Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ಮೌನದ ಮನಸ್ಸಿನಲ್ಲಿ ಕೃತಿ ಲೋಕಾರ್ಪಣೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ಮೌನದ ಮನಸ್ಸಿನಲ್ಲಿ ಕೃತಿ ಲೋಕಾರ್ಪಣೆ*

November 29, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ನ.29 NEWS DESK : ಮನುಷ್ಯನ ಅಂತರಾಳದಲ್ಲಿ ವಿಭಿನ್ನ ಭಾವನೆ ಗುಚ್ಛವಿದ್ದು, ಅದನ್ನು ಹೊರಗೆಡವಿ ಲೋಕ ಹಿತಕ್ಕೆ ಮುಡಿಸಿ ಮುಕ್ತಿ ಹೊಂದುವುದೇ ನಿಸ್ವಾರ್ಥ ಬದುಕು ಎಂದು ಕೂರ್ಗ್ ವ್ಯಾಲಿ ಶಾಲೆಯ ಪ್ರಾಂಶುಪಾಲರಾದ ಸುಮ ಚಿತ್ರಭಾನು ಹೇಳಿದರು. ವಿರಾಜಪೇಟೆಯ ಮೊಗರಗಲ್ಲಿಯಲ್ಲಿನ ಕಲಾ ಉತ್ಸವ ವೇದಿಕೆಯಲ್ಲಿ ನಡೆದ ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದ ಯುವಕವಿ ಲವಿನ್ ಲೋಪೇಸ್ ಬರೆದಿರುವ ಮೌನದ ಮನಸ್ಸಿನಲ್ಲಿ ಚೊಚ್ಚಲ ಕೃತಿಯ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಲವಿನ್ ತಮ್ಮ ಕವನ ಸಂಕಲನದಲ್ಲಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕವನಗಳು ಎಲ್ಲರಿಗೂ ಮನ ಮುಟ್ಟುವ ಹಾಗೆ ರಚಿಸಿದ್ದು, ನೆಲ, ಜಲ, ಪ್ರೀತಿ, ವ್ಯಾತ್ಸಲ್ಯ ಹಾಗೂ ರೈತರ ಬಗ್ಗೆ ಕವನಗಳನ್ನು ರಚಿಸಿದ್ದಾರೆ. ಕನ್ನಡ ಸಾಹಿತ್ಯದ ಲೋಕ ವಿಶಾಲವಾಗಿದ್ದು, ಈ ನೆಲ, ಕವಿಗಳ ಬೀಡು. ಇಂತಹ ನಾಡಿನೊಳಗೆ ಉದಯಿಸಿ ಕಾವ್ಯ ಲೋಕಕ್ಕೆ ತನ್ನ ಕೃತಿ ಕೊಟ್ಟಿದ್ದು ಶ್ರೇಷ್ಠ ಭಾವ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರಲ್ಲದೆ, ಮುಂದೆಯೂ ಕನ್ನಡದಲ್ಲೇ ಕವನ ರಚನೆ ಮಾಡುವಂತೆ ಹೇಳಿದರು. ಸಾಹಿತಿ ವಿ.ಎನ್.ರಜಿತ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಲವಿನ್ ಅವರು ತಮ್ಮ ಸ್ವಂತ ಪ್ರಕಾಶನದ ಮೂಲಕ ಕನಸಿನ ಕೂಸು ಮೌನದ ಮನಸ್ಸಿನಲ್ಲಿ ಕೃತಿಯನ್ನು ಹೊರತಂದಿರುವುದು ಶ್ಲಾಘನೀಯ. ಪ್ರತಿಭಾನ್ವಿತ ಬರಹಗಾರರು ಸಮಾಜವನ್ನು ತಮ್ಮ ವಿಶಿಷ್ಟ ದೃಷ್ಟಿಕೋನಗಳಿಂದ ವಿಭಿನ್ನವಾಗಿ ಗ್ರಹಿಸುವ ಮಾದರಿಗಳನ್ನು ಕೊಡುಗೆ ನೀಡುತ್ತಾರೆ. ಮನುಷ್ಯ ಎಷ್ಟೇ ಬುದ್ಧಿ, ವಿದ್ಯೆ ಪಡೆದರೂ ಅದೆಲ್ಲಕ್ಕಿಂತ ಮುಖ್ಯವಾಗಿ ಅದನ್ನು ಸದ್ಬಳಕೆ ಮಾಡಿಕೊಳ್ಳುವುದು ಮುಖ್ಯ. ಭಾವನೆಗಳಿಂದ ಜೀವನವನ್ನು ವಿಭಿನ್ನವಾಗಿ ನೋಡುವ ಮೂಲಕ ಸಾಹಿತ್ಯ ರಚಿಸುವ ಜವಾಬ್ದಾರಿಯನ್ನು ನಿರ್ವಹಿಸುವ ಬರಹಗಾರರು ಸಮಾಜಕ್ಕೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಕಾವ್ಯ ಮತ್ತು ನಿರೂಪಣೆಯನ್ನು ನಿರ್ಮಿಸುವ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಅವರು ವಿಶ್ಲೇಷಿಸಿದರು. ಹೃದಯದಲ್ಲಿ ಪ್ರೀತಿ ಮತ್ತು ವಾತ್ಸಲ್ಯ ಇರುವವರಿಗೆ ಸಾಹಿತ್ಯ ಒಳ್ಳೆಯದು. ಅವರು ತಮ್ಮ ಕವಿತೆಗಳು ಮತ್ತು ಕಥೆಗಳ ಮೂಲಕ ಜೀವನದ ವಿವಿಧ ಚಿತ್ರಗಳನ್ನು ತೋರಿಸುತ್ತಾರೆ. ಜೀವನದ ಮೌಲ್ಯವು ಅವರ ಸಾಹಿತ್ಯದ ಮೂಲಕ ಪ್ರತಿಫಲಿಸುತ್ತದೆ. ಸಾಹಿತ್ಯವು ಓದುಗರ ಭಾವನೆಗಳು ಮತ್ತು ಆಲೋಚನೆಗಳಿಗೆ ಅನುಗುಣವಾಗಿ ಹೊಸ ಅರ್ಥಗಳನ್ನು ಹುಟ್ಟುಹಾಕುವಷ್ಟು ಪ್ರಬುದ್ಧವಾಗಿದೆ. ಈ ಕಾರಣಕ್ಕಾಗಿಯೇ ಅದು ಓದುಗರಲ್ಲಿ ಯೋಗಕ್ಷೇಮದ ಭಾವನೆಯನ್ನು ಸೃಷ್ಟಿಸುತ್ತದೆ. ಅದರ ಸಾರವನ್ನು ಎಳೆಯುತ್ತದೆ. ಸಾಹಿತ್ಯವು ಓದುಗರಲ್ಲಿ ಜೀವನ ಪ್ರೀತಿಯನ್ನು ಹೇಗೆ ಹೆಚ್ಚಿಸುತ್ತದೆ ಎಂದು ಹೇಳಿದರು. ಕೃತಿಯ ಕುರಿತು ಸಾಹಿತಿ ಪುಷ್ಪಲತಾ ಶಿವಪ್ಪ ಮಾತನಾಡಿ, ಬೌದ್ಧಿಕ ಹಸಿವುಳ್ಳವರಿಗೆ ಸಾಹಿತ್ಯ ರಚಿಸುವ ಶಕ್ತಿ ಸಿಗುತ್ತದೆ. ಅವರು ತಮ್ಮ ಸಾಹಿತ್ಯದ ಮೂಲಕ ಹೊಸದನ್ನು ನೀಡುತ್ತಾರೆ. ಈ ಕಾರಣದಿಂದಾಗಿಯೇ ಅವರ ಬರವಣಿಗೆ ಪ್ರಕಾಶಮಾನವಾಗಿದೆ. ಲವಿನ್ ಅವರೊಳಗೆ ಒಂದು ಬೌದ್ಧಿಕ ಹಸಿವು ಇತ್ತು, ಅದು ಅವರನ್ನು ನವೀನ ಕಾವ್ಯ ಶಕ್ತಿಗೆ ಸಿದ್ಧಪಡಿಸಿತು. ಈ ಕಾವ್ಯ ಶಕ್ತಿಯ ವಿಶೇಷತೆಯನ್ನು ಅವರ ಕವನ ಸಂಕಲನದ ಮೂಲಕ ಪ್ರಸ್ತುತಪಡಿಸಲಾಗಿದೆ. ಬಹುಮುಖಿ, ಪ್ರತಿಭಾನ್ವಿತ ವ್ಯಕ್ತಿತ್ವವು ಒಂದು ಪ್ರಮುಖ ಆಸ್ತಿ. ನಮ್ಮ ಜೀವನದಲ್ಲಿ ಕಷ್ಟಗಳು, ಸವಾಲುಗಳು ಮತ್ತು ಏರಿಳಿತಗಳು ಇಲ್ಲದಿದ್ದರೆ, ನಾವು ವಿಫಲರಾಗುತ್ತೇವೆ. ಪ್ರತಿಯೊಬ್ಬ ಸಾಧಕನು ದೈನಂದಿನ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಾಗ ಸೃಜನಶೀಲ ವ್ಯಕ್ತಿತ್ವದ ಜೊತೆಗೆ ಪ್ರತಿಭೆ ರೂಪುಗೊಳ್ಳುತ್ತದೆ. ಅದೇ ರೀತಿ, ಮೌನದ ಮನಸ್ಸಿನಲ್ಲಿ ಕೃತಿಯಲ್ಲಿ ಕಾವ್ಯದ ಸುಂದರವಾದ ಹಾರವನ್ನು ಹೆಣೆದಿದ್ದಾರೆ ಎಂದು ಹೇಳಿದರು. ಹಿರಿಯ ಸಾಹಿತಿ ಗಿರೀಶ್ ಕಿಗ್ಗಾಲು ಮಾತನಾಡಿ, ಜೀವನಾನುಭವದ ವಿವಿಧ ಭಾವನೆಗಳು ಕವನ ಸಂಕಲನದ ರೂಪವನ್ನು ಪಡೆದುಕೊಂಡಿವೆ. ಕಾವ್ಯ ಎನ್ನುವುದು ಪ್ರತಿ ಹೃದಯದಲ್ಲಿ ಪ್ರವಹಿಸುವ ಅಮೃತಧಾರೆಯಾಗಿದ್ದು, ಮಾನವತೆಯೆಡೆಗಿನ ನಿರಂತರ ತುಡಿತವಾಗಿದೆ ಎಂದರು. ಮುಖ್ಯ ಅತಿಥಿಗಳಾಗಿದ್ದ ಶಿಕ್ಷಕರಾದ ಮಹಮ್ಮದ್ ಶಾಫಿ ಮಾತನಾಡಿ, ಲವಿನ್ ಲೋಪೆಸ್ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದು, ಚಿಕ್ಕ ವಯಸ್ಸಿನಲ್ಲೇ ಬರವಣಿಗೆಯನ್ನು ಕರಗತ ಮಾಡಿಕೊಂಡು, ತಮ್ಮ ಮನಸ್ಸಿನ ಬಾವನೆಗಳನ್ನು ಕವಿತೆ ಮೂಲಕ ಹೊರಹಾಕಿ ಸಂಕಲನ ರೂಪದಲ್ಲಿ ಹೊರತಂದಿದ್ದಾರೆ. ಅವರ ಇನ್ನೋಂದು ಕೃತಿ ಮುದ್ರಣದ ಹಂತದಲ್ಲಿದ್ದು ಅವರ ಸಾದನೆ ಹೆಮ್ಮೆ ತಂದಿದೆ ಎಂದರು. ಕೃತಿಕಾರ ಲವಿನ್ ಲೋಪೇಸ್ ಮಾತನಾಡಿ, ಕಾವ್ಯ ಪರಂಪರೆ ಓದುಗರಿಗೆ ಹೊಸತನವನ್ನು ನೀಡುತ್ತದೆ. ಅನಾದಿ ಕಾಲದ ಜನರ ಸಂವಹನವೇ ಕಾವ್ಯ. ಯಾವತ್ತೂ ನಡೆಯುವವನೇ ಎಡವುದಲ್ಲದೇ ಮಲಗಿದವನು ಎಡವುದಿಲ್ಲ, ಇದೀಗ ಕಾವ್ಯದ ಹರಿವು ನನ್ನೊಳಗೆ ಹರಿಯುತ್ತಿದೆ. ಪ್ರಾದ್ಯಾಪಕರಾದ ಡಾ. ಕಾವೇರಿ ಪ್ರಕಾಶ್ ಮುನ್ನುಡಿ, ಸಾಹಿತಿ ವಿ.ಎನ್. ರಜಿತ ಬೆನ್ನುಡಿ ಬರೆದು ಹರಸಿದ್ದಾರೆ. ಸಾಹಿತ್ಯದೆಡೆಗೆ ಮನಸ್ಸು ತುಡಿಯುತ್ತಿದ್ದು ಸದ್ಯದಲ್ಲೇ ಇನ್ನೊಂದು ಕೃತಿ ಹೊರಬರಲಿದೆ ಎಂದು ಮನಸ್ಸಿನ ಭಾವನೆ ವ್ಯಕ್ತಪಡಿಸಿದರು. ಸಾಹಿತಿಗಳಾದ ರಜಿತ, ಪುಷ್ಪಲತಾ, ಮಹಮ್ಮದ್ ಶಾಫಿ, ಸುಮಚಿತ್ರಭಾನು, ಅನಿಮೋಳ್, ಸಾದಿಕ್, ಲವಿನ್, ಲೂಸಿ ಡಿಸೋಜಾ, ತೆರೆಸಾ ಮಿನೇಜಸ್ ಇವರನ್ನು ವಿಶೇಷವಾಗಿ ಗೌರವಿಸಲಾಯಿತು. ದಿಲಿಶ್ ನಾಯರ್ ಅವರು ಕವನ ಸಂಕಲನದಲ್ಲಿನ ಕವನವನ್ನು ರಾಗ ಸಂಯೋಜಿಸಿ ಹಾಡಿದರು. ಸಾದಿಕ್ ಆಟ್ರ್ಸ್ ಕಲಾ ವೇದಿಕೆಯ ಸಂಸ್ಥಾಪಕ ಸಾದಿಕ್ ಹಂಸ, ಸಂಗೀತ ಶಿಕ್ಷಕರಾದ ಅನಿಮೋಳ್, ಸಾಹಿತಿ ವೈಲೇಶ್ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಕೃತಕಾರರ ಮಾತೃಶ್ರಿ ಲೂಸಿ ಡಿಸೋಜಾ, ತೆರೆಸಾ ಮಿನೇಜಸ್, ಲಿಖಿನ್ ಲೋಪೇಸ್, ದೀಪಕ್, ಸರಿತಾ, ದಿವಾನ್, ಆಶಾ, ಸುಪ್ರಿತಾ, ವಿಶಾಲಾಕ್ಷಿ ಸೇರಿದಂತೆ ಸಾಹಿತ್ಯಾಭಿಮಾನಿಗಳು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ನನ್ನ-ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇರಲ್ಲ : ಸಿಎಂ ಸಿದ್ದರಾಮಯ್ಯ*
Next Article *ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ : ಸ್ಥಳದಲ್ಲೇ ಚಿರತೆ ಸಾವು*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.