Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಕ್ಷಿಣ ಪ್ರಾಂತ ಸಮ್ಮೇಳನ ಸಮಾರೋಪ : ಮನೋಜ್ ನಂದೀಶಪ್ಪಗೆ ಎಬಿವಿಪಿ ಯುವ ಪುರಸ್ಕಾರ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಕ್ಷಿಣ ಪ್ರಾಂತ ಸಮ್ಮೇಳನ ಸಮಾರೋಪ : ಮನೋಜ್ ನಂದೀಶಪ್ಪಗೆ ಎಬಿವಿಪಿ ಯುವ ಪುರಸ್ಕಾರ ಪ್ರದಾನ*

ಡಿಸೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.19 NEWS DESK : ‘ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ’ ಎನ್ನುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಧ್ಯೇಯ ವಾಕ್ಯದ ಸಾಕಾರವಾಗಬೇಕಿದ್ದಲ್ಲಿ, ನಮ್ಮಲ್ಲಿ ನಾವು ಪರಿವರ್ತನೆಯನ್ನು ಕಾಣುವುದು ಅವಶ್ಯ. ಇಂತಹ ಪರಿವರ್ತನೆಗಾಗಿ ‘ಅಧ್ಯಯನ’ಕ್ಕೆ ಮಹತ್ವವನ್ನು ನೀಡಬೇಕೆಂದು ಖ್ಯಾತ ವಾಗ್ಮಿ ಹಾಗೂ ಮೀಡಿಯಾ ಮಾಸ್ಟರ್ ಯೂ ಟ್ಯೂಬ್ ಸಂಸ್ಥಾಪಕ ಎಂ.ಎಸ್.ರಾಘವೇಂದ್ರ ಯುವ ಸಮೂಹಕ್ಕೆ ಕರೆ ನೀಡಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 45ನೇ ದಕ್ಷಿಣ ಪ್ರಾಂತ ಸಮ್ಮೇಳನದ ಕೊನೆಯ ಹಾಗೂ ಮೂರನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬ್ರಿಟಿಷರ ಆಳ್ವಿಕೆಯ ಅವಧಿಯಲ್ಲಿ ಜಾರಿಗೆ ಬಂದ ಮೆಕಾಲೆ ಶಿಕ್ಷಣ ಪದ್ಧತಿ ನಮ್ಮಲ್ಲಿ ‘ಪ್ರಶ್ನಿಸುವ’ ಮನೋಭಾವವನ್ನು ಮರೆಸಿ, ಗುಲಾಮಗಿರಿತನವನ್ನಷ್ಟೆ ತುಂಬಿತು. ಸ್ವಾತಂತ್ರ್ಯ ಬಂದು ಇಲ್ಲಿಯವರೆಗೂ ನಾವು ಅಂದಿನ ಶಿಕ್ಷಣ ಪದ್ಧತಿಗಳಡಿಯಲ್ಲೇ ಸಾಗುತ್ತಿದ್ದೇವೆ ಎಂದು ವಿಷಾದಿಸಿದರು. ಸ್ವಾತಂತ್ರ್ಯ ಬಂದ ಅವಧಿಯಲ್ಲಿಯೂ ಗುಲಾಮಗಿರಿತನದ ಮನೋಭಾವವೆ ನಮ್ಮನ್ನು ಆವರಿಸಿತ್ತು. ಇವುಗಳ ನಡುವೆ ಕೆಲವರು ಯುವ ಸಮೂಹದಲ್ಲಿ ರಾಷ್ಟ್ರಾಭಿಮಾನವನ್ನು, ಸ್ವಾಭಿಮಾನವನ್ನು ತುಂಬುವ ಮೂಲಕ, ವ್ಯಕ್ತಿಯಿಂದ ರಾಷ್ಟ್ರ ನಿರ್ಮಾಣ ಎನ್ನುವ ಚಿಂತನೆಗಳನ್ನು ಯುವ ಸಮೂಹದಲ್ಲಿ ತುಂಬುವ ಪ್ರಯತ್ನಗಳಿಗೆ ಮುಂದಾದರು. ಅದರ ಫಲಸ್ವರೂಪವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಸ್ತಿತ್ವಕ್ಕೆ ಬಂದಿತೆಂದು ತಿಳಿಸಿದರು. ವ್ಯಕ್ತಿಯಿಂದ ರಾಷ್ಟ್ರ ನಿರ್ಮಾಣವೆಂದರೆ ನಿರಂತರವಾದ ಅಧ್ಯಯನದೊಂದಿಗೆ ಜ್ಞಾನ ಸಂಪತ್ತನ್ನು ತಮ್ಮದಾಗಿಸಿಕೊಳ್ಳುವುದು ಹಾಗೂ ಪರಿವರ್ತನೆಯತ್ತ ಮುಖ ಮಾಡುವುದು. ಇದರೊಂದಿಗೆ ತಮ್ಮ ಇತಿ ಮಿತಿಗಳಲ್ಲಿ, ಊರು, ಗ್ರಾಮ, ಬಡಾವಣೆಗಳಲ್ಲಿ ರಾಷ್ಟ್ರ ಹಿತಕ್ಕೆ ಪೂರಕವಾದ ಚಿಂತನೆಗಳನ್ನು ದಿನಕ್ಕೆ ಕನಿಷ್ಟ ಅರ್ಧ ಗಂಟೆಯ ಕಾಲ ಜನರಿಗೆ ತಲುಪಿಸುವ ಕಾರ್ಯದಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿರಂತರ ಪ್ರಕ್ರಿಯೆಯಾದಾಗ ರಾಷ್ಟ್ರ ನಿರ್ಮಾಣದ ಕನಸು ನನಸಾಗುತ್ತದೆ ಎಂದು ರಾಘವೇಂದ್ರ ಹೇಳಿದರು. ಪುಟ್ಟ ರಾಷ್ಟ್ರ ಇಸ್ರೇಲ್‍ನ್ನು ಕಟ್ಟಿ ಬೆಳೆÉಸುವಲ್ಲಿ ಮಹತ್ತರ ಪಾತ್ರ ವಹಿಸಿದ ಅಲ್ಲಿನ ಪ್ರಥಮ ಪ್ರಧಾನಿ ಬೆಂಗುರಿಯನ್ ಅವರು, ದೇಶವನ್ನು ಕಟ್ಟಿ ಅಧಿಕಾರ ಬಿಟ್ಟು ಗ್ರಾಮೀಣ ಭಾಗದಲ್ಲಿ ನೆಲೆಸಿದ್ದರು. ಬಳಿಕ ದೇಶಕ್ಕೆ ಅವರ ಅಗತ್ಯವಿದ್ದಾಗ ರಕ್ಷಣಾ ಸಚಿವರಾಗಿಯೂ ಕಾರ್ಯನಿರ್ವಹಿಸಿದರು. ಸ್ವಹಿತಾಸಕ್ತಿಗಳನ್ನು ಮರೆತು ರಾಷ್ಟ್ರ ಕಟ್ಟುವ ಅಂತಹ ನಾಯಕರು ಸ್ವಾತಂತ್ರ್ಯಾ ನಂತರದ ದಿನಗಳಲ್ಲಿ ಭಾರತಲ್ಲಿ ಕಂಡು ಬರಲೇ ಇಲ್ಲ. ಇಲ್ಲಿನ ಯಾವುದೇ ರಾಜಕಾರಣಿ ಅಧಿಕಾರ ಬಿಟ್ಟು ಹೊರ ಬರುವ ಮನಸ್ಥಿತಿಯನ್ನೆ ಹೊಂದಿಲ್ಲ. ‘ವ್ಯಕ್ತಿಯಿಂದ ರಾಷ್ಟ್ರ ನಿರ್ಮಾಣ’ ಎನ್ನುವ ಚಿಂತನೆಯನ್ನು ನಮ್ಮಲ್ಲಿ ತುಂಬದಿರುವುದೇ ಇದಕ್ಕೆ ಪ್ರಮುಖ ಕಾರಣವೆಂದು ಅಭಿಪ್ರಾಯಪಟ್ಟರು. *ಯುವ ಪುರಸ್ಕಾರ ಪ್ರದಾನ* ಬೆಂಗಳೂರಿನ ನಿವಾಸಿ, ಮಹಾನಗರಿಯ ಮರಗಳ ಸಂರಕ್ಷಣೆಗಾಗಿ ‘ಬೆಂಗಳೂರು ಹುಡುಗರು’ ಸಂಸ್ಥೆಯನ್ನು ಕಟ್ಟಿ ಶ್ರಮಿಸುತ್ತಿರುವ ಮನೋಜ್ ನಂದೀಶಪ್ಪ ಅವರಿಗೆ ಎಬಿವಿಪಿಯಿಂದ ಯುವ ಪುರಸ್ಕಾರ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮನೋಜ್ ನಂದೀಶಪ್ಪ ಅವರು ಬೆಂಗಳೂರಿನ ಮರಗಳ ಸಂರಕ್ಷಣೆಗಾಗಿ ‘ಮೊಳೆ ಮುಕ್ತ ಮರ’, ‘ಬಂಧನ ಮುಕ್ತ ಬೆಂಗಳೂರು’ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಆ ಮೂಲಕ ಮಹಾನಗರಿಯಲ್ಲಿ ಇರುವ ಮರಗಳ ಸಂರಕ್ಷಣೆ ನಮ್ಮ ಚಿಂತನೆಯಾಗಿದೆ. ಯುವಸಮೂಹ ಸಣ್ಣಪುಟ್ಟ ವಿಚಾರಗಳಿಗೆ ಬದುಕನ್ನು ಕಳೆದುಕೊಳ್ಳುತ್ತಿರುವ ಬಗ್ಗೆ ವಿಷಾದಿಸಿ, ಬದುಕನ್ನು ಧೈರ್ಯದಿಂದ ಎದುರಿಸಬೇಕು. ಧೈರ್ಯವಿದ್ದಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯ ಎಂದರು. ಎಬಿವಿಪಿ ತುಮಕೂರು ವಿಭಾಗ ಪ್ರಮುಖ್ ಅಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಎಪ್ಪತೈದು ವರ್ಷಗಳಿಂದ ಎಬಿವಿಪಿ ಸಂಘಟನೆ ರಾಷ್ಟ್ರ ವ್ಯಾಪಿ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದ ತನ್ನಪರಿಕಲ್ಪನೆಯಡಿ ವಿದ್ಯಾರ್ಥಿ ಸ್ನೇಹಿ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಸಮಾಜದ ವಿವಿಧ ಆಯಾಮಗಳ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದರು. ಸಮಾರಂಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತದ ಅಧ್ಯಕ್ಷ ಡಾ. ರವಿ ಮಂಡ್ಯ ಹಾಗೂ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಗೋಪಿ ಅರವಿಂದ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.