Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಬ್ಬಗಳ ಸಂದರ್ಭ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ : ವಿರಾಜಪೇಟೆ ನಗರ ವರ್ತಕರ ಸಂಘ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಬ್ಬಗಳ ಸಂದರ್ಭ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ : ವಿರಾಜಪೇಟೆ ನಗರ ವರ್ತಕರ ಸಂಘ ಆಗ್ರಹ*

ಡಿಸೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ರಾತ್ರಿ ವೇಳೆ ಅಂಗಡಿ ಮುಂಗಟ್ಟುಗಳು, ವ್ಯಾಪಾರ ಮಳಿಗೆಗಳನ್ನು ಶೀಘ್ರವಾಗಿ ಮುಚ್ಚುವುದರಿಂದ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ, ವರ್ತಕರುಗಳ ಹಿತದೃಷ್ಟಿಯಿಂದ ಕಾಲಾವಧಿಯನ್ನು ವಿಸ್ತರಿಸಿಕೊಡಬೇಕೆಂದು ವಿರಾಜಪೇಟೆ ನಗರ ವರ್ತಕರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಅವರ ನೇತೃತ್ವದಲ್ಲಿ ವಿರಾಜಪೇಟೆಯ ಡಿವೈಎಸ್‍ಪಿ ಮಹೇಶ್ ಕುಮಾರ್ ಹಾಗೂ ನಗರ ಠಾಣಾಧಿಕಾರಿ ಹೆಚ್.ಎಸ್. ಪ್ರಮೋದ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಪಿ.ಎ..ಮಂಜುನಾಥ್ ಅವರು, ರಾತ್ರಿ ವೇಳೆ ಸಾಮಾನು ಸಗಟುಗಳನ್ನು ಲಾರಿ ಅಥವಾ ಇನ್ನಿತರ ವಾಹನಗಳಲ್ಲಿ ತಂದು ಇಳಿಸಿ ಅದರ ನಿರ್ವಹಣೆ ಮಾಡುವ ಸಂದರ್ಭ ಕಾಲಾವಕಾಶ ಹೆಚ್ಚು ಬೇಕಾಗುತ್ತದೆ. ಅಲ್ಲದೆ ದೋರದಿಂದ ಬಂದವರಿಗೆ ಎನಾದರೂ ವಸ್ತುಗಳನ್ನು ತೆಗೆದುಕೊಳ್ಳಬೇಕೆಂದರೂ ಅಂಗಡಿಗಳು ಇರುವುದಿಲ್ಲ. ಅಲ್ಲದೆ ಕನಿಷ್ಟ ಕಾಫಿಯಾದರೂ ಕುಡಿಬೇಕೆಂದರೆ ಅದಕ್ಕೂ ಇಲ್ಲಿ ಅವಕಾಶ ಇಲ್ಲ. ಎಲ್ಲವೂ ಮುಚ್ಚಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಸಮಸ್ಯೆ, ವ್ಯಾಪಾರಸ್ಥರಿಗೂ ನಷ್ಟವಾಗುತ್ತದೆ ಎಂದರು. ಈ ಸಮಸ್ಯೆ ಕುರಿತು ವರ್ತಕರ ನಿರಂತರ ಬೇಡಿಕೆಯಂತೆ ಪೋಲಿಸ್ ಇಲಾಖೆಗೆ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ ಕೊಡುವಂತೆ ವಿರಾಜಪೇಟೆಯ ವರ್ತಕರ ಸಂಘದ ವತಿಯಿಂದ ವಿರಾಜಪೇಟೆಯ ವೃತ್ತ ನಿರೀಕ್ಷಕರಿಗೆ ಮನವಿ ಮಾಡುತ್ತಿದ್ದೇವೆ ಎಂದರಲ್ಲದೆ, ಕೆಲ ಸಾರ್ವಜನಿಕರು ರಾತ್ರಿ ಹೊತ್ತು ಮಧ್ಯಪಾನ ಮಾಡಿ ವರ್ತಕರಿಗೆ ತೊಂದರೆ ನೀಡುವಾಗ ತುರ್ತಾಗಿ ಆಗಮಿಸಿ, ಪೆÇಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಚಾರಗಳನ್ನು ಮನಗಂಡು ದಯವಿಟ್ಟು ಹಬ್ಬ ಹರಿದಿನಗಳ ಸಮಯದಲ್ಲಿ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ ಕೊಡಬೇಕು ಹಾಗೂ ಸಾರ್ವಜನಿಕರಿಗೆ ಸಾಮಾನು, ಸಗಟುಗಳನ್ನು ತುಂಬಲು ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ಸ್ಥಳದಲ್ಲಿ ಕೆಲ ನಿಮಿಷ ಆಟೋವನ್ನು ನಿಲ್ಲಿಸಲು ಅನುವು ಮಾಡಿಕೊಟ್ಟು ಸಹಕರಿಸಬೇಕೆಂದು ಮನವಿ ಮಾಡಿದರು. ಸಂಘದ ನಿರ್ದೇಶಕ ಕೆ.ಹೆಚ್.ಮೊಹಮ್ಮದ್ ರಾಫಿ ಮಾತನಾಡಿ, ಪುರಸಭೆ ವ್ಯಾಪ್ತಿಯ ಅಂಗಡಿ ಮಳಿಗೆಗಳ ಮುಚ್ಚುವಿಕೆಗೆ ಈಗಾಗಲೇ ಸಮಯವನ್ನು ನಿಗದಿ ಪಡಿಸಿರುತ್ತೀರಿ, ಆದರೆ ಹಬ್ಬ ಹರಿದಿನಗಳ ಸಮಯದಲ್ಲಿ ವ್ಯಾಪಾರ ವಹಿವಾಟು ನಡೆಸಲು ಹೆಚ್ಚುವರಿ ಸಮಯಾವಧಿಯು ಅವಶ್ಯಕವಾಗಿದೆ. ಎಂದಿನಂತೆ ನಿಗದಿತ ಸಮಯದಲ್ಲಿ ಮಳಿಗೆಗಳನ್ನು ಮುಚ್ಚುವುದರಿಂದ ಸಾರ್ವಜನಿಕರಿಗೂ ತೊಂದರೆಯಾಗುತ್ತಿರುವುದಾಗಿದೆ ಅಲ್ಲದೆ ಸಾಮಾನು ಸಗಟುಗಳನ್ನು ಖರೀದಿಸಿ ಸ್ವಂತ ವಾಹನವಿಲ್ಲದೆ ಇರುವವರು ಬಾಡಿಗೆ ಆಟೋದಲ್ಲಿ ಸಾಗಿಸುವುದು ಅನಿವಾರ್ಯವಾಗುತ್ತದೆ. ಸ್ಥಳದಲ್ಲಿ ನಿಲ್ಲಿಸಿ ಸಗಟುಗಳನ್ನು ತುಂಬಲು ಅನುವು ಮಾಡಿಕೊಟ್ಟಲ್ಲಿ ಬಡಬಗ್ಗರಿಗೆ ತುಂಬಾ ಉಪಕಾರವಾಗುತ್ತದೆ ಎಂದರು. ಮನವಿ ಸ್ವೀಕರಿಸಿ ಮಾತನಾಡಿದ ಡಿವೈಎಸ್‍ಪಿ ಮಹೇಶ್ ಕುಮಾರ್ ಅವರು, ಸಮಯ ಸಂದರ್ಭ ನೋಡಿಕೊಂಡು ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸಂಘದ ನಿರ್ದೇಶಕರುಗಳಾದ ಸುರೇಶ್ ಆರ್, ರಾಜೇಶ್ ಆರ್ ಶೇಟ್, ಶಶಿ ಕೆ.ಆರ್, ಹಾಗೂ ಎಂ.ಎಸ್ ಮೊಹಮ್ಮದ್ ಹನೀಫ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.