Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಂದ್ರ ಕಾಫಿ ಮಂಡಳಿಯ ಆಶ್ರಯದಲ್ಲಿ ಡಿ.20 ರಿಂದ 22 ರವರೆಗೆ ಶತಮಾನೋತ್ಸವ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಂದ್ರ ಕಾಫಿ ಮಂಡಳಿಯ ಆಶ್ರಯದಲ್ಲಿ ಡಿ.20 ರಿಂದ 22 ರವರೆಗೆ ಶತಮಾನೋತ್ಸವ ಸಮಾರಂಭ*

ಡಿಸೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.15 NEWS DESK : ಬಾಳೆಹೊನ್ನೂರಿನ ಕಾಫಿ ಸಂಶೋಧನಾ ಸಂಸ್ಥೆ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕೇಂದ್ರ್ರ ಕಾಫಿ ಮಂಡಳಿಯ ಆಶ್ರಯದಲ್ಲಿ ಡಿ.20ರಿಂದ 22 ರವರೆಗೆ ಬಾಳೆಹೊನ್ನೂರಿನಲ್ಲಿ ಶತಮಾನೋತ್ಸವ ಸಮಾರಂಭ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ಸರ್ಕಾರದ ಕೇಂದ್ರ್ರ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅವರು ಶತಮಾನೋತ್ಸವ ಸಮಾರಂಭವನ್ನು ಡಿ.20ರಂದು ಕೇಂಧ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಶ್ ಗೋಯಲ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ, ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರ ಸ್ವಾಮಿ, ಕೇಂದ್ರ ವಾಣಿಜ್ಯ ಸಚಿವರಾದ ಜತಿನ್ ಪ್ರಸಾದ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಸಂಸದರುಗಳಾದ ಕೋಟಾ ಶ್ರೀನಿವಾಸ ಪೂಜಾರಿ, ಯದುವೀರ್ ಒಡೆಯರ್, ಕಾಫಿ ಮಂಡಳಿ ಅಧ್ಯಕ್ಷರಾದ ವಿ.ಜಿ.ದಿನೇಶ್ ಹಾಗೂ ಚಿಕ್ಕಮಗಳೂರು ಮತ್ತು ಕೊಡಗಿನ ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. *ಘೋಷವಾಕ್ಯ* ಅರೇಬಿಯಾ ದೇಶದಿಂದ ಬಾಬಾ ಬುಡನ್ ಸೂಫಿ ಸಂತರು ತಂದ ಏಳು ಕಾಫಿ ಬೀಜಗಳಿಂದ ಈ ವಿಭಾಗದಲ್ಲಿ ಕಾಫಿ ಕೃಷಿ ಆರಂಭಗೊಂಡಿತೆನ್ನುವ ನಂಬುಗೆಗಳಿವೆ. ಈ ಹಿನ್ನೆಲೆಯಲ್ಲಿ ಶತಮಾನೋತ್ಸವ ಸಮಾರಂಭವು ‘ಕಾಫಿಯ ಅದ್ಭುತ ಭವಿಷ್ಯಕ್ಕೆ 7 ಚಿನ್ನದ ಬೀಜಗಳು’ ಘೋಷವಾಕ್ಯದಡಿ ನಡೆಯಲಿದೆ. ಮುಂದಿನ 2047ರ ಒಳಗಾಗಿ ಭಾರತದ ಕಾಫಿ ಉತ್ಪಾದನೆಯ ಗುರಿ 7 ಕೋಟಿ ಟನ್ ಎನ್ನುವ ಅಂಶವನ್ನು ಘೋಷ ವಾಕ್ಯ ಪ್ರತಿನಿಧಿಸುತ್ತದೆ ಎಂದರು. ಮೂರು ದಿನಗಳ ಕಾಲ ಹತ್ತು ಅಧಿವೇಶನಗಳು ಮತ್ತು ಕಾರ್ಯಾಗಾರಗಳು ನಡೆಯಲಿವೆ. ತಂತ್ರಜ್ಞಾನದ ಮೂಲಕ ತೋಟಗಳ ನಿರ್ವಹಣೆಯ ಕುರಿತು ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಫಿಗೆ ಸಂಬಂಧಿಸಿದ 40 ಮಳಿಗೆಗಳು ಗಮನ ಸೆಳೆಯಲಿರುವುದಾಗಿ ತಿಳಿಸಿದರು. *ನೂತನ ತಳಿಗಳ ಬಿಡುಗಡೆ* ಶತಮಾನೋತ್ಸವ ಸಮಾರಂಭದಲ್ಲಿ ‘ಸೆಲೆಕ್ಷನ್-14’ ಎನ್ನುವ ಬಿಳಿ ಕಾಂಡಕೊರಕ ನಿರೋಧಕ ಅರೇಬಿಕಾ ತಳಿಯನ್ನು ಹಾಗೂ ‘ಸೆಲೆಕ್ಷನ್-15’ ಎನ್ನುವ ರಸ್ಟ್ ನಿರೋಧಕ ಮತ್ತು ಅರೆ ಗಿಡ್ಡ ಜಾತಿಯ ಅರೇಬಿಕಾ ತಳಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಳೂರು ಕಿಶೋರ್ ಕುಮಾರ್ ಹೇಳಿದರು. *100 ಬೆಳೆಗಾರರಿಗೆ ಸನ್ಮಾನ* ಶತಮಾನೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆಗಳ 100 ಕಾಫಿ ಬೆಳೆಗಾರರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಕೊಡಗಿನ ಸುಂಟಿಕೊಪ್ಪದ ಬೋಸ್ ಮಂದಣ್ಣ, ಸೋಮವಾರಪೇಟೆಯ ಸಾಕಮ್ಮ, ಗುಂಡುಕುಟ್ಟಿ ತೋಟದ ಮಂಜುನಾಥ್, ಪಾಲಿಬೆಟ್ಟದ ಅಪ್ಪಯ್ಯ, ಶ್ರೀಮಂಗಲದ ಡಾಲಿ ಚಂಗಪ್ಪ, ಕುಟ್ಟದ ಬೊಳೇರ ಚಂಗಪ್ಪ ಅವರನ್ನು ಹಾಗೂ ಜಿಲ್ಲೆಯ ಇನ್ನು ಕೆಲವರನ್ನು ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು. *50 ಸಾವಿರ ಮಂದಿ* ಸಮಾರಂಭದಲ್ಲಿ ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ಕೇರಳ ತಮಿಳುನಾಡು, ಒಡಿಸಾ, ಈಶಾನ್ಯ ರಾಜ್ಯದ 50 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು. ಭಾರತಲ್ಲಿ ಪ್ರಸ್ತುತ ಉತ್ಪಾದನೆಯಾದ 3.60 ಲಕ್ಷ ಮೆಟ್ರಿಕ್ ಟನ್ ಕಾಫಿಯಲ್ಲಿ 2.30 ಲಕ್ಷ ಮೆ.ಟ. ಕಾಫಿಯನ್ನು ರಫ್ತು ಮಾಡುವ ಮೂಲಕ 15 ಸಾವಿರ ಕೊಟಿ ವಿದೇಶಿ ವಿನಿಮಯ ಲಭ್ಯವಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಫಿ ಮಂಡಳಿಯ ಮಡಿಕೇರಿಯ ಸಹಾಯಕ ವಿಸ್ತರಣಾಧಿಕಾರಿಗಳಾದ ಕೆ.ಪಿ.ಸನೀಶ್ ಹಾಗೂ ಎಂ.ಸಜಿನ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಂಗಳೂರು, NEWS DESK ಮಾರ್ಚ್ 03: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ…

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.