Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಟ್ರೇಡ್ಸ್ ನಡಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರು, ಉದ್ಯಮದಾರರಿಗೆ ಪ್ರಯೋಜನ : ನಾಗೇಂದ್ರ ಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಟ್ರೇಡ್ಸ್ ನಡಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರು, ಉದ್ಯಮದಾರರಿಗೆ ಪ್ರಯೋಜನ : ನಾಗೇಂದ್ರ ಪ್ರಸಾದ್*

ನವೆಂಬರ್ 25, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.25 NEWS DESK :  ಟ್ರೇಡ್ಸ್ ಯೋಜನೆಯಡಿ ವ್ಯಾಪಾರಸ್ಥರು ಮತ್ತು ಕೈಗಾರಿಕೋದ್ಯಮಿಗಳಿಗೆ ಹಲವು ಯೋಜನೆಗಳಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ. 2025-26 ನೇ ಸಾಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವ (ಆರ್‍ಎಎಂಪಿ) ಯೊಜನೆಯಡಿ ಕೊಡಗು ಜಿಲ್ಲೆಯಲ್ಲಿ ಉದ್ಯಮ ನೋಂದಣಿ ಪಡೆದಿರುವ ನೋಂದಾಯಿತ ಉದ್ಯಮಿಗಳಿಗೆ ಟ್ರೇಡ್ ರಿಸಿವೇಬಲ್ಸ್ ಡಿಸ್ಕೌಂಟಿಂಗ್ ಸಿಸ್ಟಮ್ (ಟಿಆರ್‍ಎಡಿಎಸ್) (ಟ್ರೆಡ್ಸ್ ಎಂದರೆ ವ್ಯಾಪಾರ ಹಣ ರಿಯಾಯಿತಿ ವ್ಯವಸ್ಥೆ) ಆನ್‍ಲೈನ್ ಪ್ಲಾಟ್‍ಫಾರ್ಮ್‍ಗೆ ಸಂಬಂಧಿಸಿದಂತೆ ನಗರದ ಹೋಟೆಲ್ ರೆಡ್‍ಬ್ರಿಕ್ಸ್‍ನಲ್ಲಿ ನಡೆದ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವ ಜನರಿಗೆ ಉದ್ಯೋಗ ಒದಗಿಸುವಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಪಾತ್ರ ಹೆಚ್ಚಿನದ್ದಾಗಿದೆ ಎಂದರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ವ್ಯಾಪಾರಸ್ಥರು ಮತ್ತು ಗ್ರಾಹಕರಿಗೆ ಟ್ರೇಡ್ಸ್ ಅನುಕೂಲವಿದ್ದು, ಟ್ರೇಡ್ ವ್ಯವಸ್ಥೆಯಲ್ಲಿ ನೋಂದಣಿ ಮಾಡಿಕೊಂಡು ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗೆ ಉತ್ತೇಜನ ನೀಡುವಂತಾಗಬೇಕು ಎಂದು ನಾಗೇಂದ್ರ ಪ್ರಸಾದ್ ಅವರು ವಿವರಿಸಿದರು. ಇದೊಂದು ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ಲಾಭದಾಯಕವಾಗಿದ್ದು, ಪೂರೈಕೆದಾರರಿಗೂ ಸಹ ಅನುಕೂಲವಿದೆ. ಆ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಅವರು ನುಡಿದರು.  ಟೆಕ್ಸಾಕ್ ಸಂಸ್ಥೆಯ ಸಿಇಒ ಹಾಗೂ ಮುಖ್ಯ ಸಲಹೆಗಾರರಾದ ಸಿದ್ದರಾಜು ಅವರು ಮಾತನಾಡಿ ಟ್ರೇಡ್ಸ್ ರಿಸಿವೇಬಲ್ ಎಲೆಕ್ಟ್ರಾನಿಕ್ಸ್ ಡಿಸ್ಕೌಂಟಿಂಗ್ ವ್ಯವಸ್ಥೆಯು ಗ್ರಾಹಕರು ಮತ್ತು ಉದ್ಯಮದಾರರಿಗೆ ಅನುಕೂಲವಿದ್ದು, ಇದರಲ್ಲಿ ನೋಂದಣಿ ಮಾಡಿಕೊಂಡು ವ್ಯಾಪಾರ, ವಹಿವಾಟು ನಡೆಸುವಂತಾಗಬೇಕು ಎಂದು ಅವರು ಹೇಳಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್  ಮಾತನಾಡಿ ಬ್ಯಾಂಕ್‍ಗಳ ಮೂಲಕ ಹಲವು ಯೋಜನೆಗಳಿದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು. ಬೀದಿ ಬದಿ ವ್ಯಾಪಾರಿಗಳಿಗೆ ಸಹಾಯಧನ ಕಲ್ಪಿಸಲಾಗುತ್ತದೆ. ಸಣ್ಣ ಸಣ್ಣ ವ್ಯಾಪಾರಿಗಳಿಗೆ ಹಲವಾರು ಸೌಲಭ್ಯಗಳಿದ್ದು, ಅವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.   ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರಾದ ಕೆ. ಹನುಮಂತರಾಯ ಅವರು ಮಾತನಾಡಿ ಪರಿಶಿಷ್ಟ ಜಾತಿ,  ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕೆ, ಆರೋಗ್ಯ ಮತ್ತು ಆತಿಥ್ಯ ಸೇವಾ ಘಟಕಗಳಿಗೆ ಹಾಗೂ ನಿರ್ಮಾಣ/ ರಿಯಲ್ ಏಸ್ಟೇಟ್ ಚಟುವಟಿಕೆಗಳ ಘಟಕಗಳಿಗೆ ರೂ.10 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಬಡ್ಡಿ ಸಹಾಯಧನ ಸಾಲ ಯೋಜನೆ ಒದಗಿಸಲಾಗುತ್ತದೆ ಎಂದು ಹೇಳಿದರು. ಮಂಗಳೂರು ಬ್ರಾಂಚ್ ಇನ್ ಚಾರ್ಜ್ ಬಿ.ಆರ್ ಎಂ.ಎಸ್.ಎಂ.ಇ.ಡಿ ಎಫ್.ಓ ಯಯ್ಯಾಡಿ ಕೈಗಾರಿಕಾ ವಸಾಹತು ವಿಭಾಗದ ಸಹಾಯಕ ನಿರ್ದೇಶಕರಾದ ಎಂ.ಸುಂದರ ಸೆರಿಗಾರ್ ಅವರು ಮಾತನಾಡಿ  ಸೃಜನಶೀಲವಾಗಿ ವಿಷಯಗಳ ಬಗ್ಗೆ ಆಲೋಚನೆ ಮಾಡಿದರೆ ಸಾರ್ವಜನಿಕರಿಗೆ ನಿಖರವಾಗಿ ಸೌಲಭ್ಯ ಒದಗಿಸಲು ಅನುಕೂಲ ಆಗಲಿದೆ ಎಂದರು.  ಕೆಎಸ್‍ಎಫ್‍ಸಿ ಎಜಿಎಂ ರವಿ ಅವರು ಮಾತನಾಡಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ಆಕರ್ಷಕ ಬಡ್ಡಿದರದಲ್ಲಿ ಸಾಲ ಯೋಜನೆಗಳು ದೊರೆಯಲಿವೆ. ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕಾ ಚಟುವಟಿಕೆಗಳ ಘಟಕಗಳಿಗೆ ರೂ.5  ಲಕ್ಷದಿಂದ 5 ಕೋಟಿ ರೂ.ಗಳವರೆಗೆ ಶೇ.5.5 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ. ಮಹಿಳಾ ಉದ್ಯಮಿಗಳಿಗೆ ಆರೋಗ್ಯ ಹಾಗೂ ಆತಿಥ್ಯ ಸೇವಾ ಚಟುವಟಿಕೆಗಳ ಘಟಕಗಳಿಗೆ ರೂ.5 ಲಕ್ಷದಿಂದ 5 ಕೋಟಿ ರೂ.ಗಳವರೆಗೆ ಶೇ.4 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ ಎಂದರು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕಾ, ಆರೋಗ್ಯ ಮತ್ತು ಆತಿಥ್ಯ ಸೇವಾ ಘಟಕಗಳಿಗೆ ಹಾಗೂ ನಿರ್ಮಾಣ/ ರಿಯಲ್ ಏಸ್ಟೇಟ್ ಚಟುವಟಿಕೆಗಳ ಘಟಕಗಳಿಗೆ ರೂ.10 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಶೇ.4 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2(ಎ) ಜಾತಿಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕಾ, ಆರೋಗ್ಯ ಹಾಗೂ ಆತಿಥ್ಯ ಸೇವಾ ಚಟುವಟಿಕೆಗಳ ಘಟಕಗಳಿಗೆ ರೂ.5 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಶೇ.5.5 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ ದೊರೆಯಲಿದೆ ಎಂದು ಅವರು ತಿಳಿಸಿದರು.  ಅಲ್ಪಸಂಖ್ಯಾತ ಸಮುದಾಯಗಳ ಉದ್ಯಮಿಗಳಿಗೆ ಸೂಕ್ಷ್ಮ, ಸಣ್ಣ ಪ್ರಮಾಣದ ಕೈಗಾರಿಕಾ, ಆರೋಗ್ಯ ಹಾಗೂ ಆತಿಥ್ಯ ಸೇವಾ ಚಟುವಟಿಕೆಗಳ ಘಟಕಗಳಿಗೆ ರೂ.5 ಲಕ್ಷದಿಂದ 10 ಕೋಟಿ ರೂ.ಗಳವರೆಗೆ ಶೇ.5.5 ರಷ್ಟು ಬಡ್ಡಿ ಸಹಾಯಧನ ಸಾಲ ಯೋಜನೆ ಇದೆ ಎಂದು ಮಾಹಿತಿ ನೀಡಿದರು. ಲೀಡ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ ಅವರು ಕಾರ್ಯಗಾರದಲ್ಲಿ ವಿಶೇಷ ತರಬೇತಿ ನೀಡಿದರು. ಕುಶಾಲನಗರ ತಾಲೂಕು ಒಕ್ಕೂಟ ಆರ್.ಸಿ.ಕೂಡಿಗೆ ನಿರ್ದೇಶಕರಾದ ಕೆ.ಪ್ರಕಾಶ್ ಕುಮಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಸಿ.ಎನ್.ರಘು,  ಅವರು ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.