
ವಿರಾಜಪೇಟೆ ನ.26 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ 78ನೇ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲು ಶಕ್ತಿ ಮತ್ತು ಆತ್ಮ ಧೈರ್ಯ ತುಂಬಲು ವಿರಾಜಪೇಟೆಯ ಬೇಟೋಳಿ ಗ್ರಾಮದಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮದ ವೃದ್ಧರಿಗೆ ಬೆಳಗಿನ ತಿಂಡಿ, ಟವಲ್ ಮತ್ತು ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಬಳಿಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆಯ ಪದಾಧಿಕಾರಿಗಳು, ಅಧಿಕಾರಿಗಳು, ವೃದ್ಧರೊಂದಿಗೆ ಕೆಲಕಾಲ ಕಳೆದು ಅವರಿಗೆ ಮನೋರಂಜನೆಯ ಆಟಗಳನ್ನು ಆಡಿಸಿದರಲ್ಲದೆ, ಆರೋಗ್ಯ ವೃದ್ಧಿಸುವ ನಿಟ್ಟಿನಲ್ಲಿ ಆಯುರ್ವೇದಿಕ್ ತೈಲ ಹಚ್ಚಲಾಯಿತು. ಅವಶ್ಯಕತೆ ಇರುವವರಿಗೆ ಔಷಧಗಳನ್ನು ನೀಡಲಾಯಿತು. ಬಳಿಕ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಯೋಜನಾಧಿಕಾರಿ ಹರೀಶ್.ಪಿ ಸಾಹಿತಿಗಳಾದ ವಿ.ಎನ್.ರಜಿತ, ವಲಯದ ಮೇಲ್ವಿಚಾರಕರಾದ ದನೇಶ್ ಶಿವಕುಮಾರ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಉಷಾರಾಣಿ ಹಾಗೂ ಸೇವಾ ಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.









