Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿ.ಬಾಡಗ : ಕ್ರೀಡಾ ತರಬೇತಿ ಕೇಂದ್ರದ ಜಾಗ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿ.ಬಾಡಗ : ಕ್ರೀಡಾ ತರಬೇತಿ ಕೇಂದ್ರದ ಜಾಗ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಜನವರಿ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 NEWS DESK : ಜಿಲ್ಲೆಯ ವಿ.ಬಾಡಗ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ತರಬೇತಿ ಕೇಂದ್ರದ ಜಾಗಕ್ಕೆ ಪತ್ರಕರ್ತರೊಂದಿಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಮುಂದಿನ ಕಾರ್ಯಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಕ್ರೀಡಾ ತರಬೇತಿ ಕೇಂದ್ರದ ಕುರಿತು ತಿಳಿದುಕೊಳ್ಳುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿ.ಬಾಡಗಕ್ಕೆ ತೆರಳಿದ ಹಿನ್ನೆಲೆ ಸ್ಥಳಕ್ಕೆ ಶಾಸಕರು ಆಗಮಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ವಿ.ಬಾಡಗ ಗ್ರಾಮದಲ್ಲಿ 11.5 ಎಕರೆಯಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಅಥ್ಲೆಟಿಕ್‍ಟ್ರ್ಯಾಕ್, ಹಾಕಿ ಟರ್ಫ್, ವಾಲಿಬಾಲ್, ಟೆನ್ನಿಸ್, ಒಲಂಪಿಕ್ ಅಳತೆಯ ಸ್ವಿಮ್ಮಿಂಗ್ ಪೂಲ್, ಶೂಟಿಂಗ್‍ರೇಂಜ್ ಹೀಗೆ ನಾನಾ ಬಗೆಯ ಕ್ರೀಡೆಗಳಿಗೆ ಪೂರಕ ವಾತಾವರಣ ಸೃಷ್ಟಿಸಲಾಗುವುದು. ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ಭೂಮಿಪೂಜೆ ನೆರವೇರಿಸುವಚಿಂತನೆ ಇದೆ. 11.5 ಎಕರೆಜಾಗ ಜಿಲ್ಲಾಡಳಿತದಿಂದ ಕ್ರೀಡಾ ಇಲಾಖೆಗೆ ಹಸ್ತಾಂತರಿಸುವ ಕೆಲಸವಾಗಿದೆ ಎಂದರು. ರಾಜ್ಯಸಭಾ ಸದಸ್ಯ ಅಜಯ್ ಮಕಾನ್ ಅವರು ಈ ಯೋಜನೆ ಕಾರ್ಯತಗಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಂದರ್ಭ ಅಜಯ್ ಮಕಾನ್ ಅವರ ಪ್ರಮಾಣ ಪತ್ರವನ್ನು ತಯಾರಿಸುವ ಜವಾಬ್ದಾರಿ ನನಗೆ ನೀಡಿದ್ದರು. ಅಂದಿನಿಂದ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದೇನೆ. ರಾಜ್ಯಸಭಾ ಕಲಾಪದ ವೇಳೆ ಕೊಡಗಿನ ಕ್ರೀಡಾ ಚಟುವಟಿಕೆ, ಕೊಡವ ಕೌಟುಂಬಿಕ ಹಾಕಿ ವಿಶ್ವದಾಖಲೆ ಬಗ್ಗೆಯ ಶ್ಲಾಘಿಸಿ ಮಾತನಾಡಿದ್ದರು. ಅದಲ್ಲದೆ ಅವರು ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭ ಕ್ರೀಡಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಕಲಾಪದಲ್ಲಿ ಅವರು ಪ್ರಸ್ತಾಪಿಸಿದ ನಂತರ ಅವರ ಆಸಕ್ತಿಯನ್ನು ತಿಳಿದು ಸಂಪರ್ಕಿಸಿದಾಗ ಕ್ರೀಡಾ ಸಂಕೀರ್ಣ, ತರಬೇತಿಕೇಂದ್ರ ನಿರ್ಮಾಣಕ್ಕೆ ಅವರ 6 ವರ್ಷದ ಎಲ್ಲಾ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಮೊದಲು ಕಾನೂರಿನಲ್ಲಿ ಕ್ರೀಡಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಇದು ಸಾಧ್ಯವಾಗಿಲಿಲ್ಲ. ಅನಂತರ ವಿ.ಬಾಡಗ ಗ್ರಾಮದಲ್ಲಿ ಜಾಗ ಗುರುತಿಸಲಾಯಿತು ಎಂದು ವಿವರಿಸಿದರು. ರಾಜ್ಯಸಭಾ ಸದಸ್ಯರಿಂದ ಅನುದಾನ ದೊರೆಯುತ್ತದೆ. ವೈಯಕ್ತಿಕವಾಗಿ ತಾನು ಹಣ ನೀಡಿದ್ದೇನೆ. ಇಲ್ಲಿ ವಸತಿ ನಿಲಯವನ್ನು ನಿರ್ಮಿಸಲಾಗುವುದು. ಕಾಮಗಾರಿ ಪೂರ್ಣಗೊಳಿಸಲು 3 ವರ್ಷ ಸಮಯ ಬೇಕಾಗಿದೆ. ಹಂತಹಂತವಾಗಿ ನಿರ್ಮಾಣಕಾರ್ಯ ನಡೆಯಲಿದೆ. ಮುಖ್ಯಮಂತ್ರಿಯೊಂದಿಗೆ ಈ ವಿಚಾರವಾಗಿ ಚರ್ಚಿಸಲಾಗಿದೆ. ಅನುದಾನ ನೀಡಲು ಬೇಡಿಕೆ ಸಲ್ಲಿಸಿದ್ದೇನೆ. ಕೇಂದ್ರದ ಸಹಾಯವನ್ನು ಪಡೆಯಲಾಗುವುದು. ಇದಕ್ಕೆ ಅಜಯ್ ಮಕಾನ್ ನೆರವು ನೀಡಲಿದ್ದಾರೆ. ಜಿಲ್ಲೆ ಹಿಂದೆಂದೂ ಕಾಣದ ಯೋಜನೆ ಕಾರ್ಯಗತವಾಗುತ್ತದೆ. ಅವಕಾಶ ಹಾಗೂ ತರಬೇತಿ ಕೊರತೆಯಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಳೀಯ ಪ್ರತಿಭೆಗಳು ಪ್ರತಿನಿಧಿಸಲು ಸಾಧ್ಯವಾಗುತ್ತಿಲ್ಲ. ಕ್ರೀಡಾತರಬೇತಿ ಕೇಂದ್ರಕ್ಕೆ ಅಂದಾಜು ರೂ.40 ಕೋಟಿ ಬೇಕಾಗಿದೆ. ರಾಜ್ಯಸಭಾ ಸದಸ್ಯರಿಂದ 25 ಕೋಟಿ ದೊರೆಯುವ ನಿರೀಕ್ಷೆ ಇದೆ. ರಾಜ್ಯ ಸರಕಾರದಿಂದ 15 ಕೋಟಿಪಡೆಯುವ ಕೆಲಸವಾಗುತ್ತಿದೆ. ಆಯವ್ಯಯದಲ್ಲಿಯೂ ಇದು ಘೋಷಣೆಯಾಗುವ ವಿಶ್ವಾಸವಿದೆ ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಪತ್ರಕರ್ತರತಂಡ ವಿ. ಬಾಡಗಕ್ಕೆ ತೆರಳಿತು. ಈ ವೇಳೆ ಬಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಕೊಲ್ಲೀರ ಬೋಪಣ್ಣ, ತಾ.ಪಂ. ಮಾಜಿ ಅಧ್ಯಕ್ಷ ಉಮೇಶ್ ಕೇಚಮಯ್ಯ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ…

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.