Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಮಹಾದೇಗುಲ»*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*
ಮಹಾದೇಗುಲ

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

ನವೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನವು ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದಲ್ಲಿದೆ. ತೇತ್ರಾಯುಗದ ಕ್ಷತ್ರಿಯ ಸಂಹಾರಕ ಭಗವಾನ್ ಪರಶುರಾಮರು ತನ್ನ ಕೊಡಲಿಯನ್ನೆಸೆದು ಸೃಷ್ಟಿಸಿದ ಪವಿತ್ರ ಸ್ಥಳ. ಈ ತುಳು ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ದೇವರಗುಡ್ಡೆ ಎಂಬ ಎತ್ತರವಾದ ಗುಡ್ಡದಲ್ಲಿರುವ ಶ್ರೀ ಕ್ಷೇತ್ರದಲ್ಲಿ “ಅಂಬಾ(ಪಾರ್ವತಿ)ಗಣಪತಿ” ಸಮೇತರಾಗಿ ‘ಶಿವ ದೇವರು’ ನೆಲೆಸಿರುವುದರಿಂದ “ಸಾಂಬಸದಾಶಿವ” ಎಂಬ ಹೆಸರಿನಿಂದ ಆರಾಧಿಸಲ್ಪಡುತ್ತಿದ್ದು, ಶ್ರೀ ಕ್ಷೇತ್ರವು ಕಾರಣಿಕ ಹಿನ್ನಲೆಯುಳ್ಳ ಪರಮ ಪವಿತ್ರ ಕ್ಷೇತ್ರವಾಗಿದೆ.  :: ಇತಿಹಾಸ :: 
ಸಾವಿರಾರು ವರ್ಷಗಳ ಹಿಂದೆ ಭಗವಾನ್ ಪರಶುರಾಮ ದೇವರು ಈ ಎತ್ತರವಾದ ಗುಡ್ಡ ಪ್ರದೇಶದಲ್ಲಿ ತಪಸ್ಸನ್ನಾಚರಿಸಿದರು. ತದನಂತರ ಋಷಿಮುನಿಗಳು ಈ ಪ್ರದೇಶದಲ್ಲಿ ಹಲವು ಕಾಲ ಯಾಗ, ಯಜ್ಞ, ತಪಸ್ಸುಗಳನ್ನು ಮಾಡಿದ ತಪೋಭೂಮಿಯಾಯಿತು. ನಂತರದ ಕಾಲದಲ್ಲಿ ಇಲ್ಲಿಯ ಮೂಲ ನಿವಾಸಿಗಳು ತಮಗೆ ಬಂದ ತೊಂದರೆಗಳನ್ನು ಕಂಡು, ಈ ಪ್ರದೇಶದಲ್ಲಿ ದೈವಿ ಶಕ್ತಿಯಿದೆಯೆಂದು ತಿಳಿದು ತಮ್ಮದೇ ರೀತಿಯಲ್ಲಿ ದೇವಿ ಶಕ್ತಿ/ಕಾಳಿಶಕ್ತಿಯನ್ನು ಪೂಜಿಸಿ ಆರಾಧಿಸಿಕೊಂಡು ಬಂದಿದ್ದರು. ತದನಂತರ ರಾಜ ಮಹಾರಾಜರ ಆಳ್ವಿಕೆಯ ಕಾಲದಲ್ಲಿ ತಮಗೆ ಗಂಡು ಸಂತಾನ ಇಲ್ಲದೇ ದತ್ತು ಸ್ವೀಕಾರ ಮಾಡಬೇಕಾಗಿ ಬಂದ ಸಂದರ್ಭದಲ್ಲಿ ಪ್ರಾಯಶ್ಚಿತವಾಗಿ ಈ ಪ್ರದೇಶದ ಕೆಲವು ಕೃಷಿ ಭೂಮಿಯನ್ನು ಬ್ರಾಹ್ಮಣರಿಗೆ ದಾನವಾಗಿ ಕೊಟ್ಟು, ಇಲ್ಲಿ ವಾಸವಿರುವಂತೆ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟರು. ಸದ್ರಿ ಬ್ರಾಹ್ಮಣರಿಗೆ ಈ ಎತ್ತರದ ಪ್ರದೇಶದಲ್ಲಿರುವ ಪವಿತ್ರ ಚೈತನ್ಯವು ಗೋಚರಕ್ಕೆ ಬಂದು ಶ್ರೀ ಗಣಪತಿ ದೇವರನ್ನು ಆರಾಧಿಸಿಕೊಂಡು ಬಂದರು. ನಂತರದ ವರ್ಷಗಳಲ್ಲಿ ರಾಜರುಗಳ ಮುಂದಾಳತ್ವದಲ್ಲಿ ಇಲ್ಲಿ ಅಂಬಾಗಣಪತಿ ಸಮೇತನಾದ ಶ್ರೀ ಸಾಂಬಸದಾಶಿವ ದೇವಸ್ಥಾನವನ್ನು ನಿರ್ಮಿಸಿ ಪೂಜಾಧಿಗಳನ್ನು ಬಹಳ ವೈಭವದಿಂದ ನಡೆಸಿಕೊಂಡು ಬಂದರು. ನಂತರದ ಕಾಲದ ಸಹೋದರತ್ವದಲ್ಲಿ ಸ್ವಂತಿಕೆಗಾಗಿ ವೈರತ್ವ ಉಂಟಾಗಿ ಯುದ್ಧ ನಡೆದು ಕಷ್ಟ-ನಷ್ಟಗಳಾಗಿ, ಕಾಲಕ್ರಮೇಣ, ಕಾರಣಾಂತರದಿಂದ ಶ್ರೀ ಸಾಂಬಸದಾಶಿವ ದೇವಸ್ಥಾನವು ಶಿಥಿಲಗೊಂಡಿತೆಂದು ತಿಳಿದುಬಂದಿದೆ. ತದನಂತರ ಸುಮಾರು 800 ವರ್ಷಗಳ ಹಿಂದೆ, ಶಿಥಿಲಗೊಂಡಿರುವ ಈ ಕ್ಷೇತ್ರದ ಪವಿತ್ರ ಶಿವಲಿಂಗವನ್ನು ಚೌಟರ ಅರಸರ ಆಡಳಿತದಲ್ಲಿ ನಿರ್ಮಾಣಗೊಂಡ ಪುತ್ತಿಗೆ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಪ್ರತಿಷ್ಠೆ ಮಾಡಲಾಯಿತೆಂದು ತಿಳಿದುಬಂದಿದೆ. ಸುಮಾರು ವರ್ಷಗಳ ಹಿಂದೆ ದೇವರಗುಡ್ಡೆ ಎಂಬ ಹೆಸರಿದ್ದ ಈ ಎತ್ತರದ ಕಾಡು ಪ್ರದೇಶದಲ್ಲಿ ಶಿವ ದೇವಾಲಯವಿದ್ದ ಕುರುಹುಗಳು ಲಭಿಸಿದವು. ಸದ್ರಿ ಕ್ಷೇತ್ರವನ್ನು ನವ ನಿರ್ಮಾಣಗೊಳಿಸಬೇಕೆಂದು ಸಂಕಲ್ಪ ಮಾಡಿ, ಶ್ರೀ ಎಮ್.ಕಾಂತಪ್ಪ ಶೆಟ್ಟಿಯವರ ಮುಂದಾಳತ್ವದಲ್ಲಿ ಶ್ರೀ ಮಿಜಾರು ಗುತ್ತು ಆನಂದ ಆಳ್ವ ಇವರ ಘನ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ.ಐ.ರಾಮ ಆಸ್ರಣ್ಣ ಅವರ ಆಶೀರ್ವಚನದೊಂದಿಗೆ ಜೀರ್ಣೋದ್ಧಾರ ಸಮಿತಿ ರಚನೆ ಮಾಡಿದರು. ಕಾರ್ಯಪ್ರವೃತರಾಗಿ, ಪ್ರಕೃತವಿರುವ ಗರ್ಭಗುಡಿಯೊಂದಿಗೆ ಈ ಹಿಂದೆ ಇದ್ದ ಸುತ್ತು ಪೌಳಿಯೊಂದಿಗೆ ಶ್ರೀ ಸಾಂಬಸದಾಶಿವ ದೇವಸ್ಥಾನವು ನಿರ್ಮಾಣವಾಯಿತು.  :: ಉತ್ಸವಗಳು ::  ಶ್ರೀ ಕ್ಷೇತ್ರದಲ್ಲಿ ಭಜನೆಗಳು, ರಂಗಪೂಜೆಗಳು, ನಿತ್ಯನಂದಾದೀಪ ಸೇವೆ, ಮಾಸ ಶಿವರಾತ್ರಿ, ಶಿವ ಜಾಗರಣೆ, ಚೌತಿ, ದೀಪಾವಳಿ ಆಚರಣೆ, ಹೋಮ-ಹವನಗಳು, ಅನ್ನದಾನದಿ ಸೇವೆಗಳು, ತ್ರಿಕಾಲ ಪೂಜಾ ಸೇವೆಗಳು ನಡೆಯುತ್ತವೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

ಡಿಸೆಂಬರ್ 22, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

ಅಕ್ಟೋಬರ್ 22, 2025

*ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ*

ಆಗಷ್ಟ್ 28, 2025

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.