Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪೊನ್ನಂಪೇಟೆ ತಾಲ್ಲೂಕಿನ ಗ್ರಾಮಗಳಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : 5 ದಿನಗಳ ಗಡುವು ನೀಡಿದ ಗ್ರಾಮಸ್ಥರು*
ಇತ್ತೀಚಿನ ಸುದ್ದಿಗಳು

*ಪೊನ್ನಂಪೇಟೆ ತಾಲ್ಲೂಕಿನ ಗ್ರಾಮಗಳಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : 5 ದಿನಗಳ ಗಡುವು ನೀಡಿದ ಗ್ರಾಮಸ್ಥರು*

January 14, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.14 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಲ್ಲಿ ಕಾಡಾನೆ ಸೇರಿದಂತೆ ವನ್ಯಜೀವಿಗÀಳ ಉಪಟಳ ಮಿತಿ ಮೀರಿದೆ. ಕೃಷಿ ಫಸಲನ್ನು ಸಂರಕ್ಷಿಸಿಕೊಳ್ಳಲು ಮತ್ತು ಜೀವ ಉಳಿಸಿಕೊಳ್ಳಲು ಬೆಳೆಗಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಈ ಹಿಂದೆ ನಿರ್ಮಿಸುತ್ತಿದ್ದ ‘ಕಂದಕ’ಗಳು ನಂತರ ಬಂದ ‘ಸೌರಬೇಲಿ’ ಯೋಜನೆಗಳೆಲ್ಲವು ಇಂದು ವಿಫಲವಾಗಿದೆ. ಪ್ರಸ್ತುತ ಜಾರಿಗೆ ತಂದಿರುವ ‘ರೈಲ್ವೆ ಹಳಿಗಳ ಬೇಲಿ’ ಒಂದಷ್ಟು ಪ್ರಯೋಜನಕಾರಿಯಾಗಿದ್ದರು, ಇದು ಬೆಟ್ಟಗುಡ್ಡದ ಪ್ರದೇಶಗಳಲ್ಲಿ ಪ್ರಯೋಜನಕ್ಕೆ ಬಾರದಾಗಿದೆ. 2015 ರಿಂದ ಈಚೆಗೆ ಬರಪೊಳೆÉ ಮತ್ತು ಬ್ರಹ್ಮಗಿರಿ ಅರಣ್ಯ ಪ್ರದೇಶದ ಆನೆಗಳು ಬೇಗೂರು, ಚೀನಿವಾಡ, ಕೊಂಗಣ, ಬಿ.ಶೆಟ್ಟಿಗೇರಿ, ಕುಟ್ಟಂದಿ, ವಿ.ಬಾಡಗ, ಈಚೂರು, ಕುಂದ, ಹಳ್ಳ್ಳಿಗಟ್ಟು, ಹುದೂರು ವ್ಯಾಪ್ತಿಯಲ್ಲಿ ಅತಿಯಾಗಿ ಉಪಟಳ ನೀಡುತ್ತಿವೆ. ಕಾಡಾನೆಗಳ ಹಿಂಡು ಭತ್ತದ ಕೃಷಿಯ ಮೇಲೆ ದಾಳಿ ನಡೆಸುತ್ತಾ ಬಂದಿರುವುದಲ್ಲದೆ, ಕಾಫಿ, ಕರಿಮೆಣಸು, ಅಡಿಕೆ, ಬಾಳೆ ಕೃಷಿಯನ್ನೂ ನಾಶ ಮಾಡಿದೆ. ನಾಗರಹೊಳೆ ಅರಣ್ಯ ಪ್ರದೇಶದಲ್ಲೇ ಅತೀ ಹೆಚ್ಚು 146 ಹುಲಿಗಳಿದ್ದು, ಈ ಅರಣ್ಯದಂಚಿನ ಗ್ರಾಮಗಳಲ್ಲಿ ಹುಲಿ ಹಾವಳಿ ಮಿತಿಮೀರಿದೆ. ಒಂದು ದಿನದ ಹಿಂದೆಯಷ್ಟೇ ಬೆಸಗೂರು ಗ್ರಾಮ ವ್ಯಾಪ್ತಿಯಲ್ಲಿ ಎರಡು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಕಾಡಾನೆ ಮತ್ತು ಹುಲಿ ದಾಳಿಯ ನಿಯಂತ್ರಣದ ಬಗ್ಗೆ ಅರಣ್ಯ ಇಲಾಖೆ ಹಾಗೂ ಸರಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಭರವಸೆಯನ್ನಷ್ಟೇ ನೀಡುತ್ತಿವೆ ಹೊರತು ಶಾಶ್ವತ ಯೋಜನೆ ಇಲ್ಲಿಯವರೆಗೆ ಸಾಕಾರಗೊಂಡಿಲ್ಲ. *ಅರಣ್ಯ ಅಧಿಕಾರಿಗಳೇ ಹೊಣೆಗಾರರು* ವನ್ಯಜೀವಿಗಳ ಉಪಟಳದಿಂದ ಬೇಸತ್ತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥರು ಹಾಗೂ ರಾಷ್ಟ್ರೀಯ ಕಾಫಿ ಪಾನೀಯ ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ ಸರ್ವೋಚ್ಚ ನ್ಯಾಯಾಲಯವು ಬೀದಿನಾಯಿಗಳ ಕಾಟಕ್ಕೆ ಆಡಳಿತ ವ್ಯವಸ್ಥೆಯನ್ನು ಹೊಣೆಗಾರರನ್ನಾಗಿಸಿದೆ. ಅದರಂತೆ ಅರಣ್ಯ ಪ್ರದೇಶದಲ್ಲಿರಬೇಕಾದ ಕಾಡಾನೆ, ಹುಲಿ ಸೇರಿದಂತೆ ವನ್ಯಜೀವಿಗಳು ಗ್ರಾಮೀಣ ಭಾಗಗಳಲ್ಲಿ ನಡೆಸುವ ದಾಂಧಲೆಗೆ ಸಂಬಂಧಿಸಿದಂತೆ ‘ಅರಣ್ಯ ಅಧಿಕಾರಿ’ಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು. ಇದೇ ಜ.19ರ ಒಳಗಾಗಿ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಲ್ಲಿ ಹಾವಳಿ ನಡೆಸುತ್ತಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕು. ಅವುಗಳು ಮರಳಿ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು, ಆಯಕಟ್ಟಿನ ಪ್ರದೇಶಗಳಲ್ಲಿ ಕ್ಯಾಂಪ್ ಹಾಕಿ ಕಾಡಾನೆಗಳು ನಾಡನ್ನು ಪ್ರವೇಶಿಸದಂತೆ ತಡೆಯಬೇಕು. ಇದರೊಂದಿಗೆ ಅರಣ್ಯ ಇಲಾಖೆ ಈ ಹಿಂದೆ ನೀಡಿದ ಭರವಸೆಯಂತೆ ಕಾಡಾನೆಗಳಿಗೆ ಕಾಲರ್ ಐಡಿಗಳನ್ನು ಅಳವಡಿಸಬೇಕು. ಇಲ್ಲವಾದಲ್ಲಿ ಪೊನ್ನಂಪೇಟೆ ಅರಣ್ಯ ಇಲಾಖಾ ಕಚೇರಿಯ ಎದುರು ಗ್ರಾಮಸ್ಥರು ಒಗ್ಗೂಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಬೇಗೂರು ಗ್ರಾಮದ ಕೊಟ್ಟಂಗಡ ರಾಜ ಸುಬ್ಬಯ್ಯ ಅವರು ಮಾತನಾಡಿ ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ, ಕೃಷಿಕರು ಭತ್ತದ ಕೃಷಿಯಿಂದ ದೂರವಾಗುವ ಕಾಲ ಬಹುದೂರವಿಲ್ಲವೆಂದು ಆತಂಕ ವ್ಯಕ್ತಪಡಿಸಿದರು. ಹಾತೂರು ಗ್ರಾ.ಪಂ ವ್ಯಾಪ್ತಿಯ ಕುಂದ ಗ್ರಾಮದ ಮದ್ರೀರ ರಶ್ಮಿ ಮಾತನಾಡಿ, ತಾನು ಹತ್ತು ಏಕರೆ ಭತ್ತದ ಕೃಷಿ ನಡೆಸುತ್ತಿದ್ದೆ. 2023-24ನೇ ಸಾಲಿನಲ್ಲಿ ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದೇನೆ. ಆದರೆ, ಕಾಡಾನೆಗಳ ನಿರಂತರ ದಾಳಿಯಿಂದ ಕಳೆದ ಸಾಲಿನಲ್ಲಿ ಭತ್ತದ ಕೃಷಿ ನಡೆಸಲಾಗದೆ ಭೂಮಿಯನ್ನು ಖಾಲಿ ಬಿಟ್ಟಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಪೊನ್ನಂಪೇಟೆ ತಾಲ್ಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಾಮೇರ ಮೊಣ್ಣಪ್ಪ, ಹುದಿಕೇರಿ ಪಂಚಾಯ್ತಿ ಸದಸ್ಯ ಮಂಡೆಚಂಡ ರಾಜಿ ಪೊನ್ನಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮಾಜಿ ಉಪಾಧ್ಯಕ್ಷ ಮತ್ರಂಡ ಪ್ರವೀಣ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ ಮಿಸ್ಟಿ ಹಿಲ್ಸ್ ನಿಂದ ಮೂವರು ಸಾಧಕರಿಗೆ ಗೌರವ ಸನ್ಮಾನ : ಪ್ರೇರಣೆಯಾಗುವಂಥ ಸಾಧಕರ ಕಥೆಗಳನ್ನು ದಾಖಲಿಸಿ : ರೋಟರಿ ಗವನ೯ರ್ ರಾಮಕೃಷ್ಣ ಕರೆ*
Next Article *ಕೊಡಗು : ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ದಿಢೀರ್ ಭೇಟಿ : ಗುಣಮಟ್ಟದ ಆಹಾರ ಪೂರೈಕೆಗೆ ಸಲಹೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.