Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮಹಿಳಾ ಸರ್ವಧರ್ಮ ಸಮ್ಮೇಳನ : ಪರಸ್ಪರ ಗೌರವ, ಸಹಬಾಳ್ವೆಯ ಜೀವನ ನಡೆಸಲು ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮಹಿಳಾ ಸರ್ವಧರ್ಮ ಸಮ್ಮೇಳನ : ಪರಸ್ಪರ ಗೌರವ, ಸಹಬಾಳ್ವೆಯ ಜೀವನ ನಡೆಸಲು ಗಣ್ಯರ ಕರೆ*

ಡಿಸೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.15 NEWS DESK : ಅಹ್ಮದಿಯಾ ಮುಸ್ಲಿಂ ಜಮಾತ್‍ನ ಮಹಿಳಾ ವಿಭಾಗದ ವತಿಯಿಂದ ನಗರದ ಬಾಲಭವನದಲ್ಲಿ “ಮಹಿಳಾ ಸರ್ವಧರ್ಮ ಸಮ್ಮೇಳನ” ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಎಲ್ಲರ ದೇಹದಲ್ಲಿ ಹರಿಯುವ ರಕ್ತ ಒಂದೇ, ನಾವು ಎಲ್ಲರೂ ಶಾಂತಿಗಾಗಿ ಒಟ್ಟಾಗಿ ಸೇರಿ ಸಹಬಾಳ್ವೆ ನಡೆಸಬೇಕೆಂದು ಹೇಳಿದರು. ಲಜ್ನಾ ಇಮಾಇಲ್ಲಾಹ್ ಸದಸ್ಯರಾದ ಡಾ.ಅಫ್ರೀನ್ ಮೆಲ್ವಿನ್ ಮಾತನಾಡಿ ಬಹುಧರ್ಮೀಯ ಹಾಗೂ ಬಹುಸಾಂಸ್ಕೃತಿಕ ಸಮಾಜದಲ್ಲಿ ಜೀವಿಸುತ್ತಿರುವುದರಿಂದ ಪರಸ್ಪರ ಧರ್ಮಗಳ ಸಂಪ್ರದಾಯಗಳು ಮತ್ತು ನಂಬಿಕೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಲಜ್ನಾ ಇಮಾಇಲ್ಲಾಹ್ ಸಂಸ್ಥೆಯ ಅಧ್ಯಕ್ಷೆ ಜೀನತ್ ಜಫ್ರುಲ್ಲಾ ಅವರು “ಇಸ್ಲಾಂನಲ್ಲಿ ಮಹಿಳೆಯ ಸ್ಥಾನಮಾನ” ವಿಷಯದ ಕುರಿತು ಮಾತನಾಡಿ, ಇಸ್ಲಾಂ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ, ಸಮಾನತೆ, ಘನತೆ, ಗೌರವ, ರಕ್ಷಣೆ ಹಾಗೂ ಸೂಕ್ತ ಸ್ಥಾನಮಾನವನ್ನು ನೀಡುತ್ತದೆ ಎಂದು ವಿವರಿಸಿದರು. ಶಿಕ್ಷಣ, ಉದ್ಯೋಗ, ಆರ್ಥಿಕ ಹಕ್ಕುಗಳು, ಭದ್ರತೆ ಹಾಗೂ ಸಂರಕ್ಷಣೆ, ವಿವಾಹ ಮತ್ತು ವಿಚ್ಛೇದನ ಸೇರಿದಂತೆ ಜೀವನದ ಎಲ್ಲಾ ವಲಯಗಳಲ್ಲಿ ಮಹಿಳೆಯರಿಗೆ ಹಕ್ಕುಗಳನ್ನು ನೀಡಿರುವುದನ್ನು ಹಲವಾರು ಉದಾಹರಣೆಗಳ ಮೂಲಕ ವಿವರಿಸಿದರು. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಕೆ.ಭರತ್ ಅವರು ಮಾತನಾಡಿ, ಧರ್ಮ ಎಂದರೆ ಕೇವಲ ಮಾತಿನಲ್ಲಿ ಉಳಿಯದೇ, ನಮ್ಮೊಳಗೆ ನೆಲೆಸಿದ್ದು, ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದದ್ದು ಅಗತ್ಯ ಎಂದು ಹೇಳಿದರು. ಮಹಿಳೆಯರಲ್ಲಿ ಅಪಾರ ಶಕ್ತಿ ಇದೆ. ಸೌಹಾರ್ದತೆ, ಶಾಂತಿ ಮತ್ತು ಏಕತೆಯ ಉದ್ದೇಶದೊಂದಿಗೆ ಮಹಿಳೆಯರು ಒಟ್ಟಾಗಿ ಬಂದರೆ ಯಾವುದೇ ಸಾಧನೆಯನ್ನು ಮಾಡಬಹುದು ಎಂದು ಹೇಳಿದರು.
ಮಡಿಕೇರಿಯ ಸೈಂಟ್ ಮೈಕಲ್ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಸಿಲಿಯಾ ಅವರು ಮಾತನಾಡಿ, ಲೋಕದಲ್ಲಿ ಒಂದೇ ಒಂದು ಧರ್ಮವಿದ್ದು ಅದು ಮಾನವೀಯತೆಯ ಧರ್ಮ ಎಂದು ಹೇಳಿದರು. ಪ್ರೀತಿ, ಕ್ಷಮೆ, ತ್ಯಾಗ ಮತ್ತು ಸಹನಶೀಲತೆಯ ಮೂಲಕ ಶಾಂತಿಯ ಮೂಲಭೂತ ಮಾನವ ಸಂಬಂಧಗಳು ಗಟ್ಟಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಲಜ್ನಾ ಇಮಾಇಲ್ಲಾಹ್ ದಕ್ಷಿಣ ವಲಯದ ಅಧ್ಯಕ್ಷ ರೂಮಾನ್ ರಿಝ್ವಾನ್ ಅವರು ಮಾತನಾಡಿ, ಇಸ್ಲಾಂ ಧರ್ಮ ಹಾಗೂ ಇತರ ಧರ್ಮಗಳೊಂದಿಗೆ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಸಾಮರಸ್ಯದ ಅಗತ್ಯತೆಯನ್ನು ವಿವರಿಸಿದರು.
ಇಸ್ಲಾಂ ಎಂಬ ಪದದ ಅರ್ಥವೇ ಶಾಂತಿ, ಎಲ್ಲಾ ಧರ್ಮಗಳನ್ನು ಗೌರವಿಸುವುದು ಅತ್ಯಂತ ಮಹತ್ವದ್ದು ಎಂದು ಹೇಳಿದರು. ಸಂಘಟನೆಯ ಅಧ್ಯಕ್ಷರಾದ ಜೀನತ್ ಜಫ್ರುಲ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮ್ಮೇಳನದಲ್ಲಿ ವಿವಿಧ ಧರ್ಮಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮವು ಪವಿತ್ರ ಕುರ್‍ಆನ್ ಪಾರಾಯಣದೊಂದಿಗೆ ಆರಂಭಗೊಂಡಿತು. “ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ಒಂದೇ, ನಮ್ಮ ದೇಹದಲ್ಲಿ ಹರಿಯುವ ರಕ್ತ ಒಂದೇ” ಎಂಬ ಸಂದೇಶ ಸಾರುವ ಮೈತ್ರಿಗಾನವನ್ನು ನಸೀರಾ ಹಾಡಿದರು. ಕಾರ್ಯಕ್ರಮದಲ್ಲಿ ಲಜ್ನಾ ಇಮಾಇಲ್ಲಾಹ್ ಸಂಸ್ಥೆಯು 100 ವರ್ಷಗಳ ಪೂರೈಸಿರುವ ವಿಶೇಷ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು. ಇದರಲ್ಲಿ ಸಂಸ್ಥೆಯ ಇತಿಹಾಸ, ಉದ್ದೇಶಗಳು ಹಾಗೂ ಮಡಿಕೇರಿ ಶಾಖೆಯು ಸಮಾಜದ ಮಾನವ ಕಲ್ಯಾಣಕ್ಕಾಗಿ ನಡೆಸುತ್ತಿರುವ ವಿವಿಧ ಸೇವಾ ಕಾರ್ಯಗಳ ದೃಶ್ಯಾವಳಿಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಮೂಹಗಾನವನ್ನು ನಾದಿಯಾ, ಆರಿಫಾ ಮತ್ತು ಆತಿಫಾ ಹಾಡಿದರು. ಇದೇ ಸಂದರ್ಭ ಎಲ್ಲಾ ಗಣ್ಯರನ್ನು ಸನ್ಮಾನಿಸಲಾಯಿತು. ಸಾಲಿಹಾ ಬಾಸಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಫಿದಾ ಅನ್ವರ್ ಕುರ್‍ಆನ್ ಪಾರಾಯಣ ಹಾಗೂ ಅರ್ಥವಾಚನ ಮಾಡಿದರು. ಝರೀನಾ ಮುಜೀಬ್ ಸ್ವಾಗತಿಸಿದರು. ಮುಬಶಿರ್ ಆಯೂಬ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.