Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*
ಮಹಾದೇಗುಲ

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

November 29, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನವು ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದಲ್ಲಿದೆ. ತೇತ್ರಾಯುಗದ ಕ್ಷತ್ರಿಯ ಸಂಹಾರಕ ಭಗವಾನ್ ಪರಶುರಾಮರು ತನ್ನ ಕೊಡಲಿಯನ್ನೆಸೆದು ಸೃಷ್ಟಿಸಿದ ಪವಿತ್ರ ಸ್ಥಳ. ಈ ತುಳು ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ದೇವರಗುಡ್ಡೆ ಎಂಬ ಎತ್ತರವಾದ ಗುಡ್ಡದಲ್ಲಿರುವ ಶ್ರೀ ಕ್ಷೇತ್ರದಲ್ಲಿ “ಅಂಬಾ(ಪಾರ್ವತಿ)ಗಣಪತಿ” ಸಮೇತರಾಗಿ ‘ಶಿವ ದೇವರು’ ನೆಲೆಸಿರುವುದರಿಂದ “ಸಾಂಬಸದಾಶಿವ” ಎಂಬ ಹೆಸರಿನಿಂದ ಆರಾಧಿಸಲ್ಪಡುತ್ತಿದ್ದು, ಶ್ರೀ ಕ್ಷೇತ್ರವು ಕಾರಣಿಕ ಹಿನ್ನಲೆಯುಳ್ಳ ಪರಮ ಪವಿತ್ರ ಕ್ಷೇತ್ರವಾಗಿದೆ.  :: ಇತಿಹಾಸ :: 
ಸಾವಿರಾರು ವರ್ಷಗಳ ಹಿಂದೆ ಭಗವಾನ್ ಪರಶುರಾಮ ದೇವರು ಈ ಎತ್ತರವಾದ ಗುಡ್ಡ ಪ್ರದೇಶದಲ್ಲಿ ತಪಸ್ಸನ್ನಾಚರಿಸಿದರು. ತದನಂತರ ಋಷಿಮುನಿಗಳು ಈ ಪ್ರದೇಶದಲ್ಲಿ ಹಲವು ಕಾಲ ಯಾಗ, ಯಜ್ಞ, ತಪಸ್ಸುಗಳನ್ನು ಮಾಡಿದ ತಪೋಭೂಮಿಯಾಯಿತು. ನಂತರದ ಕಾಲದಲ್ಲಿ ಇಲ್ಲಿಯ ಮೂಲ ನಿವಾಸಿಗಳು ತಮಗೆ ಬಂದ ತೊಂದರೆಗಳನ್ನು ಕಂಡು, ಈ ಪ್ರದೇಶದಲ್ಲಿ ದೈವಿ ಶಕ್ತಿಯಿದೆಯೆಂದು ತಿಳಿದು ತಮ್ಮದೇ ರೀತಿಯಲ್ಲಿ ದೇವಿ ಶಕ್ತಿ/ಕಾಳಿಶಕ್ತಿಯನ್ನು ಪೂಜಿಸಿ ಆರಾಧಿಸಿಕೊಂಡು ಬಂದಿದ್ದರು. ತದನಂತರ ರಾಜ ಮಹಾರಾಜರ ಆಳ್ವಿಕೆಯ ಕಾಲದಲ್ಲಿ ತಮಗೆ ಗಂಡು ಸಂತಾನ ಇಲ್ಲದೇ ದತ್ತು ಸ್ವೀಕಾರ ಮಾಡಬೇಕಾಗಿ ಬಂದ ಸಂದರ್ಭದಲ್ಲಿ ಪ್ರಾಯಶ್ಚಿತವಾಗಿ ಈ ಪ್ರದೇಶದ ಕೆಲವು ಕೃಷಿ ಭೂಮಿಯನ್ನು ಬ್ರಾಹ್ಮಣರಿಗೆ ದಾನವಾಗಿ ಕೊಟ್ಟು, ಇಲ್ಲಿ ವಾಸವಿರುವಂತೆ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟರು. ಸದ್ರಿ ಬ್ರಾಹ್ಮಣರಿಗೆ ಈ ಎತ್ತರದ ಪ್ರದೇಶದಲ್ಲಿರುವ ಪವಿತ್ರ ಚೈತನ್ಯವು ಗೋಚರಕ್ಕೆ ಬಂದು ಶ್ರೀ ಗಣಪತಿ ದೇವರನ್ನು ಆರಾಧಿಸಿಕೊಂಡು ಬಂದರು. ನಂತರದ ವರ್ಷಗಳಲ್ಲಿ ರಾಜರುಗಳ ಮುಂದಾಳತ್ವದಲ್ಲಿ ಇಲ್ಲಿ ಅಂಬಾಗಣಪತಿ ಸಮೇತನಾದ ಶ್ರೀ ಸಾಂಬಸದಾಶಿವ ದೇವಸ್ಥಾನವನ್ನು ನಿರ್ಮಿಸಿ ಪೂಜಾಧಿಗಳನ್ನು ಬಹಳ ವೈಭವದಿಂದ ನಡೆಸಿಕೊಂಡು ಬಂದರು. ನಂತರದ ಕಾಲದ ಸಹೋದರತ್ವದಲ್ಲಿ ಸ್ವಂತಿಕೆಗಾಗಿ ವೈರತ್ವ ಉಂಟಾಗಿ ಯುದ್ಧ ನಡೆದು ಕಷ್ಟ-ನಷ್ಟಗಳಾಗಿ, ಕಾಲಕ್ರಮೇಣ, ಕಾರಣಾಂತರದಿಂದ ಶ್ರೀ ಸಾಂಬಸದಾಶಿವ ದೇವಸ್ಥಾನವು ಶಿಥಿಲಗೊಂಡಿತೆಂದು ತಿಳಿದುಬಂದಿದೆ. ತದನಂತರ ಸುಮಾರು 800 ವರ್ಷಗಳ ಹಿಂದೆ, ಶಿಥಿಲಗೊಂಡಿರುವ ಈ ಕ್ಷೇತ್ರದ ಪವಿತ್ರ ಶಿವಲಿಂಗವನ್ನು ಚೌಟರ ಅರಸರ ಆಡಳಿತದಲ್ಲಿ ನಿರ್ಮಾಣಗೊಂಡ ಪುತ್ತಿಗೆ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಪ್ರತಿಷ್ಠೆ ಮಾಡಲಾಯಿತೆಂದು ತಿಳಿದುಬಂದಿದೆ. ಸುಮಾರು ವರ್ಷಗಳ ಹಿಂದೆ ದೇವರಗುಡ್ಡೆ ಎಂಬ ಹೆಸರಿದ್ದ ಈ ಎತ್ತರದ ಕಾಡು ಪ್ರದೇಶದಲ್ಲಿ ಶಿವ ದೇವಾಲಯವಿದ್ದ ಕುರುಹುಗಳು ಲಭಿಸಿದವು. ಸದ್ರಿ ಕ್ಷೇತ್ರವನ್ನು ನವ ನಿರ್ಮಾಣಗೊಳಿಸಬೇಕೆಂದು ಸಂಕಲ್ಪ ಮಾಡಿ, ಶ್ರೀ ಎಮ್.ಕಾಂತಪ್ಪ ಶೆಟ್ಟಿಯವರ ಮುಂದಾಳತ್ವದಲ್ಲಿ ಶ್ರೀ ಮಿಜಾರು ಗುತ್ತು ಆನಂದ ಆಳ್ವ ಇವರ ಘನ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ.ಐ.ರಾಮ ಆಸ್ರಣ್ಣ ಅವರ ಆಶೀರ್ವಚನದೊಂದಿಗೆ ಜೀರ್ಣೋದ್ಧಾರ ಸಮಿತಿ ರಚನೆ ಮಾಡಿದರು. ಕಾರ್ಯಪ್ರವೃತರಾಗಿ, ಪ್ರಕೃತವಿರುವ ಗರ್ಭಗುಡಿಯೊಂದಿಗೆ ಈ ಹಿಂದೆ ಇದ್ದ ಸುತ್ತು ಪೌಳಿಯೊಂದಿಗೆ ಶ್ರೀ ಸಾಂಬಸದಾಶಿವ ದೇವಸ್ಥಾನವು ನಿರ್ಮಾಣವಾಯಿತು.  :: ಉತ್ಸವಗಳು ::  ಶ್ರೀ ಕ್ಷೇತ್ರದಲ್ಲಿ ಭಜನೆಗಳು, ರಂಗಪೂಜೆಗಳು, ನಿತ್ಯನಂದಾದೀಪ ಸೇವೆ, ಮಾಸ ಶಿವರಾತ್ರಿ, ಶಿವ ಜಾಗರಣೆ, ಚೌತಿ, ದೀಪಾವಳಿ ಆಚರಣೆ, ಹೋಮ-ಹವನಗಳು, ಅನ್ನದಾನದಿ ಸೇವೆಗಳು, ತ್ರಿಕಾಲ ಪೂಜಾ ಸೇವೆಗಳು ನಡೆಯುತ್ತವೆ.

 

Share. Facebook Twitter Pinterest LinkedIn Tumblr Email WhatsApp
Previous Article*ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*
Next Article ಕುಶಾಲನಗರದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ : ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಸುಧಾರಿಸಲು ಬಿಇಓ ಕೃಷ್ಣಪ್ಪ ಸಲಹೆ*

Recommended: Website design development company services in Mangalore Forex Trading Teacher in India

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

December 22, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

October 22, 2025

*ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ*

August 28, 2025

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.