Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.20 ರಂದು ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.20 ರಂದು ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ*

ಡಿಸೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.19 NEWS DESK : ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ನೀರುಗಂಟಿಗಳು, ಜವಾನರನ್ನು ಸರಕಾರಿ ನೌಕರರೆಂದು ಘೋಷಿಸಬೇಕು. ಬೆಲೆ ಏರಿಕೆ ಆಧಾರದಲ್ಲಿ ಕನಿಷ್ಟ ವೇತನ ರೂ. 36,000 ನಿಗದಿ ಜಾರಿಗೊಳಿಸಬೇಕೆಂದು ಹಲವು ದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.20 ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್ ಭರತ್ ಹೇಳಿದರು. ವಿರಾಜಪೇಟೆಯಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ, ಭರತ್ ಅವರು, ಇಡೀ ರಾಜ್ಯದಲ್ಲಿ ಸುಮಾರು 63,000 ಮಂದಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಲ್ಲಿ ನೌಕರರಾಗಿ ಕಳೆದ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಇವರ ಹಲವಾರು ಪ್ರಮುಖವಾಗಿರುವ ಬೇಡಿಕೆಗಳನ್ನು ಪಡೆಯಲು ನಿರಂತರ ಹೋರಾಟ ಮಾಡುತ್ತ ಸರಕಾರಕ್ಕೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸುತ್ತಾ ಬರಲಾಗಿದೆ. ಇದುವರೆಗೂ ಸರಕಾರ ಪ್ರತಿಕ್ರಿಯೆ ನೀಡಿಲ್ಲ. ಆದ್ದರಿಂದ ನಮ್ಮ 17 ಪ್ರಮುಖ ಬೇಡಿಕೆಗಳನ್ನು ಪಡೆದುಕೊಳ್ಳಲು ಒತ್ತಾಯಿಸಬೇಕಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ನೀತಿಯಿಂದಾಗಿ ದಿನದಿಂದ ದಿನಕ್ಕೆ ಬೆಲೆ ಏರಿಕೆ ಹೆಚ್ಚಾಗುತ್ತಿರುವುದರಿಂದ ದುಡಿಯುವ ವರ್ಗಕ್ಕೆ ಕುಟುಂಬವನ್ನು ನಡೆಸಿಕೊಂಡು ಹೋಗುವುದು ಕಷ್ಟವಾಗಿದೆ. ಇಂದಿನ ಶಿಕ್ಷಣದ ಖಾಸಗಿಕರಣದಿಂದ ಮಕ್ಕಳ ಶಿಕ್ಷಣ ಹೊರೆಯಾಗಿದೆ. ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದ ಖಾಸಗೀಕರಣದಿಂದಾಗಿ ವೈದ್ಯಕೀಯ ಖರ್ಚು ವೆಚ್ಚ ಹೆಚ್ಚಾಗಿದೆ. ಸರಕಾರವು ತಾನು ನಿಗದಿಪಡಿಸಿರುವ ವರಮಾನವನ್ನು ಮಾನದಂಡವಾಗಿಟ್ಟುಕೊಂಡು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಪಡಿಸಲು ಹೊರಟಿರುವುದು ವಿಷಾದನೀಯ. ಆಹಾರದ ಹಕ್ಕಿನ ಅನುಸಾರವಾಗಿ ಗ್ರಾಮ ಪಂಚಾಯಿತಿ ನೌಕರರಿಗೆ ಬಿಪಿಎಲ್ ಪಡಿತರ ಚೀಟಿ ದೊರೆತಿದೆ. ಪಂಚಾಯಿತಿ ನೌಕರರಿಗೆ ನೀಡುತ್ತಿರುವ ಕನಿಷ್ಠ ವೇತನವು ಬದುಕುಳಿಯುವ ವೇತನವಾಗಿರುವುದರಿಂದ ಜೀವನ ನಿರ್ವಹಣೆಯ ವೇತನ ನೀಡುವವರಿಗೆ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಬಾರದೆಂದು ಹೇಳಿದರು. ದಿನ ಕಳೆದಂತೆ ಗ್ರಾಮ ಪಂಚಾಯಿತಿಗಳಿಂದ ಹೆಚ್ಚಿನ ಸೇವೆಯನ್ನು ಸರಕಾರ ಹಲವಾರು ಯೋಜನೆಗಳನ್ನು ಪಂಚಾಯಿತಿ ಮೂಲಕ ನೀಡುತ್ತಿದೆ. ಇದರಿಂದ ಹೊರೆಯಾಗುತ್ತಿದೆ. ಕೂಡಲೇ ಎರಡನೇ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಆಗಬೇಕು ಆಗುವ ಮೊದಲು ಈಗ ಕೆಲಸ ನಿರ್ವಹಿಸುತ್ತಿರುವ ಡಿಇಓ ಗಳಿಗೆ ಅನುಮೋದನೆ ನೀಡಬೇಕೆಂದು ಡಿಸೆಂಬರ್ 20 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಲಿದೆ. ಆದ್ದರಿಂದ ರಾಜ್ಯದ ಎಲ್ಲಾ ಪಂಚಾಯಿತಿ ನೌಕರರು ಸ್ವಚ್ಛ ವಾಹಿನಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೇಡಿಕೆಗಳನ್ನು ಪಡೆದುಕೊಳ್ಳಲು ಹೋರಾಟ ನಡೆಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಎಲ್ಲಾ ವಿಭಾಗದ ಹುದ್ದೆಗಳನ್ನು ತುಂಬಬೇಕು. ಬಿಲ್ ಕಲೆಕ್ಟರ್ ಮತ್ತು ಗುಮಾಸ್ತವೃಂದದಿಂದ ಗ್ರೇಡ್ ಟು ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಗೊಂಡ ನೌಕರರಿಗೆ ಪರಿಗಣಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು. ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಯಲಿದೆ. ಸರಕಾರ ಸ್ಪಂದಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ತೀವ್ರತರದ ಪ್ರತಿಭಟನೆಯನ್ನು ನಡೆಸಲಾಗುತ್ತದೆ. ಈ ಸಂದರ್ಭ ಏನಾದರೂ ಹೆಚ್ಚುಕಮ್ಮಿ ಆದಲ್ಲಿ ಇದಕ್ಕೆ ಸರಕಾರವೇ ನೇರ ಹೊಣೆ. ಹಾಗಾಗಿ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದರು. ಈ ಸಂದರ್ಭ ಜಿಲ್ಲಾ ಪದಾಧಿಕಾರಿ ಹೆಚ್ ಬಿ ಹರೀಶ್, ಪ್ರದಾನ ಕಾರ್ಯದರ್ಶಿ ಮಧುಸೂದನ, ಸಹ ಕಾರ್ಯದರ್ಶಿಗಳಾದ ದಿಲೀಪ್, ವಿಂದ್ಯಾ, ಉಪಾಧ್ಯಕ್ಷ ಮಹಾದೇವ, ರಂಗಸ್ವಾಮಿ ಇನ್ನಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.