Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕವಿಮನೆ ಕವಿಶೈಲದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೂರ್ನಾಡು ಕಸಾಪ*
ಇತ್ತೀಚಿನ ಸುದ್ದಿಗಳು

*ಕವಿಮನೆ ಕವಿಶೈಲದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೂರ್ನಾಡು ಕಸಾಪ*

December 30, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.30 NEWS DESK : ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಕುವೆಂಪು ಅವರ ಜನ್ಮಸ್ಥಳ ಶಿವಮೊಗ್ಗದ ಕುಪ್ಪಳ್ಳಿಯ ಕವಿಮನೆ ಕವಿಶೈಲದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರ ನೇತೃತ್ವದಲ್ಲಿ ಕಸಾಪದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾಹಿತ್ಯಾಭಿಮಾನಿಗಳು ಕವಿಶೈಲದಲ್ಲಿ ಕವಿ ಕುವೆಂಪು ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಕುವೆಂಪು ಅವರನ್ನು ಸ್ಮರಿಸುತ್ತಾ ಮಾತನಾಡಿದ ಈರಮಂಡ ಹರಿಣಿ ವಿಜಯ್ ಅವರು ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿ ಮೊದಲ ಬಾರಿಗೆ ಕರುನಾಡಿಗೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಶ್ರೇಷ್ಠ ರಾಷ್ಟ್ರಕವಿ ಕುವೆಂಪು ಅವರು ತಮ್ಮ ಸಾಹಿತ್ಯದಿಂದ ಕನ್ನಡಿಗರ ಮನಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಜಾತಿಗೆ ನಿಲುಕದ ನಕ್ಷತ್ರ ವಿಶ್ವಮಾನವ ಕುವೆಂಪು ಎಂದು ವರ್ಣಿಸಿದರು. ದೇಶ, ಭಾಷೆ, ಮತ, ಜಾತಿ, ಜನಾಂಗ ವರ್ಣ ಇತ್ಯಾದಿ ಉಪಾಧಿಗಳಿಂದ ಪಾರಾಗಿ ವಿಶ್ವ ಮಾನವನನ್ನಾಗಿ ಪರಿವರ್ತಿಸುವ ಶಕ್ತಿ ವಿದ್ಯೆ, ಸಂಸ್ಕೃತಿ ಮತ್ತು ನಾಗರಿಕತೆಗಿದೆ. ವಿಶ್ವ ಮಾನವರಾಗುವುದು ಎಲ್ಲರ ಕರ್ತವ್ಯವಾಗಬೇಕು. ಲೋಕ ಉಳಿದು ಬಾಳಿ ಬದುಕಬೇಕಾದರೆ ಮುಂದಿನ ಪೀಳಿಗೆಯ ಮಕ್ಕಳೆಲ್ಲ ಅನಿಕೇತನರಾಗಬೇಕು. ಮತ್ತೊಮ್ಮೆ ಈ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕುವೆಂಪು ಅವರು ಹುಟ್ಟಿ ಬರುವಂತಾಗಬೇಕು ಎಂದು ಹರಿಣಿ ವಿಜಯ್ ತಿಳಿಸಿದರು. ವಿಶ್ವಮಾನವ ದಿನಾಚರಣೆಯನ್ನು ಕವಿಜನ್ಮ ಸ್ಥಳದಲ್ಲಿ ಆಚರಿಸಲು ಆಸಕ್ತಿ ತೋರಿ ಆಗಮಿಸಿದ ಮೂರ್ನಾಡು ಕಸಾಪದ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದರು. ಕವಿ ಶೈಲದ ಪ್ರಕೃತಿಯ ಮಡಿಲಲ್ಲಿ ಮೀನಾಕ್ಷಿ ಮರಗೋಡು, ಕೆ.ಜಿ.ರಮ್ಯ ಕವನ ವಾಚಿಸಿದರು, ಸುಗೀತಾ ಮರಗೋಡು, ಹಾಕತ್ತೂರು ಪ್ರೌಢಶಾಲೆಯ ಶಿಕ್ಷಕ ಮುನೀರ್, ಮೂರ್ನಾಡು ಪಿಎಂ ಶ್ರೀ ಶಾಲೆಯ ಶಿಕ್ಷಕ ರಾಜೇಶ್, ಮರಗೋಡು ಪ್ರೇಮ ಗಣೇಶ್, ತಾರಾದೇವಿ, ಸುಗೀತಾ, ಸುಶ್ಮಿತಾ ಹಾಗೂ ಮೀನಾಕ್ಷಿ ಹಾಡುಗಳನ್ನು ಹಾಡಿ ರಾಷ್ಟ್ರಕವಿ ಕುವೆಂಪು ಅವರಿಗೆ ನುಡಿ ನಮನ ಸಲ್ಲಿಸಿದರು. ಭಾಗವಹಿಸಿದ ಸರ್ವವರಿಗೂ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು. ವಿಶೇಷ ಆಹ್ವಾನಿತರಾಗಿ ಮಠದ ಮನೆ ಧನಂಜಯ, ಈರಮಂಡ ವಿಜಯ್, ಪದಾಧಿಕಾರಿಗಳಾದ ರೋಸ್ಲಿ, ಪುದಿಯೊಕ್ಕಡ ರಮ್ಯಾ, ಸದಸ್ಯರಾದ ಮಂಜು, ಭಾರತಿ ಬಿ.ಎಲ್, ಸುಮಯ್ಯ ಮುನೀರ್, ರೋಹಿಣಿ, ರಿತ್ವಿಕ ಪೊನ್ನಮ್ಮ ಉಪಸ್ಥಿತರಿದ್ದರು. ಸಹ ಕಾರ್ಯದರ್ಶಿ ಅಪ್ಪಚಂಡ ಸುಚಿತ ಪ್ರಾರ್ಥಿಸಿ, ಕೋಶಾಧಿಕಾರಿ ಮಡೆಯಂಡ ಸೂರಜ್ ಸ್ವಾಗತಿಸಿದರು. ಕಸಾಪ ಮಹಿಳಾ ಪ್ರತಿನಿಧಿ ಮೀನಾಕ್ಷಿ ಕೇಶವ ನಿರೂಪಿಸಿ, ಸಂಘಟನಾ ಕಾರ್ಯದರ್ಶಿ ಕೊಂಪುಳಿರ ಮಮತ ವಂದಿಸಿದರು. ಪ್ರಾರ್ಥನೆಯ ಬಳಿಕ ಸರ್ವರು ರೈತಗೀತೆ ಹಾಡಿದರು. ನಂತರ ಕಸಾಪ ತಂಡ ನೀನಾಸಂ, ಚರಕ, ಸಾರ ಸಂಸ್ಥೆ, ಬೇಲೂರು, ಹಳೇಬೀಡು, ಕೆಳದಿ ಇಕ್ಕೇರಿಗಳಿಗೆ ಭೇಟಿ ನೀಡಿತು. ಕಸಾಪ ಪದಾಧಿಕಾರಿಗಳು ಜೋಗ ಜಲಪಾತದಲ್ಲಿ “ಜೋಗದ ಸಿರಿ ಬೆಳಕಿನಲ್ಲಿ” ಹಾಡನ್ನು ಹಾಡಿ ಪ್ರವಾಸಿಗರ ಗಮನ ಸೆಳೆದರು.

Share. Facebook Twitter Pinterest LinkedIn Tumblr Email WhatsApp
Previous Article*ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾವಳಿ : ಯುವ ಪ್ರತಿಭೆಯನ್ನು ಲೋಕಕ್ಕೆ ಪರಿಚಯಿಸಲು ಪಂದ್ಯಾವಳಿಗಳು ಸಹಕಾರಿ : ಶಾಸಕ ಎ.ಎಸ್.ಪೊನ್ನಣ್ಣ*
Next Article *ನಾಪೋಕ್ಲು-ಭಾಗಮಂಡಲ ರಸ್ತೆ ದುರಸ್ತಿಗೆ ಆಗ್ರಹ : ಪ್ರತಿಭಟನೆಯ ಎಚ್ಚರಿಕೆ ಎಸ್‍ಡಿಪಿಐ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.