
ಮಡಿಕೇರಿ ಡಿ.24 NEWS DESK : ಕೊಡಗು ಜಿಲ್ಲಾಡಳಿತ ಭವನದ ಮುಂಭಾಗದ ತಡೆಗೋಡೆಯ 2ನೇ ಹಂತದ ಕಾಮಗಾರಿ 3.45 ಕೋಟಿ ರೂ ವೆಚ್ಚದಲ್ಲಿ ಪೂರ್ಣಗೊಂಡಿದ್ದು, ಲೋಕಾಯುಕ್ತ ಮುಖ್ಯ ಇಂಜಿನಿಯರ್ ಮತ್ತು ಅಧಿಕಾರಿಗಳ ತಂಡ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿಯನ್ನು ವೀಕ್ಷಿಸಿದ ಲೋಕಾಯುಕ್ತ ಮುಖ್ಯ ಇಂಜಿನಿಯರ್ ರಮೇಶ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳಿಂದ ಮಾಹಿತಿ ಪಡೆದರು. ದ್ವಿತೀಯ ಹಂತದ ಕಾಮಗಾರಿಯ ವಿನ್ಯಾಸ, ಬಳಸಲಾದ ತಂತ್ರಜ್ಞಾನ, ಕಾಮಗಾರಿ ಮುಕ್ತಾಯಗೊಂಡ ಅವಧಿ, ಕಾಮಗಾರಿಯಲ್ಲಿ ಬಳಸಲಾದ ವಸ್ತುಗಳ ಗುಣಮಟ್ಟ ಸೇರಿದಂತೆ ವಿವಿಧ ಮಾಹಿತಿಗಳನ್ನು ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳಿಂದ ಪಡೆದುಕೊಂಡರು. ಈ ಸಂದರ್ಭ ಲೋಕಾಯುಕ್ತ ಕಾರ್ಯಪಾಲಕ ಇಂಜಿನಿಯರ್ ಅರವಿಂದ್, ಕೊಡಗು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಇಬ್ರಾಹಿಂ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸತೀಶ್, ಗಿರೀಶ್ ಮತ್ತಿತ್ತರರು ಹಾಜರಿದ್ದರು.









