
ಮಡಿಕೇರಿ ನ.27 NEWS DESK : ಕೊಡಗು ಜಿಲ್ಲೆಯ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆಸೇನಾಪಡೆಯ 13 ನೇ ವಾರ್ಷಿಕ ಮಹಾಸಭೆಯು ನವೆಂಬರ್, 28 ರಂದು ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷರಾದ ಎಂ.ಜಿ.ಯತೀಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಯ ಅರೆ ಸೇನಾಪಡೆಯ ಮಾಜಿ ಯೋಧರು, ವೀರನಾರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದಸ್ಯತ್ವ ಪಡೆದುಕೊಳ್ಳುವಂತೆ ಅರೆಸೇನಾಪಡೆಯ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಸಂಚಾಲಕರು/ಕಾರ್ಯದರ್ಶಿ ಎನ್.ಎಂ.ಭೀಮಯ್ಯ ಅವರು ತಿಳಿಸಿದ್ದಾರೆ.








