Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ : ಜನರ ಆಶೀರ್ವಾದಿಂದ ಸಾಧ್ಯವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ : ಜನರ ಆಶೀರ್ವಾದಿಂದ ಸಾಧ್ಯವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*

January 5, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮೈಸೂರು ಜ.5 NEWS DESK : ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು. :: ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ :: ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯನ್ನು ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು. ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು. :: ಸಂಪುಟ ಪುನರ್ರಚನೆ- ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿ ನಿರ್ಧಾರ :: ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು.ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲಾಗುವುದು. ಅವರು ಸಮಯ ನೀಡಿದರೆ ಚರ್ಚಿಸಲಿರುವುದಾಗಿ ತಿಳಿಸಿದರು. :: ಬಳ್ಳಾರಿ ಘಟನೆ-ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ ::  ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿ ಗೆ ವಹಿಸಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದರು. :: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ ::  ಜಿಎಸ್ ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ರಾಜ್ಯಕ್ಕೆ ಜಿಎಸ್ ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮ ನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸನ್ಣರೈತರು,ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳನ್ನು ಕಡಿಮೆಯಾಗಲಿದ್ದು, ಜನರ ಮೂಲಭೂತ ಹಕ್ಕಿಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯಸರ್ಕಾರದ ಮೇಲೆ ಸುಮಾರು 3000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು. :: ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಸೂಚನೆ ::  ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗಧಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ ಎಂದರು. :: ಬಲೂನ್ ಸ್ಪೋಟ ಪ್ರಕರಣ- ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಪರಿಹಾರ ::  ಮೈಸೂರಿನ ಅರಮನೆಯ ಮುಂಭಾಗದಲ್ಲಿ ಬಲೂನ್ ಸ್ಪೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗಿನ ಸಾಧಕರಿಗೆ ಗಡಿನಾಡ ಪ್ರಶಸ್ತಿ ಪ್ರಕಟ*
Next Article *ಮಡಿಕೇರಿಯಲ್ಲಿ ಅಕ್ಕಪಡೆ ಉದ್ಘಾಟನೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.