Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬದುಕು-ಬರಹ ಉಪನ್ಯಾಸ ಕಾರ್ಯಕ್ರಮ : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ : ಡಾ.ರೇಣುಕಾ ಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬದುಕು-ಬರಹ ಉಪನ್ಯಾಸ ಕಾರ್ಯಕ್ರಮ : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ : ಡಾ.ರೇಣುಕಾ ಪ್ರಸಾದ್*

ಡಿಸೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.17 NEWS DESK : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ಹಾಗೂ ಬರಹಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಕನ್ನಡ ವಿಭಾಗ, ನುಡಿ ಉತ್ಸವ ಸಮಿತಿ ಕೊಡಗು ಜಿಲ್ಲೆ, ದಸಾಪ ಕೊಡಗು ಜಿಲ್ಲೆ ಸಹಯೋಗದಲ್ಲಿ ನುಡಿ ಸಾಹಿತ್ಯ ಲಹರಿ ಪ್ರಯುಕ್ತ ನಡೆದ ಮೊಗಳ್ಳಿ ಗಣೇಶ್ ಅವರ ಬದುಕು-ಬರಹ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು. ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ಸಾರ್ವಕಾಲಿಕವಾಗಿವೆ. ಸಾಹಿತ್ಯ ಹಾಗೂ ಬರಹಗಳು ಲೋಕಾಂತವಾಗಬೇಕು. ಮಾತ್ರವಲ್ಲದೆ ಸಾಹಿತ್ಯದ ದಾಖಲೀಕರಣವನ್ನು ಮಾಡಬೇಕು. ಮನುಷ್ಯನು ತನ್ನನ್ನು ತಾನು ಪ್ರಶ್ನಿಸುತ್ತಲೆ ಬದುಕಬೇಕು. ಕಥೆ, ಕಾದಂಬರಿಗಳು ವಿಶ್ವಾವ್ಯಾಪಿಯಾಗಬೇಕು ಎಂದು ಹೇಳಿದರು. ಕಲಿಕೆ, ಬದುಕು, ಅನುಭವ, ಸುತ್ತ ಮುತ್ತಲಿನ ಪರಿಸರವು ನಮಗೆ ಪ್ರೇರಣೆಯಾಗಿದೆ ಎಂದರು. ಹೊಸ ಚಿಂತನೆಗಳು ಮೂಡಿದಾಗ ಮಾತ್ರ ಬರಹಗಳಿಗೆ ಅರ್ಥ ಬರಲು ಸಾಧ್ಯವಾಗುತ್ತದೆ. ಅಂತೆಯೇ ಮೊಗಳ್ಳಿ ಗಣೇಶ್  ಬರಹಗಳು ಓದುಗರನ್ನು ಸೆಳೆಯುವುದರ ಜೊತೆಗೆ ಚಿಂತನಾಶೀಲರನ್ನಾಗಿಸುತ್ತದೆ. ಬದುಕು ಹಾಗೂ ಬರಹಗಳೇರಡು ಬಿಂಬ ಪ್ರತಿಬಿಂಬಗಳಾಗಿದ್ದು, ಚಿಂತನೆಗೆ ಮತ್ತು ಸಾಹಿತ್ಯಕ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರು. ನುಡಿ ಉತ್ಸವ ಸಮಿತಿಯ ಅಧ್ಯಕ್ಷ ಅರ್ಜುನ್ ಮೌರ್ಯ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಸಹನೆ ಹಾಗೂ ತಾಳ್ಮೆಯಿದ್ದರೆ ಜಗತ್ತನ್ನು ಗೆಲ್ಲಬಹುದು. ಮೌಲ್ಯಗಳನ್ನು ಸಮಾಜಕ್ಕೆ ನೀಡಬೇಕು. ಮೌಲ್ಯದಿಂದ ಭಾಷೆ, ಸಾಹಿತ್ಯದ ಬೆಳವಣಿಗೆಯ ಜೊತೆಗೆ ಸಾಮಾಜಿಕ ಪರಿವರ್ತನೆಗೆ ಸಾಹಿತ್ಯವು ಭದ್ರ ಬುನಾದಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ.ಕೋರನ ಸರಸ್ವತಿ, ಸಾಹಿತ್ಯದ ರಚನೆಯು ಅನುಭವದಿಂದ ಮಾತ್ರ ಸಾಧ್ಯ. ವಿದ್ಯಾರ್ಥಿಗಳು ಸಾಹಿತ್ಯಕ ಕೃತಗಳನ್ನು ಓದಬೇಕು. ಓದುವ ಹವ್ಯಾಸದಿಂದ ಸಾಹಿತ್ಯದ ಬಳಕೆ ಹೆಚ್ಚಾಗುತ್ತದೆ. ಓದು, ಬರಹ, ಲೇಖನ ಇವುಗಳು ನಿರಂತರವಾಗಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬಸವರಾಜು, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಂಚಾಲಕರಾದ ಡಾ.ದಯಾನಂದ ಕೆ. ಸಿ., ಉಪನ್ಯಾಸಕರಾದ ಹರಿಣಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ನಾಡು, ನುಡಿಯ ಕುರಿತು ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು. ನುಡಿ ಉತ್ಸವ ಸಮಿತಿಯ ಸಂಚಾಲಕ ಅಬ್ದುಲ್ ರೆಹಮಾನ್  ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸವನ್ನು ನೀಡಿದ ಡಾ.ರೇಣುಕಾ ಪ್ರಸಾದ್  ಅವರನ್ನು ಸನ್ಮಾನಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.