ್ಲಿರುವ ಎರಡು ಬದಿಯಲ್ಲಿ ಮುಖವಿರುವ ಕಾವೇರಿ ಮಾತೆಯ ಪ್ರತಿಮೆಯನ್ನು 1980ರ ದಶಕದಲ್ಲಿ ಗಣೇಶ್ ರೈಯವರು ನಿರ್ಮಿಸಿದ್ದರು. ಪವಿತ್ರ ತೀರ್ಥ ಕ್ಷೇತ್ರ ತಲಕಾವೇರಿಯಲ್ಲಿ ಕಾವೇರಿ ಮಾತೆಯ ವರ್ಣ ಚಿತ್ರಗಳನ್ನು ಶಿವಕಾಶಿಯಲ್ಲಿ ಮುದ್ರಿಸಿ ಬಿಡುಗಡೆ ಮಾಡಿದ್ದಾರೆ. ಬರಹಗಾರರಾಗಿಯೂ ಹಲವಾರು ಲೇಖನಗಳನ್ನು ವಿವಿಧ ಪತ್ರಿಕೆ, ವೆಬ್ ಮಾದ್ಯಮಗಳಲ್ಲಿ ಪ್ರಕಟಿಸಿದ್ದಾರೆ. ಮಡಿಕೇರಿ ಕಾವೇರಿ ಕಲಾಕ್ಷೇತ್ರದ ಎದುರು ಬದಿಯಲ್ಲಿ ಎದುರು ಬದಿ ಹಾಗೂ ಹಿಂಬದಿಯಲ್ಲಿಯೂ ಸಹ ಮುಖವನ್ನು ಹೊಂದಿರುವ ಪೂರ್ಣ ರೂಪವಿರುವ ಶ್ರೀ ಕಾವೇರಿ ಮಾತೆಯ ಶಿಲ್ಪ ಗಣೇಶ್ ರೈಯವರ ಮಾಸ್ಟರ್ ಪೀಸ್ ಶಿಲ್ಪವಾಗಿದೆ. ಪ್ರಸ್ತುತ ದುಬಾಯಿಯಲ್ಲಿ ನೆಲೆಸಿದ್ದು ಜಾಹಿರಾತು ಸಂಸ್ಥೆಯಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕರಾಗಿ ಸೇವೆಯನ್ನುಸಲ್ಲಿಸಿದ್ದಾರೆ, ಕರ್ನಾಟಕ ಸಂಘ ಶಾರ್ಜಾದ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿರುವ ಗಣೇಶ್ ರೈಯವರು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಯು.ಎ.ಇ. ಘಟಕದ ಉಪಾಧ್ಯಕ್ಷರಾಗಿ, ಕರ್ನಾಟಕ ಪ್ರೆಸ್ ಕ್ಲಬ್ ನ ಗಲ್ಫ್ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಬಹುಮುಖ ವ್ಯಕ್ತಿತ್ವದ ಗಣೇಶ್ ರೈಯವರಿಗೆ ದುಬಾಯಿ ಸರ್ಕಾರ ಕಲ್ಚರಲ್ ಗೋಲ್ಡನ್ ವೀಸಾ ನೀಡಿ ಸನ್ಮಾನಿಸಿ ಗೌರವಿಸಿದೆ. ಹಲವಾರು ಸಾಧನೆಗಳ ದಾಖಲೆಯನ್ನು ಮಾಡಿರುವ ಇವರಿಗೆ ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳ ಸರಮಾಲೆಯನ್ನೆ ಧರಿಸಿದ್ದಾರೆ. ಮಯೂರ ವಿಶ್ವಮಾನ್ಯ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ, ಶಿಲ್ಪಕಲಾ ಅಂತರಾಷ್ಟ್ರೀಯ ಪ್ರಶಸ್ತಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಹಾಗೂ ಇನ್ನೂ ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ.
ಗಣೇಶ್ ರೈಯವರು ಡಿಜಿಟಲ್ ಗ್ರಾಫಿಕ್ಸ್ ನಲ್ಲಿ ವಿನ್ಯಾಸಗೊಳಿಸಿರುವ ಕಾವೇರಿ ಪುರಾಣ ಚಿತ್ರಕ್ಕೆ ಪುಸ್ತಕ ಕನ್ನಡ, ಅರೆಭಾಷೆ, ಇಂಗೀಷ್ ಮತ್ತು ತಮಿಳು ಭಾಷೆಗಳಲ್ಲಿ ಭಾಷೆಗಳಲ್ಲಿ ತಲಕಾವೇವೇರಿಯಲ್ಲಿ ತುಲಾ ಸಂಕ್ರಮಣದ ದಿನ ಬಿಡುಗಡೆ ಮಾಡಿದ್ದಾರೆ. ತನ್ನ 50 ವರ್ಷಗಳ ಸುದೀರ್ಘ ಪಯಣದಲ್ಲಿ ತಮ್ಮ ಶಿಲ್ಪ ಕಲಾ ವೃತ್ತಿಯೊಂದಿಗೆ ಸಮಾಜ ಸೇವೆಯನ್ನು ಸಹ ಸಲ್ಲಿಸಿರುವ ಉತ್ತಮ ಸಂಘಟಕರಾಗಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.