Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜನ ಸಂಪರ್ಕ ಸಭೆ : ‘ಸೈಬರ್ ಕ್ರೈಂ’, ‘ಡಿಜಿಟಲ್ ಅರೆಸ್ಟ್’, ಆರ್ಥಿಕ ವಂಚನೆ ಪ್ರಕರಣಗಳ ಬಗ್ಗೆ ಸದಾ ಜಾಗೃತರಾಗಿರಿ : ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಜನ ಸಂಪರ್ಕ ಸಭೆ : ‘ಸೈಬರ್ ಕ್ರೈಂ’, ‘ಡಿಜಿಟಲ್ ಅರೆಸ್ಟ್’, ಆರ್ಥಿಕ ವಂಚನೆ ಪ್ರಕರಣಗಳ ಬಗ್ಗೆ ಸದಾ ಜಾಗೃತರಾಗಿರಿ : ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕರೆ*

ಜನವರಿ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 NEWS DESK : ನಮ್ಮೊಳಗಿನ ‘ದೌರ್ಬಲ್ಯ’ವನ್ನು ಬಳಸಿಕೊಂಡು, ಆಧುನಿಕ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ‘ಸೈಬರ್ ಕ್ರೈಂ’, ‘ಡಿಜಿಟಲ್ ಅರೆಸ್ಟ್’ ಮೊದಲಾದ ಆರ್ಥಿಕ ವಂಚನೆ ಪ್ರಕರಣಗಳ ಬಗ್ಗೆ ಸದಾ ಜಾಗೃತರಾಗಿರಿ ಮತ್ತು ಇತರರಲ್ಲಿ ಅರಿವು ಮೂಡಿಸಿ ಎಂದು ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕರೆ ನೀಡಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದಲ್ಲಿ ನಡೆದ ಮಡಿಕೇರಿ ಉಪ ವಿಭಾಗದ ‘ಜನ ಸಂಪರ್ಕ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಾಮಾಜಿಕ ಜಾಲತಾಣಗಳ ಮೂಲಕ ಹಣಕಾಸಿನ ವಂಚನೆ ಪ್ರಕರಣಗಳು, ಪ್ರಮುಖವಾಗಿ ಹಿರಿಯರು, ನಿವೃತ್ತ ಉದ್ಯೋಗಿಗಳನ್ನೆ ಗುರಿಯಾಗಿಸಿಕೊಂಡು ನಡೆಯುತ್ತಿದೆ. ತಮ್ಮನ್ನು ಸಂಪರ್ಕಿಸುವ ವಂಚಕರು ಹಣವನ್ನು ದುಪ್ಪಟ್ಟು ಮಾಡಿಕೊಡುವ ಆಮಿಷವನ್ನೊಡ್ಡಿ, ಆರಂಭಿಕ ಹಂತದಲ್ಲಿ ಸಣ್ಣ ಮೊತ್ತವನ್ನು ನೀವು ಅದರಲ್ಲಿ ತೊಡಗಿಸಿದಲ್ಲಿ ಹೆಚ್ಚಿನ ಮೊತ್ತವನ್ನು ನೀಡುತ್ತಾರೆ. ನಂತರದ ದಿನಗಳಲ್ಲಿ ನಿಮ್ಮಲ್ಲಿ ವಿಶ್ವಾಸವನ್ನು ಮೂಡಿಸುವ ಮೂಲಕ ದೊಡ್ಡ ಮೊತ್ತದ ಹಣವನ್ನು ಹೂಡುವಂತೆ ಪ್ರೇರೇಪಿಸಿ ವಂಚಿಸುತ್ತಾರೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. ನಿಮ್ಮಲ್ಲಿನ ದೌರ್ಬಲ್ಯಗಳನ್ನೆ ಬಳಸಿಕೊಂಡು ಸಾಮಾಜಿಕ ಜಾಲತಾಣದ ಮೂಲಕ ವಂಚಿಸುವ ‘ಡಿಜಿಟಲ್ ಅರೆಸ್ಟ್’ನಂತಹ ಪ್ರಕರಣಗಳಲ್ಲಿ ಸಿಲುಕುವ ಬಹುತೇಕ ಮಂದಿ ಶಿಕ್ಷಣವಂತರೇ ಆಗಿದ್ದಾರೆ. ಯಾವುದೇ ಕಾರಣಕ್ಕೂ ನಿಮ್ಮ ವಾಟ್ಸ್ ಅಪ್, ಫೇಸ್ ಬುಕ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳ ಮೂಲಕ ಬರುವ ಅನಾಮಧೇಯ ‘ಲಿಂಕ್’ಗಳನ್ನು ಬಳಸುವ ಪ್ರಯತ್ನ ಮಾಡಬೇಡಿ ಎಂದು ಮನವಿ ಮಾಡಿದ ಅವರು, ಇಂತಹ ಯಾವುದೇ ಸಂಕಷ್ಟಕ್ಕೆ ಸಿಲುಕಿದಲ್ಲಿ ತಕ್ಷಣವೆ ಪೊಲೀಸ್ ಇಲಾಖೆಯ ‘1930′ ನೆರವಿಗೆ ದೂರನ್ನು ದಾಖಲಿಸುವಂತೆ ಮನವಿ ಮಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗೆಹರಿಕೆಗೆ ಸಹಾಯವಾಣಿ ‘112’ನ್ನು ಬಳಸುವಂತೆ ಕರೆ ನೀಡಿದ ಅವರು, ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ಮೊದಲಾದ ಯಾವುದೇ ಕಾನೂನು ಬಾಹಿರ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಹಾಯವಾಣಿ ‘1098’ಗೆ ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸಿಲುಕಿ ಸಂಕಷ್ಟಕ್ಕೆ ಒಳಗಾಗುವ ಮಹಿಳೆಯರ ನೆರವಿಗಾಗಿಯೇ ಇರುವ ಸಹಾಯವಾಣಿ ‘181′ ಗೆ ಕರೆ ಮಾಡಿ ನೆರವನ್ನು ಪಡೆಯಬೇಕೆಂದು ಎಸ್‍ಪಿ ಬಿಂದುಮಣಿ ತಿಳಿಸಿದರು. ಕೊಡಗು ಜಿಲ್ಲೆ ಜನ ವಿರಳವಾದ ಪ್ರದೇಶವಾಗಿದೆ. ದೂರ ದೂರದಲ್ಲಿ ಮನೆಗಳು ಇರುವ ಹಿನ್ನೆಲೆಯಲ್ಲಿ ತಮ್ಮ ಮನೆಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಿ. ಮನೆಯಿಂದ ಸಾಕಷ್ಟು ದಿನಗಳ ಕಾಲ ಹೊರಗೆ ಇರಬೇಕಾದ ಪ್ರಸಂಗಗಳು ಉದ್ಭವಿಸಿದಾಗ, ತಮ್ಮ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿ. ಪ್ರಮುಖವಾಗಿ ತಮ್ಮ ಮನೆಗಳಲ್ಲಿ ಇರಬಹುದಾದ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್‍ನಲ್ಲಿ ಸುರಕ್ಷಿತವಾಗಿಡುವಂತೆ ಸಲಹೆ ನೀಡಿದರು. ಪ್ರವಾಸಿ ಕೇಂದ್ರವಾಗಿರುವ ಕೊಡಗು ಜಿಲ್ಲೆಯಲ್ಲಿ ‘ಹೋಂ ಸ್ಟೇ’ ಉದ್ಯಮ ದೊಡ್ಡ ಪ್ರಮಾಣದಲ್ಲಿದೆ. ಅನುಮತಿ ರಹಿತವಾಗಿ ಹೋಂಸ್ಟೇಗಳನ್ನು ನಡೆಸುತ್ತಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಬದ್ಧವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಂದುಮಣಿ ಎಚ್ಚರಿಕೆ ನೀಡಿದರು. *ಕಾರ್ಮಿಕರ ಮಾಹಿತಿ ಒದಗಿಸಿ* ಜಿಲ್ಲೆಯ ತೋಟಗಳಲ್ಲಿ ಕಾರ್ಯ ನಿರ್ವಹಿಸಲು ಹೊರ ಜಿಲ್ಲೆ, ರಾಜ್ಯಗಳಿಂದ ಸಾಕಷ್ಟು ಕಾರ್ಮಿಕರು ಆಗಮಿಸುತ್ತಾರೆ. ಯಾವುದೇ ತೋಟಗಳಲ್ಲಿ ಇಂತಹ ಕಾರ್ಮಿಕರನ್ನು ಇರಿಸಿಕೊಳ್ಳುವ ಸಂದರ್ಭ ಅವರ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಬೇಕು. ಅವರು ಎಲ್ಲಿಂದ ಬಂದವರೆನ್ನುವುದನ್ನು ಖಚಿತಪಡಿಸಿಕೊಳ್ಳುವುದಲ್ಲದೆ, ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ಒದಗಿಸುವುದು ತೋಟ ಮಾಲೀಕರ ಜವಾಬ್ದಾರಿಯೂ ಆಗಿದೆ ಎಂದರು. ಮಡಿಕೇರಿ ಸೇರಿದಂತೆ ಜಿಲ್ಲೆಯ ಪಟ್ಟಣ ಪ್ರದೇಶಗಳಲ್ಲಿ ವಾಹನ ನಿಲುಗಡೆ ದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಮಹತ್ತರವಾದ ಬದಲಾವಣೆಗೆ ಚಿಂತನೆಯನ್ನು ನಡೆಸಲಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅತ್ಯವಶ್ಯವೆಂದು ಎಸ್‍ಪಿ ಬಿಂದುಮಣಿ ಮನವಿ ಮಾಡಿದರು. ಗ್ರಾಮೀಣ ಭಾಗಗಳ ಅಂಗಡಿ ಮುಂಗಟ್ಟುಗಳಲ್ಲಿ ಸಿಗರೇಟ್ ಸೇರಿದಂತೆ ಮಾದಕ ಪದಾರ್ಥಗಳ ಮಾರಾಟ ನಡೆಯುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಾದಿ ತಪ್ಪುತ್ತಿದ್ದಾರೆ, ಪ್ರತಿ ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ, ಹೊರ ರಾಜ್ಯದ ಕಾರ್ಮಿಕರಿಂದ ಗೋಹತ್ಯೆ, ದರೋಡೆ, ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಇದನ್ನು ನಿಯಂತ್ರಿಸಬೇಕು, ಪೊಲೀಸ್ ಇಲಾಖೆಯ ಸೈಬರ್ ವಿಭಾಗಕ್ಕೆ ದೂರು ಸಲ್ಲಿಸಿದಲ್ಲಿ ಸೂಕ್ತ ಸ್ಪಂದನ ದೊರಕುತ್ತಿಲ್ಲ. ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾದೇಶಿಗರಿದ್ದು, ಪೊಲೀಸರು ಅವರ ದಾಖಲಾತಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿ ಬಂತು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು. ವೃತ್ತ ನಿರೀಕ್ಷಕ ಪಿ.ಕೆ.ರಾಜು ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.