Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಭಿವೃದ್ಧಿ ಕಾಣದ ಮರಗೋಡು ಸಂಪರ್ಕ ರಸ್ತೆಗಳು : ರಸ್ತೆತಡೆ ಪ್ರತಿಭಟನೆಗೆ ಗ್ರಾಮಸ್ಥರು ಹಾಗೂ ಆಟೋ ಚಾಲಕರ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಭಿವೃದ್ಧಿ ಕಾಣದ ಮರಗೋಡು ಸಂಪರ್ಕ ರಸ್ತೆಗಳು : ರಸ್ತೆತಡೆ ಪ್ರತಿಭಟನೆಗೆ ಗ್ರಾಮಸ್ಥರು ಹಾಗೂ ಆಟೋ ಚಾಲಕರ ನಿರ್ಧಾರ*

ಡಿಸೆಂಬರ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.23 NEWS DESK : ಮಡಿಕೇರಿ ತಾಲ್ಲೂಕಿನ ‘ಮರಗೋಡು’ ಗ್ರಾಮವನ್ನು ಸಂಪರ್ಕಿಸುವ ರಸ್ತೆಗಳು ಕಳೆದ ಒಂದೂವರೆ ದಶಕಗಳಿಂದ ಸೂಕ್ತ ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಹದಗೆಟ್ಟಿವೆ. ವ್ಯವಸ್ಥಿತ ರಸ್ತೆ ನಿರ್ವಹಣೆಗೆ ಆಗ್ರಹಿಸಿ ಡಿ.26 ರಂದು ಮರಗೋಡಿನಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಹಾಗೂ ಮರಗೋಡು ಆಟೋ ಚಾಲಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹದಗೆಟ್ಟ ರಸ್ತೆಗಳ ಬಗ್ಗೆ ಮಾಹಿತಿ ನೀಡಿದ ಮರಗೋಡು ಆಟೋ ಚಾಲಕರ ಸಂಘದ ಅಧ್ಯಕ್ಷ ಪಿ.ಟಿ.ನಂದಕುಮಾರ್ ಅವರು, ಮರಗೋಡು ಗ್ರಾಮವನ್ನು ಜಿಲ್ಲಾ ಕೇಂದ್ರಕ್ಕೆ ಬೆಸೆಯುವ ‘ಮಡಿಕೇರಿ-ಕತ್ತಲೆಕಾಡು-ಹುಲಿತಾಳ-ಮರಗೋಡು-ಕಟ್ಟೆಮಾಡು’ ರಸ್ತೆ ಹಾಗೂ ‘ಮರಗೋಡು-ಅರೆಕಾಡು-ಸಿದ್ದಾಪುರ’ ರಸ್ತೆ ಕನಿಷ್ಟ ದುರಸ್ತಿ ಕಾರ್ಯವನ್ನು ಕಾಣದೆ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿರುವುದಾಗಿ ಹೇಳಿದರು. ಕಳೆದ ಸುಮಾರು ಹದಿನೈದು ವರ್ಷಗಳಿಂದ ಮರಗೋಡು ಗ್ರಾಮ ಸಂಪರ್ಕ ರಸ್ತೆಗಳನ್ನು ದುರಸ್ತಿ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಕೇಳುತ್ತಲೆ ಬಂದಿದ್ದೇವೆ. ಆಯಾ ಸಂದರ್ಭಗಳಲ್ಲಿ ಆಶ್ವಾಸನೆಯಷ್ಟೆ ದೊರಕುತ್ತಿದ್ದು, ರಸ್ತೆ ದುರಸ್ತಿ ಪಡಿಸುವ ಯಾವ ಕಾರ್ಯವು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಪ್ರಸಕ್ತ ಸಾಲಿನಲ್ಲಿಯೂ ರಸ್ತೆ ದುರಸ್ತಿ ಬಗ್ಗೆ ಸಂಬಂಧಪಟ್ಟವರನ್ನು ಒತ್ತಾಯಿಸಲಾಗಿದೆ. ಆ ಸಂದರ್ಭ ಮಡಿಕೇರಿ-ಕಟ್ಟೆಮಾಡು ನಡುವಣ ಸುಮಾರು 23 ಕಿ.ಮೀ. ಹದಗೆಟ್ಟ ರಸ್ತೆಯ ಕೇವಲ 5 ಕಿ.ಮೀ.ಆಯ್ದ ಭಾಗಗಳನ್ನಷ್ಟೆ ದುರಸ್ತಿ ಪಡಿಸುವ ಉತ್ತರ ಇಲಾಖೆಯಿಂದ ದೊರಕಿದೆ. ಇದಕ್ಕೆ ಯಾವ ಅರ್ಥವೆಂದು ಅವರು ಪ್ರಶ್ನಿಸಿ, ಹದಗೆಟ್ಟ ರಸ್ತೆಯಿಂದಾಗಿ ಅಗತ್ಯ ಕೆಲಸ ಕಾರ್ಯಗಳಿಗೆ ಖಾಸಗಿ ವಾಹನಗಳನ್ನು ಸ್ಥಳೀಯರು ಅವಲಂಬಿಸಬೇಕಾಗಿದೆ. ಆದರೆ, ಹೊಂಡ ಗುಂಡಿಗಳಿಂದ ಕೂಡಿರುವ ಮಾರ್ಗದಲ್ಲಿ ಬರಲು ಆಟೋ ರಿಕ್ಷಾಗಳು, ಖಾಸಗಿ ವಾಹನಗಳು ತೆರಳುವುದು ಅಸಾಧ್ಯವಾಗಿದೆ ಎಂದರು. ಹುಲಿತಾಳದಿಂದ ಮರಗೋಡಿಗೆ ಸಂಪರ್ಕಿಸುವ ರಸ್ತೆ ತೀವ್ರ ಸ್ವರೂಪದಲ್ಲಿ ಹದಗೆಟ್ಟಿರುವುದರಿಂದ ಹುಲಿತಾಳದಿಂದ ಮರಗೋಡಿಗೆ ಬರುವವರು ಪ್ರಸ್ತುತ ಹಾಕತ್ತೂರು ಗ್ರಾಮಕ್ಕಾಗಿ ಸುಮಾರು 8 ಕಿ.ಮೀ. ಬಳಸು ಹಾದಿಗಾಗಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪಿ.ಟಿ.ನಂದಕುಮಾರ್ ತಿಳಿಸಿದರು. *ಸರಕಾರಿ ಬಸ್ ಸಂಕಷ್ಟ* ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಡಿಕೇರಿಯಿಂದ ಕತ್ತಲೆಕಾಡು, ಹುಲಿತಾಳ, ಮರಗೋಡು, ಕಟ್ಟೆಮಾಡಿಗೆ ಬೆಳಗ್ಗೆ 8.30ಕ್ಕೆ ಹಾಗೂ ಸಂಜೆ 5.45ಕ್ಕೆ ಬರುವಂತೆ ಸರ್ಕಾರಿ ಬಸ್ ವ್ಯವಸ್ಥೆ ಇತ್ತು. ಪ್ರಸ್ತುತ ಬೆಳಗ್ಗಿನ ಬಸ್ ಬಿಟ್ಟರೆ, ಸಂಜೆಯ ಬೇಳೆ ಮಡಿಕೇರಿಯಿಂದ ಬರುವ ಸರ್ಕಾರಿ ಬಸ್ ಹುಲಿತಾಳದಿಂದ ಮರಳಿ ಹೋಗುತ್ತಿರುವುದರಿಂದ ಮರಗೋಡು ವ್ಯಾಪ್ತಿಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮರಗೋಡನ್ನು ಸಂಪರ್ಕಿಸುವ ರಸ್ತೆಗಳನ್ನು ಪುನರ್ ನಿರ್ಮಾಣ ಮಾಡಿ, ಸಂಚಾರ ವ್ಯವಸ್ಥೆ ಸುಗಮಗೊಳಿಸಬೇಕು.ಯಾವುದೇ ಕಾರಣಕ್ಕೂ ಗುಂಡಿ ಮುಚ್ಚುವ ಕೆಲಸಕ್ಕೆ ಅವಕಾಶ ನೀಡುವುದಿಲ್ಲ, ಬೇಡಿಕೆ ಈಡೇರಿಕೆಗಾಗಿ ಮರಗೋಡು ಸುತ್ತಮುತ್ತಲ ಗ್ರಾಮಸ್ಥರೊಂದಿಗೆ ಡಿ.26 ರಂದು ಬೆಳಗ್ಗಿನಿಂದ ಸಂಜೆಯವರೆಗೆ ರಸ್ತೆತಡೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ತೊಂಡೀರ ಕೌಶಿಕ್, ಈಶ್ವರ್ ಹೆಚ್.ಎನ್, ಆಟೋ ಚಾಲಕರ ಸಂಘದ ಉಪಾಧ್ಯಕ್ಷ ಬಡುವಂಡ ಪ್ರದೀಪ್, ಕಾರ್ಯದರ್ಶಿ ಇಟ್ಟಣಿಕೆ ನವನೀತ್ ಹಾಗೂ ಖಜಾಂಚಿ ಬಿ.ಎಂ.ರಂಜು ಮಹೇಶ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.