Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ : ಕೃತಕ ಕಾಲು ಜೋಡಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ : ಕೃತಕ ಕಾಲು ಜೋಡಣೆ*

ಜನವರಿ 12, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ವಿರಾಜಪೇಟೆ ಜ.12 NEWS DESK : ಸಮಾಜದಲ್ಲಿ ತಂಬಾಕು ಸೇವನೆ ಪ್ರತಿಷ್ಠೆ ಹಾಗೂ ಗೌರವದ ಪ್ರತಿಕವೆಂಬಂತೆ ಬಿಂಬಿತವಾಗುತ್ತಿರುವುದರಿಂದ ಯುವ ಜನತೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತರಾಗುತ್ತಿರುವುದು ಕಳವಳಕಾರಿ ಎಂದು ಆಶೀರ್ವಾದ ಆಸ್ಪತ್ರೆಯ ವೈದ್ಯರಾದ ಡಾ.ಚೇಂದಿರ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ವತಿಯಿಂದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಸಭಾಭವನದಲ್ಲಿ ನಡೆದ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ ಹಾಗೂ ಕೃತಕ ಕಾಲು ಜೋಡಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಜೀವನವು ವ್ಯಥೆಯಿಂದ ಕೂಡಿದ ಕಥೆಯಾಗಬಾರದು. ಪ್ರಸ್ತುತ ಸಮಾಜದಲ್ಲಿ ಒತ್ತಡದ ಜೀವನ, ಹೊಸತನ ಮುಂತಾದ ಕಾರಣದಿಂದಾಗಿ ವಿವಿಧ ರೀತಿಯ ತಂಬಾಕು ಉತ್ಪನ್ನಗಳ ಸೇವನೆ ಆರಂಭಿಸುತ್ತಿದ್ದಾರೆ. 18 ರಿಂದ 25 ವರ್ಷದೊಳಗಿನ ಯುವ ಜನತೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ತಂಬಾಕು ಸೇವನೆಯಿಂದ ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುವುದರೊಂದಿಗೆ ಜೀವನವನ್ನು ಕೂಡ ಹಾಳು ಮಾಡಿಕೊಳ್ಳುವುದರತ್ತ ಸಾಗುತ್ತಿದ್ದಾರೆ. ಧೂಮಪಾನ ಮಾಡುವುದರಿಂದ ಕೇವಲ ಧೂಮಪಾನಿಗೆ ಮಾತ್ರ ಹಾನಿಯಲ್ಲ ಧೂಮಪಾನದಿಂದ ಹೊರಗೆ ಸೂಸುವ ವಿಷಕಾರಿ ಅಂಶಗಳನ್ನು ಸೇವನೆ ಮಾಡುವುದರಿಂದ ಇತರರ ಆರೋಗ್ಯದಲ್ಲೂ ತೊಂದರೆಯಾಗುತ್ತದೆ. ಪ್ರಮುಖವಾಗಿ ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ, ಅಂಗಾಂಗ ಹಾನಿಯಂತಹ ಸಮಸ್ಯೆಗಳಿಗೆ ತುತ್ತಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದರೊಂದಿಗೆ ಕುಟುಂಬದ ನೆಮ್ಮದಿ ಹಾಳು ಮಾಡುತ್ತಾರೆ. ಆದ್ದರಿಂದ ಯುವ ಜನತೆ ಉತ್ತಮ ಜೀವನ ಶೈಲಿಯನ್ನು ಅನುಸರಿಸಿಕೊಂಡು ತಂಬಾಕು ಮುಕ್ತ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದರು. ಸಂತ ಅನ್ನಮ್ಮ ಚರ್ಚ್‍ನ ಬ್ರದರ್ ಜಯಂತ್ ಮಾತನಾಡಿ, ತಂಬಾಕು ಸೇವನೆ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾನಿ ಮಾಡುತ್ತದೆ. ಆದಷ್ಟು ವ್ಯಸನಕ್ಕೆ ಒಳಗಾದವರನ್ನು ವ್ಯಸನ ಮುಕ್ತಾರನ್ನಾಗಿ ಮಾಡಲು ಪ್ರಯತ್ನ ಮಾಡಬೇಕೆಂದರು. ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್ ಮಾತನಾಡಿ, ದುಶ್ಚಟಗಳು ಎಳೆಯ ವಿದ್ಯಾರ್ಥಿಗಳಲ್ಲಿ ಎಂದಿಗೂ ಬೆಳೆಯಬಾರದು. ಪ್ರತಿದಿನ ಸಮಾಜದಲ್ಲಿ ವಿವಿಧ ರೀತಿಯ ತಂಬಾಕು ಉತ್ಪನ್ನಗಳನ್ನು ಹಲವರು ಸೇವಿಸುವುದನ್ನು ನಾವು ನೋಡುತ್ತಿದ್ದೇವೆ. ಅದರ ಸೇವನೆಯಿಂದ ಉಂಟಾಗುವ ಪರಿಣಾಮವನ್ನು ಅರಿತು ಆದಷ್ಟು ತಂಬಾಕು ಸೇವನೆಯಿಂದ ದೂರವಿರಬೇಕು. ತಂಬಾಕು ಸೇವನೆ ಕ್ಷಣದ ಆನಂದವನ್ನು ನೀಡಿದರು ಅದು ಬೀರುವ ದುಷ್ಪರಿಣಾಮ ತುಂಬಾ ಕಠಿಣವಾಗಿರುತ್ತದೆ. ಕಾರ್ಬನ್ ಮೋನಾಕ್ಸೈಡ್, ಕಾರ್ಬನ್ ಡೈಆಕ್ಸೈಡ್‍ನಂತಹ ಹಾನಿಕಾರಕ ಅನಿಲಗಳು ನಮ್ಮ ದೇಹವನ್ನು ಸೇರಿ ಆರೋಗ್ಯವನ್ನು ಕೆಡಿಸುತ್ತದೆ. ಇದರಿಂದ ಹೊರ ಬರುವ ರಾಸಾಯನಿಕಗಳು ಮಾನವನ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಅಂಶವನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷ ಪಿ.ಜಿ.ಸುಮೇಶ್, ನಾವೆಲ್ಲಾ ಬಾಲ್ಯದಲ್ಲಿ ಅಡುಗೆ ಮನೆಯಲ್ಲಿದ್ದ ತಿಂಡಿ ತಿನಿಸುಗಳನ್ನು ಕಳುವು ಮಾಡುತ್ತಿದ್ದೆವು. ವಿದ್ಯಾರ್ಥಿಗಳು, ಯುವಜನರು ಆದಷ್ಟು ಹಿರಿಯರಲ್ಲಿರುವ ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ದುಶ್ಚಟದಿಂದ ದೂರವಿದ್ದು ವ್ಯಸನ ಮುಕ್ತವಾದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ತಮ್ಮದೆಯಾದ ಕೊಡುಗೆ ನೀಡಬೇಕೆಂದರು. ವಿರಾಜಪೇಟೆ ನಗರ ಠಾಣೆಯ ಠಾಣಾಧಿಕಾರಿ ಪ್ರಮೋದ್, ಸಮಾಜ ಸೇವಕ ಚೋಕಂಡ ಸಂಜು, ರಾಷ್ಟೀಯ ಮಹಿಳಾ ಆಯೋಗದ ಸಲಹೆಗಾರ, ಸಂಪನ್ಮೂಲ ವ್ಯಕ್ತಿ ಪಿ.ಎಸ್. ಶರತ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಇವಾಲ್ವ್ ಬ್ಯಾಕ್ ರೆಸಾರ್ಟ್‍ನ ವಸಂತಕುಮಾರ್, ಸಂತ ಅನ್ನಮ್ಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಟೀನಾ ಫರ್ನಾಂಡಿಸ್, ಜುಮ್ಮಾ ಮಸೀದಿ ಅಧ್ಯಕ್ಷ ಕೆ.ಪಿರಶೀದ್, ಸಹಾರ ಫ್ರೆಂಡ್ಸ್ ತಂಡದ ರಾವುಫ್, ವಿರಾಜಪೇಟೆ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಲತಾ, ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಸರ್ವ ಸದಸ್ಯರು, ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್‍ನ ಸದಸ್ಯರು, ಸಂತ ಅನ್ನಮ ಪ್ರೌಢಶಾಲೆಯ ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು. :: ಕೃತಕ ಕಾಲು ಜೋಡಣೆ :: ತನ್ನ ಎರಡು ಕಾಲುಗಳನ್ನು ಕಳೆದುಕೊಂಡು ಮರದ ಕಾಲುಗಳ ಮೂಲಕ ದೈನಂದಿನ ಚಟುವಟಿಕೆಗಳನ್ನು ನಡೆಸಲು ಕಷ್ಟಪಡುತ್ತಿದ್ದ ಧನೇಶ್ ಅವರಿಗೆ ದಾನಿಗಳಾದ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್ ನಂಜಪ್ಪ, ಪೊಯ್ಯೇಟಿರ ಚಂಗಪ್ಪ, ಮಾಳೇಟಿರ ದೇವಯ್ಯ, ಮುಕ್ಕಾಟಿರ ಬೋಪಣ್ಣ, ಸಮಾಜ ಸೇವಕ ಚೋಕಂಡ ಸಂಜು, ಹಿಂದೂ ಮಲಯಾಳಿ ಅಸೋಸಿಯೇಷನ್‍ನ ಜಿಲ್ಲಾ ಕಾರ್ಯದರ್ಶಿ, ಆರೆಂಜ್ ಕೌಂಟಿ ಸಂಸ್ಥೆ, ಕೊಡಗು ಮಲಯಾಳಿ ನಿಧಿ ಬ್ಯಾಂಕ್, ವಿರಾಜಪೇಟೆಯ ದಾನಿಗಳು ಮತ್ತು ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಸದಸ್ಯರ ಸಹಕಾರದಿಂದ ಸುಮಾರು 2.25 ಲಕ್ಷದ ಕಾರ್ಬನ್ ಫೈಬರ್ ಪಾದ, ಸಿಲಿಕಾನ್ ಲೀನಿಯರ್ ಮತ್ತು ಸಾಕೆಟ್‍ನೊಂದಿಗೆ ಹೈಟೆಕ್ ಪ್ರಾಸ್ಟೆಸಿಸ್‍ನ ಕೃತಕ ಕಾಲನ್ನು ಡಾ. ತ್ಯಾಗರಾಜ್ ಅಳವಡಿಸಿದರು. ರಾಷ್ಟೀಯ ಮಹಿಳಾ ಆಯೋಗದ ಸಲಹೆಗಾರ ಪಿ.ಎಸ್.ಶರತ್, ಧನೇಶ್ ಅವರಿಗೆ ಲ್ಯಾಪ್‍ಟಾಪ್ ಕೊಡುಗೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.