Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಲ್ಲ : ಸಿಎಂ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಲ್ಲ : ಸಿಎಂ ಸಿದ್ದರಾಮಯ್ಯ*

December 2, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು ಡಿ.2 NEWS DESK : ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಯುವನಿಕ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಹಗಲಿರುಳು ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ.  ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ 1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು, 4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉತ್ತಮ ಕ್ರೀಡಾಪಟುಗಳನ್ನು ರಾಜ್ಯಕ್ಕೆ ನೀಡುವ ತರಬೇತುದಾರರಿಗೆ ಒಟ್ಟು 9 ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತಿದ್ದು, 3 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ.
ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕರನ್ನು ಗುರುತಿಸಿ ಒಟ್ಟು 15 ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಲಾಗಿದ್ದು, ₹2 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಖಾಸಗಿ ಕ್ಷೇತ್ರದ ಸಂಸ್ಥಗಳನ್ನು ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದರು.  ಕರ್ನಾಟಕದ ಕ್ರೀಡಾಪಟುಗಳಿಗೆ ಗೆಲ್ಲುವ ಸಾಧ್ಯತೆಗಳಿವೆ, ಪ್ರಯತ್ನ ಮಾಡಬೇಕಷ್ಟೆ. 2028 ರಲ್ಲಿ ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳಲಿರುವ 60 ಜನರನ್ನು ಗುರುತಿಸಲಾಗಿದ್ದು, ಪ್ರತಿ ವರ್ಷ 10 ಲಕ್ಷ ರೂ. ಗಳನ್ನು ತರಬೇತಿಯ ಅವಧಿಯಲ್ಲಿಯೇ ನೀಡಲಾಗುತ್ತದೆ. ಕ್ರೀಡಾಪಟುಗಳು ಯಾವುದಾದರೂ ಒಂದು ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಸಂಪೂರ್ಣ ಏಕಾಗ್ರತೆ, ಗುರಿಯಿಟ್ಟುಕೊಂಡು ಸಾಧನೆ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು. ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ. ಒಲಂಪಿಕ್ಸ್ ಹಾಗೂ ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಗೆದ್ದವರಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಕರ್ನಾಟಕ ಉತ್ತಮ ಕ್ರೀಡಾಪಟುಗಳನ್ನು ಈವರೆಗೆ ರೂಪಿಸಿದೆ. ಹಾಕಿಯಂತಹ ಕ್ರೀಡೆಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. ಅಥ್ಲೆಟಿಕ್ಸ್ ನಲ್ಲಿಯೂ ಸಾಧನೆ ಮಾಡಬೇಕು. ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು. ಅರ್ಜುನನಿಗಿಂತ ಮೀರಿ ಬಿಲ್ಲುವಿದ್ಯೆಯಲ್ಲಿ ಪರಿಣಿತಿ ಸಾಧಿಸಿದ್ದರಿಂದ ಅವನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ದ್ರೋಣಾಚಾರ್ಯರು ಪಡೆಯುತ್ತಾರೆ. ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಏಕಲವ್ಯ ಪ್ರಶಸ್ತಿ ಪಡೆದವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸುತ್ತೇನೆ. ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೂ ಸ್ಪೂರ್ತಿಯಾಗಲಿ ಎಂದರು.

Share. Facebook Twitter Pinterest LinkedIn Tumblr Email WhatsApp
Previous Article*ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು : ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ  : ಸಿಎಂ ಸಿದ್ದರಾಮಯ್ಯ*
Next Article *ಸೋಮವಾರಪೇಟೆ : ಆಂಜನೇಯ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.