Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ 26ನೇ ವಾರ್ಷಿಕೋತ್ಸವ : ಗುರಿ ಸಾಧನೆಗೆ ಅದಮ್ಯ ಪ್ರಯತ್ನ ಅಗತ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ಚರ್ಯ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ 26ನೇ ವಾರ್ಷಿಕೋತ್ಸವ : ಗುರಿ ಸಾಧನೆಗೆ ಅದಮ್ಯ ಪ್ರಯತ್ನ ಅಗತ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ಚರ್ಯ ಸಲಹೆ*

ಡಿಸೆಂಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೂರ್ನಾಡು ಡಿ.25 NEWS DESK : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ನ್ಯಾಯಯುತವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೇ ಆ ಗುರಿಯನ್ನು ತಲುಪಲು ಅದಮ್ಯ ಪ್ರಯತ್ನ ಇದ್ದಾಗ ಮಾತ್ರ ಸಾಧನೆಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ಚರ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾಸಂಸ್ಥೆಯ 26ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮಿಸುವ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಪ್ರಮುಖವಾದದ್ದು, ಈಗಿನ ಮಕ್ಕಳು ಸಣ್ಣ ಸಣ್ಣ ವಿಚಾರಗಳಿಗೆ ಬದುಕನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಇವರಲ್ಲಿ ಧೈರ್ಯವನ್ನು ತುಂಬುವ ಕಾರ್ಯವಾಗಬೇಕು ಎಂದು ತಿಳಿಸಿದರು. ಇಂತಹ ಶಾಲೆಗಳಿಂದಲೆ ದೇಶವನ್ನು ಮುನ್ನೆಡುಸುವಂತಹ ಪ್ರತಿಭಾವಂತ ವ್ಯಕ್ತಿಗಳು ರೂಪುಗೊಳ್ಳುತ್ತಾರೆ ಎಂದು ಹೇಳಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ಈಗಿನ ಮಕ್ಕಳು ಆರೋಗ್ಯಕರವಲ್ಲದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ವಿಷಾದನೀಯ. ಈ ಬಗ್ಗೆ ಪೋಷಕರು ಗಮನ ಹರಿಸಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಡುವಂಡ ಬೆಲ್ಲುಚಿಣ್ಣಪ್ಪ, ಕಾರ್ಯದರ್ಶಿ ಬಡುವಂಡ ಬೋಪಣ್ಣ, ಖಜಾಂಚಿ ಎನ್.ಒ.ಮ್ಯಾಥ್ಯು, ನಿರ್ದೇಶಕರಾದ ಮಾಳೇಟಿರ ನವೀನ್ ಕಾರ್ಯಪ್ಪ, ಡಾ. ಜೆ.ಎ.ಕುಂಞಅಬ್ದುಲ್ಲಾ, ಬಡುವಂಡ ವಿಜಯ, ಅವರೆಮಾದಂಡ ಸುಗುಣ ಸುಬ್ಬಯ್ಯ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ, ಶಾಲಾ ಮುಖ್ಯೋಪಾಧ್ಯಾಯಿನಿ ಶಿಲ್ಪ ಪೊನ್ನಮ್ಮ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷತಾಯಿಬ್ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಕರಕುಶಲ ವಸ್ತು ಪ್ರದರ್ಶನ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪಾರಿತೋಷಕ ಮತ್ತು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಬಹುಮಾನಗಳನ್ನು ಅತಿಥಿಗಳು ವಿತರಿಸಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಮಡಿಕೇರಿ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ ಮೊಹಮ್ಮದ್ ಸಾಹಿಲ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ, ಮಾಜಿ ಅಧ್ಯಕ್ಷ ಮಾಳೇಟಿರ ನವೀನ್ ಕಾರ್ಯಪ್ಪ, ಕುಂಞಮ್ಮ ಮತ್ತು ಶಾಲಾ ವಿದ್ಯಾರ್ಥಿ ಪ್ರಧಾನ್ ಬಸಪ್ಪ ಅವರನ್ನು ಹಳೆಯ ವಿದ್ಯಾರ್ಥಿಗಳ ಸಂಘದಿಂದ ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಕೆ.ಎಚ್.ಹನ ಪರ್ವಿನ್ ಸ್ವಾಗತಿಸಿದರು, ಪಿ.ಎಸ್. ಪರಿದೇಚಮ್ಮ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶಿಲ್ಪ ಪೊನ್ನಮ್ಮ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿನಿ ಯು.ಆರ್.ಭೂಮಿಕ ಭಟ್ ವಂದಿಸಿದರು. ಸಮಾರಂಭದ ನಂತರ ಜರುಗಿದ ಶಾಲಾ ವಿದ್ಯಾರ್ಥಿಗಳ ಸಾಂಸ್ಕøತಿಕ ಕಾರ್ಯಕ್ರಮಗಳು ಹೆಚ್ಚು ಆಕರ್ಷಣಿಯವಾಗಿದ್ದವು.

ವರದಿ : ಟಿ.ಸಿ. ನಾಗರಾಜ್, ಮೂರ್ನಾಡು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ…

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.