
ವಿರಾಜಪೇಟೆ ಡಿ.12 NEWS DESK : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ನಡೆದ ಕಾವೇರಿ ಕಲೋತ್ಸವದ ಕ್ರೀಡಾ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರು, ಥ್ರೋಬಾಲ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ತಂಡದಲ್ಲಿ ಸ್ಪರ್ಧಿಸಿದ ಆಟಗಾರ್ತಿಯರು 10ನೇ ತರಗತಿಯ ಮುಲ್ಲೆಂಗಡ ಪೂರ್ವಿಕ ಪೂವಮ್ಮ, ನೀಲಮಾಡ್, ತನ್ಯ ರೈ ಬಿ.ಎಸ್ ,ಹನಾಫಲಕ್ ಎಸ್.ಎಂ.ಕುಟ್ಟನ ಯಶ್ಮಿತ, ಪಳೆಯಂಡ ಕಾಜಲ್ ಪಿ.ಎಸ್, 9ನೇ ತರಗತಿಯ ಚೇಂದಿರ ದರಾನಿಯತ ಸ್ಲಿನ್ಟಿ ಜೆ, ನೆಲ್ಲಚಂಡ ಪೊನ್ನಮ್ಮ ಎನ್, ಗುಡ್ಡಂಡ ಮಾನ್ವಿಮುತ್ತಮ್ಮ, ಬೊವ್ವೇರಿಯಂಡ ಹನ್ಸಿಕ ಪೊನ್ನಪ್ಪ ಹಾಗೂ 8ನೇ ತರಗತಿಯ ನಾಯಕಂಡ ಮಾನ್ಯ ಎನ್.ಬಿ,ಹೋಲಿಕ ಪಿ.ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿರುತ್ತಾರೆ. ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಬೋಧಕ-ಬೋದಕೇತರ ವೃಂದದವರು, ವಿದ್ಯಾರ್ಥಿಗಳ ಪೋಕಷರು ಅಭಿನಂದಿಸಿದ್ದಾರೆ.









