Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ : ಚೇರಂಬಾಣೆ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿ ಪ್ರಥಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ : ಚೇರಂಬಾಣೆ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿ ಪ್ರಥಮ*

ಡಿಸೆಂಬರ್ 25, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಡಿ.25 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಗೌಡ ವಿಕಾಸ ವೇದಿಕೆ (ಸಾಮಾಜಿಕ ಮಾಧ್ಯಮ ವಿಭಾಗ) ಸಹಕಾರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಅರೆಭಾಷೆ ‘ರಸಪ್ರಶ್ನೆ ಸ್ಪರ್ಧಾ’ ಕಾರ್ಯಕ್ರಮ ನಡೆಯಿತು. ಅರೆಭಾಷೆಯಲ್ಲಿ ಹಲವು ಪ್ರಶ್ನೆ ಕೇಳುವ ಮೂಲಕ ಅರೆಭಾಷೆ ಮತ್ತು ಕನ್ನಡದ ಶಬ್ದಕೋಶದ ಪದಗಳನ್ನು ಉತ್ತರಿಸುವ ಮೂಲಕ ಮೂವರು ವಿದ್ಯಾರ್ಥಿಗಳು ನಗದು ಬಹುಮಾನ ಪಡೆದರು.  ಅರೆಭಾಷೆ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ದೂರದ ಬೆಂಗಳೂರು, ಕರಿಕೆ, ಸುಳ್ಯ, ಪೆರಾಜೆ, ಸಂಪಾಜೆ, ಕೊಯನಾಡು, ಭಾಗಮಂಡಲ. ಚೇರಂಬಾಣೆ, ಮೂರ್ನಾಡು, ಮದೆನಾಡು, ಮೇಕೇರಿ, ಮಡಿಕೇರಿಯ ವಿವಿಧ ಶಾಲೆಗಳಿಂದ 35 ವಿದ್ಯಾರ್ಥಿಗಳು ಭಾಗವಹಿಸಿ ಅರೆಭಾಷೆ ರಸಪ್ರಶ್ನೆ ಪರೀಕ್ಷೆ ಬರೆದರು. ಇವರಲ್ಲಿ 8 ವಿದ್ಯಾರ್ಥಿಗಳು 40 ಅಂಕಕ್ಕೆ 38 ಅಂಕವನ್ನು ಇಬ್ಬರು, 37 ಅಂಕವನ್ನು ಮೂವರು ಮತ್ತು 35 ಅಂಕವನ್ನು ಇಬ್ಬರು ಪಡೆದು ರಸಪ್ರಶ್ನೆ ಸುತ್ತಿಗೆ ಆಯ್ಕೆಯಾಗಿದ್ದರು. ಇವರಿಗೆ ‘ಥಟ್’ ಅಂತ ಹೇಳಿ ಕಾರ್ಯಕ್ರಮದ ರೀತಿ ಅರೆಭಾಷೆಯಲ್ಲಿ ಪ್ರಶ್ನೆ ಕೇಳಿ ಉತ್ತರ ಪಡೆಯುವ ಮೂಲಕ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಅರೆಭಾಷೆ ಶಬ್ದ ಭಂಡಾರದ ಬಗ್ಗೆ ಮಾಹಿತಿ ನೀಡುವುದು ಜತೆಗೆ ಒಂದು ರೀತಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರುಗುವ ರೀತಿ ಅರೆಭಾಷೆ ರಸಪ್ರಶ್ನೆ ಕಾರ್ಯಕ್ರಮ ನಡೆದಿದ್ದು ವಿಶೇಷ. :: ವಿಜೇತರು :: ಪ್ರಥಮ ಸ್ಥಾನ ಪಡೆದ ಚೇರಂಬಾಣೆಯ ರಾಜರಾಜೇಶ್ವರಿ ಶಾಲೆಯ ಲಕ್ಷಣ ಕಾಳೇರಮ್ಮನ, ದ್ವಿತೀಯ ಸ್ಥಾನ ಪಡೆದ ಪೆರಾಜೆಯ ವಿದ್ಯಾರ್ಥಿ ಕಾರ್ತಿಕ್, ತೃತೀಯ ಸ್ಥಾನ ಪಡೆದ ನಗರದ ಸಂತ ಜೊಸೆಫರ ಶಾಲೆಯ ಎಲಿನಾ ಅವರಿಗೆ ಕ್ರಮವಾಗಿ 15 ಸಾವಿರ, 10 ಸಾವಿರ ಮತ್ತು 5 ಸಾವಿರ ನಗದು ಬಹುಮಾನವನ್ನು ಅರೆಭಾಷೆ ಗೌಡ ವಿಕಾಸ ವೇದಿಕೆಯ ನಿರ್ದೇಶಕರಾದ ಪ್ರಹ್ಲಾದ್ ಪೊಕ್ಕುಳಂಡ್ರ ಅವರು ವೈಯಕ್ತಿಕವಾಗಿ ನೀಡಿದರು. ಜತೆಗೆ ಪ್ರಶಸ್ತಿ ಪತ್ರ ನೀಡಲಾಯಿತು. :: ಸಭಾ ಕಾರ್ಯಕ್ರಮ :: ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅರೆಭಾಷೆ ಸಾಹಿತ್ಯ, ಸಂಸ್ಕೃತಿ, ಸಂಶೋಧನೆ ಮತ್ತು ಅರೆಭಾಷೆಯಲ್ಲಿ ಹಲವು ಉತ್ತಮ ಕೃತಿಗಳನ್ನು ಪ್ರಕಟಿಸುವ ಮೂಲಕ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಅಕಾಡೆಮಿ ಸಹಕಾರದಲ್ಲಿ ಅರೆಭಾಷೆ ಗೌಡ ವಿಕಾಸ ವೇದಿಕೆ ವತಿಯಿಂದ ಅರೆಭಾಷೆ ರಸಪ್ರಶ್ನೆ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಅರೆಭಾಷೆ ಮಾತನಾಡುವ ಎಲ್ಲರೂ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಮೆಚ್ಚುವಂತದ್ದು, ಅರೆಭಾಷೆಯು ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನವಾಗಿದ್ದು, ಪ್ರಾದೇಶವಾರು ವ್ಯತ್ಯಾಸ ಕಾಣುತ್ತೇವೆ ಎಂದರು. ಮುಂದಿನ ದಿನದಲ್ಲಿ ಸುಳ್ಯ ತಾಲ್ಲೂಕಿನಲ್ಲಿ ಅರೆಭಾಷೆ ರಸಪ್ರಶ್ನೆ ಕಾರ್ಯಕ್ರಮವನ್ನು ಅರೆಭಾಷೆ ಗೌಡ ವಿಕಾಸ ವೇದಿಕೆ ಸಹಕಾರ ನಡೆಸಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರು ಪ್ರಕಟಿಸಿದರು. ಅರೆಭಾಷೆ ಗೌಡ ವಿಕಾಸ ವೇದಿಕೆಯ ನಿರ್ದೇಶಕರಾದ ಪ್ರಹ್ಲಾದ್ ಪೊಕ್ಕುಳಂಡ್ರ ಅವರು ಮಾತನಾಡಿ, ಕಳೆದ 25 ವರ್ಷಗಳಿಂದ ಅಮೆರಿಕಾದಲ್ಲಿ ನೆಲೆಸಿದ್ದು, ಮಾತೃ ಭಾಷೆಯಾದ ಅರೆಭಾಷೆಯಲ್ಲಿ ವಿದ್ಯಾರ್ಥಿಗಳಿಗೆ ಸಹಕಾರವಾಗುವಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದು ಯೋಚಿಸಿದಾಗ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತಿ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಈ ಕಾರ್ಯಕ್ರಮ ಆಯೋಜನೆಗೆ ಉಪಯುಕ್ತವಾಯಿತು ಎಂದರು. ನಾವು ಎಲ್ಲೇ ನೆಲೆಸಿದ್ದರೂ ಸಹ ಕುಟುಂಬದ ಅರೆಭಾಷೆ ಮತ್ತು ನಾಡಿನ ಕನ್ನಡ ಭಾಷೆ ಮರೆಯಬಾರದು, ಸ್ಥಳೀಯ ಭಾಷೆಗಳು ಉಳಿದಲ್ಲಿ ನಾಡಿನ ಭಾಷೆಯು ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯಲು ಸಾಧ್ಯ ಎಂದು ಅರೆಭಾಷೆ ಗೌಡ ವಿಕಾಸ ವೇದಿಕೆಯ ನಿರ್ದೇಶಕರು ಅಭಿಪ್ರಾಯಪಟ್ಟರು. ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನ ಉಪಯೋಗಿಸಿಕೊಂಡು ಅರೆಭಾಷೆ ಕಲಿಯಬೇಕು. ವಿದ್ಯಾರ್ಥಿ ಜೀವನದಲ್ಲಿ ಜ್ಞಾನಾರ್ಜನೆ ವಿಕಾಸ ಆಗಬೇಕು.‌ ಒಳ್ಳೆಯ ರೀತಿ ಯೋಚನಾ ಲಹರಿ ಬದಲಿಸಿಕೊಳ್ಳಬೇಕು ಎಂದು ಪ್ರಹ್ಲಾದ್ ಪೊಕ್ಕುಳಂಡ್ರ ಅವರು ಸಲಹೆ ನೀಡಿದರು. ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ ಕುಂದಲ್ಪಾಡಿ ಅವರು ಮಾತನಾಡಿ, ಇಂದಿನ ಸಾಮಾಜಿಕ ಮಾಧ್ಯಮ‌ ಯುಗದಲ್ಲಿ ಮೊಬೈಲ್ ಬಳಕೆ ಅನಿವಾರ್ಯ ಮತ್ತು ಅಗತ್ಯವಾಗಿದೆ. ಇದರಿಂದ ಉಪಯುಕ್ತ ಮಾಹಿತಿ ಪಡೆಯುವಂತಾಗಬೇಕು ಎಂದರು. ಮೊಬೈಲ್ ಒಂದು ರೀತಿ ಗ್ರಂಥಾಲಯವಾಗಿದ್ದು, ಪುಸ್ತಕದ ಭಂಡಾರ ಇದ್ದಂತೆ, ತಂತ್ರಜ್ಞಾನದ ಮಾಹಿತಿಯ ಆಗರವಾಗಿದ್ದು, ಒಳ್ಳೆಯ ಅಂಶಗಳನ್ನು ಬಳಸಿಕೊಂಡು ಅರೆಭಾಷೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಸಾಗಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ‘ಹುಟ್ಟಿದ ನೆಲ, ಓಡಾಡಿದ ದಾರಿ ಹಾಗೂ ಮನೆಯ ಭಾಷೆಯನ್ನು ಯಾರೂ ಮರೆಯಬಾರದು, ಆ ದಿಸೆಯಲ್ಲಿ ಅರೆಭಾಷೆ ಮಾತನಾಡುವ ಮೂಲಕ ಉಳಿಸಿ ಬೆಳೆಸಬೇಕು ಎಂದು ದಿವಾಕರ ಕುಂದಲ್ಪಾಡಿ ಅವರು ಕರೆ ನೀಡಿದರು.’ ಸಾಹಿತಿ ಬೈತಡ್ಕ ಜಾನಕಿ ಬೆಳ್ಯಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು ಅರೆಭಾಷೆಯಲ್ಲಿ ಕಥೆ, ಕವನ, ಅವಲೋಕನ, ವಿಮರ್ಶೆ, ವಿಡಂಬನೆ ಹಾಗೂ‌ ಹಾಸ್ಯ ಲೇಖನ ಬರೆಯುಂತಾಗಬೇಕು ಎಂದು ಸಲಹೆ ನೀಡಿದರು. ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ತೆಕ್ಕಡೆ ಕುಮಾರಸ್ವಾಮಿ ಅವರು ಮಾತನಾಡಿ ನೂರಾರು ವರ್ಷಗಳಿಂದ ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಬೆಳೆಸಬೇಕು. ಅರೆಭಾಷೆಯಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದರು. ಅಕಾಡೆಮಿ ಸದಸ್ಯರಾದ ಲತಾ ಪ್ರಸಾದ್ ಕುದ್ಪಾಜೆ, ಮೋಹನ್ ಪೊನ್ನಚ್ಚನ, ಕನ್ನಡ ಸಾಹಿತ್ಯ ಪರಿಷತ್ತಿನ‌ ಸಂಘಟನಾ ಕಾರ್ಯದರ್ಶಿ ಪ್ರೇಮ ರಾಘವಯ್ಯ, ಕಲ್ಪನಾ ಹೊಸಗದ್ದೆ ಇತರರು ಇದ್ದರು. ಕಾವ್ಯನಂದ ಕೋಳಿಬೈಲು ಸ್ವಾಗತಿಸಿದರು, ಚೈತ್ರ ಕುದುಕುಳಿ ನಿರೂಪಿಸಿದರು, ಖುಷಿ ಪ್ರಾರ್ಥಿಸಿದರು, ರಿಜಿಸ್ಟ್ರಾರ್ ಚಿನ್ನಸ್ವಾಮಿ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ…

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.