Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಜೆರ್ಸಿ ವಿತರಣೆ*
ಇತ್ತೀಚಿನ ಸುದ್ದಿಗಳು

*ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಜೆರ್ಸಿ ವಿತರಣೆ*

December 25, 20252 Mins Read
Facebook WhatsApp Twitter Telegram Copy Link Threads Email LinkedIn Pinterest
oplus_0
Facebook Twitter WhatsApp Email Telegram Copy Link


ವಿರಾಜಪೇಟೆ ಡಿ.25 NEWS DESK : ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಸಹಕಾರ ನೀಡುವುದಾಗಿ ದಾನಿಗಳು ಹಾಗೂ ಮಾಜಿ ಸೈನಿಕ ಕ್ಯಾಪ್ಟನ್ ಬಾಚುರ ಎಸ್ ಪೂಣಚ್ಚ ಭರವಸೆ ನೀಡಿದರು. ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಟಿ ಶರ್ಟ್ ಹಾಗೂ ಜೆರ್ಸಿ ವಿತರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ತನಗೆ ವಿದ್ಯೆ ನೀಡಿದ ಶಾಲೆಗೆ ಏನಾದರೊಂದು ಕೊಡುಗೆ ನೀಡಬೇಕು ಎನ್ನುವ ನಿಟ್ಟಿನಲ್ಲಿ ಈ ಶಾಲೆಯಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ತನ್ನಿಂದ ಆದ ಸಹಾಯವನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಸಾಧ್ಯವಾದಷ್ಟು ನೆರವು ನೀಡುತ್ತೇನೆ. ಇಲ್ಲಿಂದ ವಿದ್ಯೆ ಪಡೆದ 30 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಆಗಿ ನಿರ್ವಋತ್ತಿಗೊಂಡಿದ್ದೇನೆ. ಇದು ನನ್ನ ಮೈಲಿಗಲ್ಲು. ಸಮಾಜಕ್ಕೆ ನಾವು ಏನಾದರೊಂದು ಕೊಡುಗೆ ನೀಡಬೇಕು. ಇಲ್ಲಿನ ವಿದ್ಯಾರ್ಥಿಗಳು ಕೂಡ ಉನ್ನತ ವಿದ್ಯಾಭ್ಯಾಸ ಪಡೆದು ಸೇನೆಗೆ ಸೇರುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನರಿಯಂದಡ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ, ವಿರಾಜಪೇಟೆ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಮಾತನಾಡಿ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ದಾನಿಗಳ ಸಹಕಾರ ಅವಶ್ಯ. ಶಾಲೆಯಲ್ಲಿ ಕಲಿತು ಉನ್ನತ ಸ್ಥಾನದಲ್ಲಿರುವ ಹಳೇ ವಿದ್ಯಾರ್ಥಿಗಳು ಕಲಿತ ಶಾಲೆಗೆ ಕೈಲಾದ ಸಹಾಯ ಮಾಡಬೇಕು. ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ಅನೇಕ ಹುದ್ದೆಗಳನ್ನು ಅಲಂಕರಿಸಿ ಕೀರ್ತಿ ತಂದಿದ್ದಾರೆ. ಅಂತಹದೇ ಸಾಲಿನಲ್ಲಿ ದಾನಿಗಳು ಹಾಗೂ ನಿವೃತ್ತ ಮಾಜಿ ಸೈನಿಕ ಕ್ಯಾಪ್ಟನ್ ಪೂಣಚ್ಚ ಸೇರಿದ್ದಾರೆ. ಇವರು ಎಲೆಮರೆಯ ಕಾಯಿಯ ಹಾಗೆ ಸಮಾಜ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ತಾನು ಕಲಿತ ಶಾಲೆಗೆ ಏನಾದರೊಂದು ಕೊಡುಗೆ ನೀಡಬೇಕು ಎನ್ನುವ ಹಂಬಲದಿಂದ ತಮ್ಮ ಕೈಲಾದ ಸೇವೆಯನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಇವರ ಸೇವೆ ಇನ್ನಷ್ಟು ಮುಂದುವರೆಯಲಿ ಎಂದು ಹಾರೈಸುವುದಾಗಿ ಹೇಳಿದರು. ಶಾಲಾ ಮುಖ್ಯ ಶಿಕ್ಷಕಿ ಚೆಯ್ಯಂಡ ಲೀಲಾವತಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣದ ಜತೆಗೆ ಅನೇಕ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಅದರೊಂದಿಗೆ ದಾನಿಗಳು ನೆರವು ನೀಡಿದ್ದಲ್ಲಿ ಬಡ ಮಕ್ಕಳಿಗೆ ಅನುಕೂಲವಾಗುತ್ತದೆ. ಈ ಹಿಂದೆ ದಾನಿಗಳಾದ ಕ್ಯಾಪ್ಟನ್ ಪೂಣಚ್ಚ ಅವರು ನೀಡಿದ ಭರವಸೆಯಂತೆ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಜರ್ಸಿ ಹಾಗೂ ಟಿಶರ್ಟ್ ವಿತರಿಸಿ ನೆರವು ನೀಡಿದ್ದಾರೆ. ಇವರ ಸೇವೆ ಅನುಕರಣೀಯ. ಇವರು ಈ ಶಾಲೆಯ ಮೇಲಿಟ್ಟಿರುವ ಅಭಿಮಾನಕ್ಕೆ ಬೆಲೆಕಟ್ಟಲಾಗದು ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯ ಬೇಪಡಿಯಂಡ ವಿಲೀನ ಅಧ್ಯಕ್ಷತೆ ವಹಿಸಿ ಮಾತನಾಡಿ, ದಾನಿಗಳು ಪ್ರೋತ್ಸಾಹದಾಯಕ ಕೊಡುಗೆ ನೀಡಿದರೆ ಮಕ್ಕಳ ಉತ್ತಮ ಕಲಿಕೆಗೆ ನೆರವಾಗುತ್ತದೆ. ಈ ನಿಟ್ಟಿನಲ್ಲಿ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ, ದಾನಿಗಳು ಆದ, ಮಾಜಿ ಸೈನಿಕ ಕ್ಯಾಪ್ಟನ್ ಬಾಚುರ ಪೂಣಚ್ಚ ತನಗೆ ವಿದ್ಯೆ ನೀಡಿದ ಶಾಲೆಯ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಟಿ ಶರ್ಟ್ ಹಾಗೂ ಜೆರ್ಸಿ ವಿತರಿಸಿ ಇಂದು ಮಾನವೀಯತೆ ಮೆರೆದಿದ್ದಾರೆ. ಇದು ಶ್ಲಾಘನೀಯ. ಉತ್ತಮ ಬೋಧನೆ ಮೂಲಕ ಮಕ್ಕಳ ವ್ಯಕ್ತಿತ್ವ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಸರಕಾರಿ ಶಾಲೆಗಳನ್ನು ಉಳಿಸಬೇಕು. ಪ್ರೋಷಕರು, ಶಿಕ್ಷಕರು ಶಾಲೆ ಪ್ರಗತಿ ಕುರಿತು ಕಾಳಜಿ ತೋರಿಸಬೇಕು. ಮಕ್ಕಳಲ್ಲಿರುವ ಕಲಿಕೆಯ ಆಸಕ್ತಿ ಗಮನಿಸಬೇಕು. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಕಲಿಕೆಯ ಮಹತ್ವ ತಿಳಿಸಿಕೊಡಬೇಕು ಎಂದರು. ವೇದಿಕೆಯಲ್ಲಿ ನಿವೃತ್ತ ಕ್ಯಾಪ್ಟನ್ ಬಾಚುರ ಪೂಣಚ್ಚ ಅವರ ತಾಯಿ ಬಾಚುರ ಕಾಮವ್ವ, ಸ್ಥಳಿಯ ಕಾಫಿ ಬೆಳೆಗಾರರು, ಸಮಾಜ ಸೇವಕರು ಆದ ಪಟ್ರಪಂಡ ಸುರೇಶ್ ಬೆಳ್ಯಪ್ಪ, ಸ್ಥಳದಾನಿಗಳು, ಶಾಲೆಯ ಸಲಹಾ ಸಮಿತಿ ಸದಸ್ಯರಾದ ಬಿದ್ದೇರಿಯಂಡ ದೇವಯ್ಯ ಉಪಸ್ಥಿತರಿದ್ದರು. ಇದೇ ಸಂದರ್ಭ ಶಾಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ನಿವೃತ್ತ ಕ್ಯಾಪ್ಟನ್ ಬಾಚುರ ಪೂಣಚ್ಚ ಹಾಗೂ ಬಾಚುರ ಕಾಮವ್ವ ಅವರು ಟಿ ಶರ್ಟ್ ಹಾಗೂ ಜರ್ಸಿ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭ ಅತಿಥಿ ಶಿಕ್ಷಕಿ ಫಸಿಲಾ, ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ರಾಜ್ಯ ಸರ್ಕಾರಿ ನೌಕರರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ*
Next Article *ಕೊಡಗಿನಲ್ಲಿ ಸಂಭ್ರಮದ ಕ್ರಿಸ್‍ಮಸ್ ಆಚರಣೆ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.