Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಬಸವನಹಳ್ಳಿಯಲ್ಲಿ ಶರಣ ಸಾಹಿತ್ಯ ಪರಿಷತ್ತಿನ ವಿಚಾರ ಸಂಕಿರಣ : ಕನ್ನಡ ಭಾಷೆಯ ವಿಶ್ವಮನ್ನಣೆಗೆ ವಚನ ಸಾಹಿತ್ಯದ ಕೊಡುಗೆ ಅಪಾರ : ಗಮಕಿ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಆಶಯ*
ಇತ್ತೀಚಿನ ಸುದ್ದಿಗಳು

ಬಸವನಹಳ್ಳಿಯಲ್ಲಿ ಶರಣ ಸಾಹಿತ್ಯ ಪರಿಷತ್ತಿನ ವಿಚಾರ ಸಂಕಿರಣ : ಕನ್ನಡ ಭಾಷೆಯ ವಿಶ್ವಮನ್ನಣೆಗೆ ವಚನ ಸಾಹಿತ್ಯದ ಕೊಡುಗೆ ಅಪಾರ : ಗಮಕಿ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಆಶಯ*

November 28, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ನ.28 NEWS DESK : ಹನ್ನೆರಡನೇ ಶತಮಾನದ ವಚನಕಾರರು ರಚಿಸಿದ ವಚನಗಳಲ್ಲಿ ಮನುಷ್ಯನ ಬದುಕನ್ನು ಸುಂದರ ಗೊಳಿಸುವ ಜೀವನ ಮೌಲ್ಯಗಳು ಅಡಕವಾಗಿದ್ದು ಅವುಗಳನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿತ್ವವನ್ನು ಹೊಳಪು ಮಾಡಿಕೊಳ್ಳಿ ಎಂದು ತುಮಕೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗಮಕ ಕಲಾ ವಿದ್ವಾನ್ ಎಸ್.ಜಿ.ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ” ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆಗಳು ” ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಯಲ್ಲಿ ನೈತಿಕ ಪ್ರಜ್ಞೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಶರಣರ ವಚನಗಳನ್ನು ಅರಿತರೆ ಬದುಕು ಸಾರ್ಥಕ ವಾಗುತ್ತದೆ. ಕನ್ನಡ ಸಾಹಿತ್ಯವನ್ನು ವಿಶ್ವ ಮಟ್ಟದಲ್ಲಿ ಶ್ರೀಮಂತ ಗೊಳಿಸಿದ ವಚನಸಾಹಿತ್ಯ ಈ ನೆಲ ಮೂಲ ಸಂಸ್ಕ್ರತಿಯ ತಾಯಿ ಬೇರು ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದರು. ಯಾರಿಗೂ ನೋವಾಗದಂತೆ ಎಲ್ಲರ ಮನವನ್ನು ಅರಳಿಸುವಂತಹ ಮಾತು ಜ್ಯೋತಿರ್ಲಿಂಗ ದಂತಿರಬೇಕು. ಅದು ಮುತ್ತಿನ ಹಾರದಂತಿರಬೇಕು ಎಂದು ವಚನಗಳ ಮೂಲಕ ಶರಣರ ವಿಚಾರಧಾರೆಗಳನ್ನು ಅವರು ಪ್ರಸ್ತುತ ಪಡಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪರಶಿವಮೂರ್ತಿ ಮಾತನಾಡಿ, ಸಮಾಜದ ಅಂಕು ಡೊಂಕು ತಿದ್ದುವ ಮೂಲಕ ಸಮ ಸಮಾಜದ ಕನಸನ್ನು ನನಸು ಮಾಡಿದ ವಚನ ಸಾಹಿತ್ಯ ವಿದ್ಯಾರ್ಥಿಗಳ ಪಾಲಿಗೆ ಭಗವದ್ಗೀತೆ ಯಾಗಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಚನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಧ್ಯಯನ ಶೀಲರಾಗಬೇಕು ಎಂದರು. ತುಮಕೂರಿನ ವಿದ್ಯಾವಾಹಿನಿ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಕುಮಾರಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜ ಸುಧಾರಕರು ಹಾಗೂ ವಚನಕಾರರ ಬದುಕು ಆದರ್ಶವಾಗಬೇಕು. ವಿದ್ಯಾರ್ಥಿಗಳು ಉಜ್ವಲ ಜೀವನದ ಕನಸು ಬಿತ್ತಬೇಕು.
ಯೋಜನೆಗಳು ಮತ್ತು ನವ ನವೀನ ಯೋಚನೆಗಳ ಮೂಲಕ ನಿರಂತರವಾದ ಶ್ರಮದೊಂದಿಗೆ ಶಿಸ್ತು ಸಂಯಮ ಹಾಗೂ ಸಮಯ ಪಾಲನೆ ರೂಢಿಸಿಕೊಂಡರೆ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ ಎಂದರು. ತುಮುಕೂರಿನ ಸರಿಗಮಪ ಹಾಸ್ಯ ಕಲಾವಿದ ಮಿಮಿಕ್ರಿ ಈಶ್ವರಯ್ಯ ಅವರಿಂದ ಇದೇ ಸಂದರ್ಭ ಬೆಕ್ಕು, ಎಮ್ಮೆ, ಹಸು, ಶ್ವಾನಗಳು ಮುಂತಾದ ಪ್ರಾಣಿಗಳ ಕುರಿತಾದ ಮಿಮಿಕ್ರಿ ವಿದ್ಯಾರ್ಥಿಗಳ ಮನಸೂರೆಗೊಂಡಿತು. ತುಮಕೂರಿನ ಜಾನಪದ ಹಾಡುಗಾರ್ತಿ ಪ್ರೇಮ ಕುಮಾರಸ್ವಾಮಿ ಜಾನಪದ ಹಾಡುಗಳ ಮೂಲಕ ಮಕ್ಕಳ ಮನ ಸೆಳೆದರು. ಶಾಲೆಯ ಸಂಗೀತಾ ಶಿಕ್ಷಕ ಪುಟ್ಟರಾಜು ಅವರಿಂದ ವಚನಗಾಯನ ನಡೆಯಿತು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಶಾಲಾ ಪ್ರಾಂಶುಪಾಲೆ ಶ್ರೀಲಕ್ಷ್ಮಿ, ಶಿಕ್ಷಕರಾದ ಶಬರಿಗಿರೀಶ್, ಜಗದೀಶ್ ಹಾಗೂ ಶಾಲಾ ಸಮಿತಿ ಸದಸ್ಯ ಪ್ರಮೋದ್ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ : ಕೋಲ್ ಮಂದ್ ಜಾಗದಲ್ಲಿ ಆಲದ ಗಿಡ ನೆಟ್ಟ ಶಾಸಕದ್ವಯರು*
Next Article ಮೂರ್ನಾಡುವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಡಾ.ಮಾತಂಡ ಆರ್.ಅಯ್ಯಪ್ಪ ಸಲಹೆ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.