Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧ : ಆದೇಶ ಪುನರ್ ಪರಿಶೀಲನೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧ : ಆದೇಶ ಪುನರ್ ಪರಿಶೀಲನೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ*

ಡಿಸೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.26 NEWS DESK : ಮಡಿಕೇರಿ ಹಾಗೂ ಕುಶಾಲನಗದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧಿಸಿ ಹೊರಡಿಸಿರುವ ಆದೇಶ ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ತಕ್ಷಣ ಪುನರ್ ಪರಿಶೀಲನೆ ನಡೆಸಬೇಕೆಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಸಲ್ಲಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಕಾರ್ಯದರ್ಶಿ ಎಂ.ಎಂ.ದಾವೂದ್, ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧದಿಂದ ಜನಸಾಮಾನ್ಯರು ಮತ್ತು ವರ್ತಕರು ಅನುಭವಿಸುವ ತೊಂದರೆಗಳ ಬಗ್ಗೆ ಗಮನ ಸೆಳೆದರು.  ಪ್ರವಾಸಿಗರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಅಗತ್ಯವಾಗಿದೆ. ಈ ನಿಷೇಧದಿಂದಾಗಿ ಜನ ಸಾಮಾನ್ಯರು ಹಾಗೂ ವರ್ತಕರಿಗೆ ತೊಂದರೆಯಾಗಲಿದೆ. ಆರೋಗ್ಯಕ್ಕೆ ಹಾನಿಕಾರಕವೆಂದು ವೈಜ್ಞಾನಿಕವಾಗಿ ಸಾಬೀತಾಗಿರುವ ತಂಪು ಪಾನೀಯಗಳು ಅದೇ ಪ್ಲಾಸ್ಟಿಕ್ ಬಾಟಲಿನಲ್ಲಿ ನಿರ್ಬಂಧವಿಲ್ಲದೆ ಮಾರಾಟವಾಗುತ್ತಿದೆ. ಇದಕ್ಕೆ ಯಾವುದೇ ಬ್ಯಾನ್‍ಗಳಿಲ್ಲ. ಆದರೆ, ಮಾನವನ ಜೀವಕ್ಕೆ ಅಗತ್ಯವಾದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳನ್ನೇ ನಿಷೇಧಿಸಿರುವುದು ಮಲತಾಯಿ ಧೋರಣೆ ಎಂದರು. ಜಿಲ್ಲೆಯ ನಾಗರಿಕರಾಗಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಂಪೂರ್ಣವಾಗಿ ಒಪ್ಪಿಕೊಂಡು ಪ್ಲಾಸ್ಟಿಕ್ ಬಳಕೆ ನಿಯಂತ್ರಣದ ಉದ್ದೇಶವನ್ನು ಬೆಂಬಲಿಸುತ್ತೇವೆ. ಆದರೆ, ಮಡಿಕೇರಿ ಹಾಗೂ ಕುಶಾಲನಗರ ಭಾಗಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧಕ್ಕೆ ಸಂಬಂಧಿಸಿದ ಇತ್ತೀಚಿನ ಆದೇಶವು ಕಾನೂನು, ತರ್ಕ ಹಾಗೂ ಮಾನವೀಯತೆಯ ಮಾನದಂಡಗಳಿಗೆ ವಿರುದ್ಧವಾಗಿದೆ. ಆದ್ದರಿಂದ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಅಥವಾ ಪುನರ್ ಪರಿಶೀಲಿಸಬೇಕು,  ಎಲ್ಲಾ ಪ್ಲಾಸ್ಟಿಕ್ ಬಾಟಲ್ ಪಾನೀಯಗಳಿಗೆ ಸಮಾನ ಹಾಗೂ ಭೇದಭಾವ ರಹಿತ ನಿಯಮ ಜಾರಿಗೊಳಿಸಬೇಕು, ಸಾರ್ವಜನಿಕರ ಅಭಿಪ್ರಾಯ ಪಡೆದು, ವೈಜ್ಞಾನಿಕ ಮತ್ತು ಕಾನೂನು ಸಲಹೆ ಆಧಾರಿತ ನೀತಿ ರೂಪಿಸಬೇಕು, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಎರಡನ್ನೂ ಸಮತೋಲನವಾಗಿ ಕಾಪಾಡಬೇಕು ಎಂದು ಮನವಿ ಮಾಡಿದರು. ಜನಸಾಮಾನ್ಯರು ಮತ್ತು ವರ್ತಕರಿಗೆ ತೊಂದರೆಯಾಗುವ ಈ ನಿರ್ಣಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಮುತ್ತುರಾಜು, ಕಾರ್ಯಾಧ್ಯಕ್ಷ ಮುದ್ದಪ್ಪ, ಗೌರವಾಧ್ಯಕ್ಷ ಪಿ.ಕೆ.ಯಾದವ್, ಉದ್ಯಮಿಗಳಾದ ಸತೀಶ್, ಕವನ್ ಬಿದ್ದಪ್ಪ ಉಪಸ್ಥಿತರಿದ್ದರು.  ನಂತರ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕಾಡಾನೆ ದಾಳಿಯಿಂದ ದುರದೃಷ್ಟವಶಾತ್ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಮಡಿಕೇರಿ…

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.