Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*
  • *ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*
  • *ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*
  • *ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*
  • *ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*
  • *ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
  • *ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*
  • *ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದ 123ನೇ ಪುಸ್ತಕ “ನೊಂದ ಜೀವ” ಬಿಡುಗಡೆ : ಹೊಸ ಬರಹಗಾರರಿಗೆ ಪ್ರೋತ್ಸಾಹದ ಅಗತ್ಯವಿದೆ : ಅವರೆಮಾದಂಡ ಶರಣ್ ಪೂಣಚ್ಚ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದ 123ನೇ ಪುಸ್ತಕ “ನೊಂದ ಜೀವ” ಬಿಡುಗಡೆ : ಹೊಸ ಬರಹಗಾರರಿಗೆ ಪ್ರೋತ್ಸಾಹದ ಅಗತ್ಯವಿದೆ : ಅವರೆಮಾದಂಡ ಶರಣ್ ಪೂಣಚ್ಚ*

ಜನವರಿ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.1 NEWS DESK : ಇಂದಿನ ತಂತ್ರಜ್ಞಾನದ ಯುಗದಲ್ಲಿ ಬರಹಗಾರರ ಸಂಖ್ಯೆ ಕ್ಷೀಣಿಸುತ್ತಿದ್ದು, ಹೊಸ ಬರಹಗಾರರಿಗೆ ಪ್ರೋತ್ಸಾಹ ಮತ್ತು ದಾನಿಗಳ ಸಹಕಾರದ ಅಗತ್ಯವಿದೆ ಎಂದು ಸಮಾಜ ಸೇವಕ ಅವರೆಮಾದಂಡ ಶರಣ್ ಪೂಣಚ್ಚ ಅವರು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಹೊಸ ವರ್ಷದ ಪ್ರಯುಕ್ತ ಕೊಡವ ಮಕ್ಕಡ ಕೂಟದ 123ನೇ ಪುಸ್ತಕ ಹಾಗೂ ಲೇಖಕಿ ಕರವಂಡ ಸೀಮಾ ಗಣಪತಿ ಅವರ ಮೂರನೇ ಪುಸ್ತಕ “ನೊಂದ ಜೀವ” ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳು ಪ್ರಭಾವ ಬೀರಿರುವ ಈ ಯುಗದಲ್ಲಿ ಬರಹಗಾರರನ್ನು ಗುರುತಿಸುವುದು ಅಪರೂಪವೆನಿಸಿದೆ. ಪರಿಸ್ಥಿತಿ ಹೀಗಿದ್ದರೂ ಲೇಖಕಿ ಕರವಂಡ ಸೀಮಾ ಗಣಪತಿ ಅವರು, ತಮ್ಮ ಕಾರ್ಯದ ನಡುವೆಯೂ ಪುಸ್ತಕವನ್ನು ಹೊರತಂದಿದ್ದಾರೆ. ಆ ಮೂಲಕ ಲೇಖಕರಿಗೆ ತಾಳ್ಮೆ ಮುಖ್ಯ ಎನ್ನುವುದನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಟು ತಾತಪಂಡ ಜ್ಯೋತಿ ಸೋಮಯ್ಯ ಅವರು ಮಾತನಾಡಿ, ತಮ್ಮ ಕಾರ್ಯಚಟುವಟಿಕೆಯ ನಡುವೆಯೂ ಕಾದಂಬರಿ ಬರೆದು ಓದುಗರ ಮುಂದಿಡುವುದು ಸವಾಲಿನ ಕೆಲಸ. ಓದುಗರ ಸಂಖ್ಯೆ ಕಡಿಮೆ ಇದ್ದರೂ ದಾನಿಗಳು ಲೇಖಕರಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. *ದಾಖಲೀಕರಣ ಪುಸ್ತಕ ಬರಲಿ* ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕೊಡಗಿನಲ್ಲಿ ಸಾಧಕರಿಗೆ ಕೊರತೆ ಇಲ್ಲ, ಇಲ್ಲಿ ಇತಿಹಾಸ ನಿರ್ಮಿಸಿದ ದೊಡ್ಡ ಸಂಖ್ಯೆಯ ಸಾಧಕರಿದ್ದಾರೆ. ಇವರುಗಳ ಇತಿಹಾಸವನ್ನು ಸಂಗ್ರಹಿಸಿ ಪುಸ್ತಕದ ರೂಪದಲ್ಲಿ ದಾಖಲೀಕರಿಸಬೇಕು. ಇದು ಸಂಶೋಧಕರಿಗೆ ಸಹಕಾರಿಯಾಗಲಿದೆ. ಈ ಕಾರ್ಯಕ್ಕೆ ಬರಹಗಾರರು ಮುಂದಾದಲ್ಲಿ ಕೊಡವ ಮಕ್ಕಡ ಕೂಟ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಪ್ರಸ್ತುತ ದಿನಗಳಲ್ಲಿ ಮೊಬೈಲ್‍ಗಳ ಬಳಕೆಯಿಂದ ಮಕ್ಕಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಅಗತ್ಯವಿದೆ. ಈ ಬಗ್ಗೆ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. *ಯೋಧರಿಗೆ ಅಪಮಾನ* ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಸೈನಿಕರ ಪ್ರತಿಮೆಗಳಿಗೆ ಕೆಲವರು ಹೂವಿನ ಹಾರವನ್ನು ಹಾಕಿ, ಕಾರ್ಯಕ್ರಮದ ನಂತರ ಅದನ್ನು ತೆಗೆಯದೆ ಅಪಮಾನ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಬೊಳ್ಳಜಿರ ಬಿ.ಅಯ್ಯಪ್ಪ, ಹೂವಿನ ಹಾರಗಳನ್ನು ಎರಡು ಮೂರು ದಿನಗಳು ಕಳೆದರೂ ತೆಗೆಯದೇ ಇರುವುದರಿಂದ ಸೇನಾನಿಗಳಿಗೆ ಗೌರವ ಸಲ್ಲಿಸುವ ಬದಲು ಅಪಮಾನ ಮಾಡಿದಂತಾಗುತ್ತದೆ. ತೋರ್ಪಡಿಕೆಯ ಗೌರವ ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರಕಾರದ ಯಾವುದೇ ಅನುದಾನವಿಲ್ಲದೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಮಹತ್ವಾಕಾಂಕ್ಷೆಯ 123 ಪುಸ್ತಕವನ್ನು ಸಾಹಿತ್ಯ ಕ್ಷೇತ್ರಕ್ಕೆ ಸಮರ್ಪಿಸಲಾಗಿದ್ದು, ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಪ್ರಥಮ ಪುಸ್ತಕವನ್ನು ಕೊಡವ ಮಕ್ಕಡ ಕೂಟದ ವತಿಯಿಂದ ಹೊರತರಲಾಗಿದೆ ಎಂದರು. ಕೊಡವ ಮಕ್ಕಡ ಕೂಟದ ವಾರ್ಷಿಕೋತ್ಸವದ ನೆನಪಿಗಾಗಿ ಫೆ.18 ರಂದು 125 ಮತ್ತು 126ನೇ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದೇವೆ ಎಂದು ತಿಳಿಸಿದರು. ನೊಂದ ಜೀವ ಪುಸ್ತಕದ ಲೇಖಕಿ ಕರವಂಡ ಸೀಮಾ ಗಣಪತಿ ಮಾತನಾಡಿ, ಓದುಗರ ಸಂಖ್ಯೆ ಹೆಚ್ಚಾದರೆ, ಬರಹಗಾರರ ಸಂಖ್ಯೆ ಹೆಚ್ಚಾಗುತ್ತದೆ. ಲೇಖಕರು ತಮ್ಮ ಕಾರ್ಯಚಟುವಟಿಕೆಯ ನಡುವೆಯೂ ಬರಹಗಳಿಗೆ ಒತ್ತು ನೀಡುತ್ತಾರೆ. ಅದಕ್ಕೆ ಓದುಗರ ಸಹಕಾರ ಅಗತ್ಯ ಎಂದರು. ಇದು ನನ್ನ ಮೂರನೇ ಪುಸ್ತಕವಾಗಿದ್ದು, ಮೂರು ಪುಸ್ತಕಗಳಿಗೆ ಕೊಡವ ಮಕ್ಕಡ ಕೂಟ ಸಹಕಾರ ನೀಡಿದೆ. ಪುಸ್ತಕ ಬಿಡುಗಡೆಗೆ ಸಹಕಾರ ನೀಡಿದ ದಾನಿಗಳು ಹಾಗೂ ಕುಟುಂಬಸ್ಥರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು. ಕೊಡವ ಮಕ್ಕಡ ಕೂಟದ ಪ್ರಧಾನ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ಮಾತನಾಡಿ, “ನೊಂದ ಜೀವ” ಪುಸ್ತಕವು ಹೆಣ್ಣುಮಗಳ ಜೀವನದ ಕಥಾ ಹಂದರವನ್ನು ಒಳಗೊಂಡಿದೆ. ತಾಯಿ ಇಲ್ಲದೆ ತಾನೊಬ್ಬಳೆ ಸಮಾಜ ಹಾಗೂ ಕುಟುಂಬದ ಸವಾಲುಗಳನ್ನು ಎದುರಿಸುವ ಕುರಿತು ಪುಸ್ತಕದಲ್ಲಿ ಮನೋಜ್ಞವಾಗಿ ಚಿತ್ರಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳು ಹೊರಬರುವಂತಾಗಲಿ ಎಂದು ಹಾರೈಸಿದರು. ಸಮಾಜ ಸೇವಕ ಮಂಡೇಪಂಡ ರತನ್ ಕುಟ್ಟಯ್ಯ ಪುಸ್ತಕ ಬಿಡುಗಡೆ ಮಾಡಿ ಶುಭ ಹಾರೈಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026 ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್,…

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 2026

*ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*

ಜೂನ್ 16, 2026

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.