Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*
  • *ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*
  • *ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 
  • *ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*
  • *ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ*
  • *ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*
  • *ದುಬಾರೆ ದುರ್ಘಟನೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಜ್ಯ ಉಪ ಲೋಕಾಯುಕ್ತ*
  • *ಪ್ರಸನ್ನ ಭಟ್ ವಿರುದ್ಧ ದೂರು*
  • *ಮೇ 22 ರಿಂದ ಮಾವು ಮತ್ತು ಹಲಸು ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.25 ರಂದು ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ನೂತನ ಮುಖಮಂಟಪ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.25 ರಂದು ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ನೂತನ ಮುಖಮಂಟಪ ಉದ್ಘಾಟನೆ*

ಡಿಸೆಂಬರ್ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.20 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ನೂತನವಾಗಿ ಅಂದಾಜು ರೂ.15 ರಿಂದ 18 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮುಖಮಂಟಪವು(ತೀರ್ಥ) ಡಿ.25 ರಂದು ಲೋಕಾರ್ಪಣೆಗೊಳಿಸಲಾಗುವುದೆಂದು ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ. ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು 1992 ಮೇ 8 ರಂದು ಸ್ಥಾಪನೆಗೊಂಡ ನಂತರದ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ, ಶ್ರೀಕನ್ನಿಮೂಲ ಗಣಪತಿ, ಹಾಗೂ ನೈವೇದ್ಯ ಕೊಠಡಿ ಮತ್ತು ದೇವಸ್ಥಾನದ ಕಚೇರಿ ನಿರ್ಮಿಸಲಾಗಿತ್ತು. ಅದರಂತೆ ಕಳೆದ ವರ್ಷ ದುರ್ಗಾ ದೇವಿಯ ದೇವಸ್ಥಾನವನ್ನು ಬಿ.ಎಂ.ಸುರೇಶ್ ನೇತೃತ್ವದ ದೇವಸ್ಥಾನ ಆಡಳಿತ ಮಂಡಳಿ ತಂಡವು ದೇವಾಲಯವನ್ನು ನಿರ್ಮಿಸಿ ಜೀರ್ಣೊದ್ಧಾರಗೊಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಈ ಬಾರೀ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ತೀರ್ಥ ಮಂಟಪದ ಅವಶ್ಯಕತೆಯನ್ನು ಮನಗಂಡ ಬಿ.ಎಂ.ಸುರೇಶ್ ಆಡಳಿತ ಮಂಡಳಿಯವರು ನಿರ್ಮಿಸುವ ಕಾರ್ಯಕ್ಕೆ ಮುಂದಾಗಿ ಊರಿನ ದಾನಿಗಳು, ಭಕ್ತಾದಿಗಳು ಸೇರಿದಂತೆ ಸುತ್ತ ಮುತ್ತಲಿನ ದಾನಿಗಳ ಸಹಾಯದಿಂದ ಸರಿಸುಮಾರು ಅಂದಾಜು ರೂ. 15 ರಿಂದ 18 ಲಕ್ಷ ವೆಚ್ಚದಲ್ಲಿ ಮುಖಮಂಟಪವನ್ನು ನಿರ್ಮಾಣ ಕಾರ್ಯವು ಪೂರ್ಣಗೊಂಡಿದೆ. ದೇವಸ್ಥಾನ ಸಮಿತಿ ಬಿ.ಎಂ.ಸುರೇಶ್ ಅವರು ತಿಳಿಸಿದರು. ಈ ಬಾರೀ ನೂತನವಾಗಿ ನಿರ್ಮಿಸಲಾಗಿರುವ ಮುಖ ಮಂಟಪವನ್ನು ಕಳೆದ 6 ತಿಂಗಳ ಹಿಂದೆ ಪುತ್ತೂರಿನ ಜಗನಿವಾಸ್ ರಾವ್ ರವರು ಭೂಮಿ ಪೂಜೆ ಶಿಲಾನ್ಯಾಸವನ್ನು ನೇರವೇರಿಸಿದರು. ಪುತ್ತೂರಿನ ಶಿಲ್ಪಿಗಳಾದ ಕೃಷ್ಣಪ್ರಸಾದ್ ರವರು ಶಿಲ್ಪಿ ಕಾರ್ಯವನ್ನು ನಿರ್ವಹಿಸುವ ಮೂಲಕ ಕ್ಷೇತ್ರದಲ್ಲಿ ಬಲು ಸುಂದರವಾಗಿ ಗೋಚರಿಸುತ್ತಿದ್ದು, ಲೋಕಾರ್ಪಣೆಗೊಳಿಸಲು ಸನ್ನದವಾಗಿದೆ. ಡಿ.24 ರಂದು ಸಂಜೆ 6 ಗಂಟೆಗೆ ಕೇರಳದ ತಳಿಪರಂಬ ಕಾಳೇಘಾಟ್ ಇಲ್ಲಂ ಮಧುಸೂಧನ್ ತಂತ್ರಿ ಅವರ ನೇತೃತ್ವದಲ್ಲಿ ಅಚಾರ್ಯ ತಂತ್ರಿಯವರನ್ನು ಸ್ವೀಕಾರ ಮಾಡುವುದರೊಂದಿಗೆ 6.30 ಗಂ ಟೆಗೆ ಪ್ರಾಶಬ್ಧ ಶುದ್ಧಿ, ರಾತ್ರಿ 7 ಗಂಟೆಗೆ ರಾಕ್ಷೋಘ್ನ ಹೋಮ, ಹಾಗೂ ಮುಖ ಮಂಖಟಪ ಸರ್ಮಪಣೆ ರಾತ್ರಿ 8 ಗಂಟೆಗೆ ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಬಲಿ, ವಾಸ್ತು ಕಲಶಾಭಿಷೇಕ, ಅತ್ತಾಯ ಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ಡಿ.25 ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, 8 ಗಂಟೆಗೆ ಕಳಸಪೂಜೆ, 10 ಗಂಟೆಗೆ ದುರ್ಗಾ ಲಕ್ಷ್ಮಿಗೆ ಕಲಶಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಪೂಜೆ ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ದುರ್ಗಾ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ವೈದಿಕ ಧಾರ್ಮಿಕ, ವಿಧಿ ವಿಧಾನ ಕಾರ್ಯಕ್ರಮಗಳು ನಡೆಯಲಿದೆ. ಡಿ.27 ರಂದು ಮಂಡಲಪೂಜೆಯ ಅಂಗವಾಗಿ ಪೂರ್ವಾಹ್ನ 6.45 ಗಂಟೆಗೆ ಗಣಪತಿ ಹೋಮ, 7.10 ಗಂ. ಕನ್ನಿಮೂಲ ಗಣಪತಿಗೆ ಎಳೆನೀರು ಅಭಿಷೇಕ, 7.30 ಗಂಟೆಗೆ ಚಂಡೆಮೇಳ, 9. ಗಂಟೆಗೆ ಶ್ರೀ ಅಯ್ಯಪ್ಪಸ್ವಾಮಿಗೆ ಪಂಚಾಮೃತಾಭಿಷೇಕ,11.30 ಗಂ.ಶ್ರೀ ಅಯ್ಯಪ್ಪ ಸ್ವಾಮಿಗೆ ಲಕ್ಷಾರ್ಚನೆ, 12.30 ಗಂ.ಶ್ರೀ ಅಯ್ಯಪ್ಪಸ್ವಾಮಿಗೆ ಪಲ್ಲಪೂಜೆ, 1 ಗಂಟೆಗೆ ಮಹಾಪೂಜೆ ಮತ್ತು ಗಂಭೀರ ಪಟಾಕಿ,ನೇರೆದಿರುವ ಭಕ್ತಾಧಿಗಳಿಗೆ ಮಧ್ಯಾಹ್ನ 1 ರಿಂದ 4 ರವರೆಗೆ ಅನ್ನ ಸಂತರ್ಪಣೆ ನಡೆಯಲಿದೆ. ದಿನದ ವಿಶೇಷ ಪೂಜೆಯಾಗಿ ಬಿಲ್ವಪತ್ರೆ, ತುಳಸಿ ಆರ್ಚನೆ, ಪಂಚಾಮೃತ ಅಭಿಷೇಕ ಹಾಗೂ ದುರ್ವಾಚನೆ ನಡೆಸಲಾಗುವುದು. ಶ್ರೀಪುರಂ ಅಯ್ಯಪ್ಪ ಕ್ಷೇತ್ರದಲ್ಲಿ ವಿಶೇಷವಾಗಿ ಸಂಜೆ 6.30 ಗಂಟೆಗೆ ದೀಪಾರಾಧನೆ ಮತ್ತು ಮೆರವಣಿಗೆ 7.30 ಗಂಟೆಗೆ ದುರ್ಗಾಪೂಜೆ ನಂತರ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಅಧ್ಯಕ್ಷ ಸುರೇಶ್ ಹಾಗೂ ಕಾರ್ಯದರ್ಶಿ ಎಂ.ಚಂದ್ರ ತಿಳಿಸಿದ್ದಾರೆ. ಅನಿಸಿಕೆ: ಕಳೆದ 3 ವರ್ಷಗಳಿಂದ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಆಡಳಿತ ಮಂಡಳಿ, ಹಿರಿಯರ ಮಾರ್ಗದರ್ಶನದೊಂದಿಗೆ ದಾನಿಗಳ ಹಾಗೂ ಭಕ್ತಾಧಿಗಳ ನೆರವಿನೊಂದಿಗೆ ದೇವಾಲಯದಲ್ಲಿ ಹಂತ ಹಂತವಾಗಿ ನಿರ್ಮಾಣ ಹೊಂದಿವೆ. ಅದೇ ರೀತಿಯಲ್ಲಿ ಕಳೆದ ತಾನು ಕಂಡಿದ ದುರ್ಗಾ ಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಮತ್ತು ಲೋಕಾರ್ಪಣೆಗೊಳಿಸಲು ಸಾಕಷ್ಟು ನೇರವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ್ದನ್ನು ಸ್ಮರಿಸಿದರು. ಈ ಬಾರೀ ಮುಖ ಮಂಟಪವನ್ನು ನಿರ್ಮಿಸುವ ಇರಾದೆ ಹೊಂದಿದ ಸಂದರ್ಭ ಹಿರಿಯರು, ದಾನಿಗಳು ಹಾಗೂ ಭಕ್ತಾಧಿಗಳು ತುಂಬು ಹೃದಯದ ನೆರವು ಸಹಕಾರಗಳನ್ನು ನೀಡಿದ್ದರಿಂದ 6 ತಿಂಗಳಿನಲ್ಲಿ ಶೀಘ್ರವಾಗಿ ಕಾಮಗಾರಿ ನಿರ್ವಹಿಸಿ ಲೋಕಾರ್ಪಣೆಗೆ ಸನ್ನದಗೊಂಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಎಲ್ಲಾ ರೀತಿಯ ಸಹಕಾರ ನೀಡಿದ ಸರ್ವರನ್ನು ಸ್ಮರಿಸುವುದಾಗಿ ಅವರುಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ಹೇಳಿದರು. ಸುಂಟಿಕೊಪ್ಪದ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು ಸಾಕಷ್ಟು ಪ್ರಸಿದ್ಧಿಯನ್ನು ಪಡೆಯುತ್ತಿದ್ದು ಈ ಕ್ಷೇತ್ರದಲ್ಲಿ ಶ್ರೀಅಯ್ಯಪ್ಪ ಸ್ವಾಮಿ, ಕನ್ನಿಮೂಲ ಗಣಪತಿ, ಶ್ರೀದುರ್ಗಾ ಲಕ್ಷ್ಮೀ ಸನ್ನಿಧಿಗಳಿದ್ದು ಮುಂದಿನ ಯೋಜನೆಯಾಗಿ ನಾಗಾಲಯ ಮಾಡುವ ಇರಾದೆಯನ್ನು ಹೊಂದಿದ್ದೇವೆ ಭಕ್ತಾಧಿಗಳು ಹಾಗೂ ದಾನಿಗಳು ತನು ಮನ ಧನ ಸಹಾಯವನ್ನು ನೀಡಿ ನಮ್ಮೊಂದಿಗೆ ಕೈ ಜೋಡಿಸುವಂತೆ ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಕಾರ್ಯದರ್ಶಿ ಎಂ.ಚಂದ್ರ ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*

ಮೇ 22, 2026

*ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*

ಮೇ 22, 2026

*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 

ಮೇ 22, 2026

*ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*

ಮೇ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 22 NEWS DESK : ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಯುವ ವೈಭವ…

*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 

ಮೇ 22, 2026

*ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*

ಮೇ 22, 2026

*ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮೇ 22, 2026

*ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ*

ಮೇ 22, 2026

*ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*

ಮೇ 22, 2026

*ದುಬಾರೆ ದುರ್ಘಟನೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಜ್ಯ ಉಪ ಲೋಕಾಯುಕ್ತ*

ಮೇ 22, 2026

*ಪ್ರಸನ್ನ ಭಟ್ ವಿರುದ್ಧ ದೂರು*

ಮೇ 22, 2026

*ಮೇ 22 ರಿಂದ ಮಾವು ಮತ್ತು ಹಲಸು ಮೇಳ*

ಮೇ 21, 2026

*ಮಡಿಕೇರಿ : ಮೇ 22 ರಂದು ನೇರ ಸಂದರ್ಶನ*

ಮೇ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.