Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*
  • *’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*
  • *ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*
  • *10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*
  • *ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*
  • *ಕೊಡಗು : 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು*
  • *ಶ್ರೀ ಭಗೀರಥ ಜಯಂತಿ : ಭಗೀರಥ ಪ್ರಯತ್ನ ಇದ್ದಲ್ಲಿ ಯಶಸ್ಸು ಸಾಧ್ಯ : ಚಿ.ನಾ.ಸೋಮೇಶ್*
  • *ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಮತಾಂತರ ಮತ್ತು ದೌರ್ಜನ್ಯದ ವಿರುದ್ಧ ಪ್ರತಿಭಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜನನ ಮತ್ತು ಮರಣ ನಾಗರಿಕ ನೋಂದಣಿ ನಿಖರವಾಗಿ ದಾಖಲಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜನನ ಮತ್ತು ಮರಣ ನಾಗರಿಕ ನೋಂದಣಿ ನಿಖರವಾಗಿ ದಾಖಲಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಡಿಸೆಂಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.16 NEWS DESK : ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಈ ಕಾರ್ಯ ಆಗಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು. ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮೀಣ ಭಾಗದಲ್ಲಿ 2015 ರ ಏ.1 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್‍ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಈ ಕಾರ್ಯದ ಪ್ರಗತಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಜನನ ಮತ್ತು ಮರಣ ನೋಂದಣಿ ಸಂಬಂಧಿಸಿದಂತೆ ಆಯಾಯ ಕಾಲದಲ್ಲಿ ಪಡೆಯುವಂತಾಗಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಆಯಾಯ ಕಾಲದಲ್ಲಿಯೇ ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ಈಗಾಗಲೇ ಜನನ ಮತ್ತು ಮರಣ ನೋಂದಣಿಯನ್ನು ಗ್ರಾ.ಪಂ.ಕಾರ್ಯದರ್ಶಿಯವರನ್ನು ಉಪ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ. ಆ ನಿಟ್ಟಿನಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ 30 ದಿನದೊಳಗೆ ಜನನ ಮತ್ತು ಮರಣ ನೋಂದಣಿ ಮಾಡಬೇಕು. 30 ದಿನದ ನಂತರ ಗ್ರಾಮ ಆಡಳಿತ ಅಧಿಕಾರಿಯನ್ನು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದ್ದು, ಈ ನೋಂದಣಿಯನ್ನು 30 ದಿನದೊಳಗೆ ಇ-ಜನ್ಮ ತಂತ್ರಾಂಶದಲ್ಲಿ ದಾಖಲು ಮಾಡಬೇಕು ಎಂದರು. ಈಗಾಗಲೇ ದತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು 2022 ರ ಸೆಕ್ಷನ್ 40 ಮತ್ತು 48 ರಂತೆ ತಿದ್ದುಪಡಿ ಮಾಡಲಾಗಿದ್ದು, ಯಾವುದೇ ಏಜೆನ್ಸಿಗಳು ದತ್ತು ಮಕ್ಕಳನ್ನು ಪಡೆಯಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಜನನ ಪ್ರಮಾಣ ಪತ್ರವನ್ನು ನಿಯಮಾನುಸಾರ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಸರಳೀಕರಣಗೊಳಿಸುವ ಮತ್ತು ನಾಗರಿಕ ಸ್ನೇಹಿ ಮಾಡುವಲ್ಲಿ ಮುಂದಾಗಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿನ ಜನನ ಪ್ರಮಾಣ ಪತ್ರವನ್ನು ಎರಡು ಮೂರು ದಿನದೊಳಗೆ ಪಡೆಯಬಹುದಾಗಿದೆ ಎಂದು ಹೇಳಿದರು. ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆರೋಗ್ಯ ಅಧಿಕಾರಿಯವರು ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಜಿಲ್ಲಾ ಸಾಂಖ್ಯಿಕ ಇಲಾಖೆಯ ಅಧಿಕಾರಿ ನಾರಾಯಣ ಅವರು ಮಾತನಾಡಿ ಜನನ ಮತ್ತು ಮರಣವನ್ನು ವಿವಿಧ ಹಂತದಲ್ಲಿ ದಾಖಲಿಸಲಾಗುತ್ತದೆ ಎಂದರು. 2025 ರ ಜ.1 ರಿಂದ ನವೆಂಬರ್ ಅಂತ್ಯದ ವರೆಗೆ ಕೊಡಗು ಜಿಲ್ಲೆಯಲ್ಲಿ ಒಟ್ಟು ಗ್ರಾಮೀಣ ಪ್ರದೇಶದಲ್ಲಿ 330 ಮತ್ತು ನಗರ ಪ್ರದೇಶದಲ್ಲಿ 8 ಒಟ್ಟು 338 ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು. ಈ ಅವಧಿಯಲ್ಲಿ 2963 ಗಂಡು, 2907 ಹೆಣ್ಣು ಒಟ್ಟು 5,870 ಮಕ್ಕಳ ಜನನವಾಗಿದೆ. ಹಾಗೆಯೇ ಮರಣ ಪ್ರಮಾಣ 2539 ಗಂಡು, 1734 ಹೆಣ್ಣು ಒಟ್ಟು 4,283 ಮಂದಿ ಮೃತಪಟ್ಟಿದ್ದಾರೆ ಎಂದು ನಾರಾಯಣ ಅವರು ವಿವರಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಜನನ ಮರಣ ಉಪ ನೋಂದಣಿ ಘಟಕವನ್ನು ಸ್ಥಾಪಿಸಿ ಈ ಸಂಸ್ಥೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆಗಳನ್ನು ನೋಂದಣಿ ಮಾಡಿ, ಅರ್ಜಿದಾರರಿಗೆ ನಿಗದಿತ ಸಮಯದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗಿದೆ ಎಂದರು. ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಘಟನೆಗಳನ್ನು 21 ದಿನದೊಳಗೆ ನೋಂದಣಿ ಮಾಡಲು ಅನುಕೂಲವಾಗುವಂತೆ ಸಂಬಂಧಿಸಿದ ಜನನ ಮತ್ತು ಮರಣ ನೋಂದಣಾಧಿಕಾರಿಗಳಿಗೆ ವರದಿ ಮಾಡಲು ತಿಳಿಸಲಾಗಿದೆ ಎಂದು ನಾರಾಯಣ ಅವರು ಹೇಳಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ.ವೆಂಕಟೇಶ್, ಬಿ.ಎಂ.ಗಾನವಿ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*

ಏಪ್ರಿಲ್ 24, 2026

*’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*

ಏಪ್ರಿಲ್ 23, 2026

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 2026

*’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*

ಏಪ್ರಿಲ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.23 NEWS DESK :  ಭಾರತದ ಪ್ರಮುಖ ಕೃಷಿ ಪರಿಹಾರ ಒದಗಿಸುವ ಸಂಸ್ಥೆಯಾದ ಕೋರಮಂಡಲ್ ಇಂಟರ್‍ನ್ಯಾಷನಲ್ ಲಿಮಿಟೆಡ್ ಕೊಡಗು…

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*

ಏಪ್ರಿಲ್ 23, 2026

*ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*

ಏಪ್ರಿಲ್ 23, 2026

*ಕೊಡಗು : 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು*

ಏಪ್ರಿಲ್ 23, 2026

*ಶ್ರೀ ಭಗೀರಥ ಜಯಂತಿ : ಭಗೀರಥ ಪ್ರಯತ್ನ ಇದ್ದಲ್ಲಿ ಯಶಸ್ಸು ಸಾಧ್ಯ : ಚಿ.ನಾ.ಸೋಮೇಶ್*

ಏಪ್ರಿಲ್ 23, 2026

*ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಏಪ್ರಿಲ್ 23, 2026

*ಮತಾಂತರ ಮತ್ತು ದೌರ್ಜನ್ಯದ ವಿರುದ್ಧ ಪ್ರತಿಭಟನೆ*

ಏಪ್ರಿಲ್ 23, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 23, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.