Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ : ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ : ಎಎಸ್ಪಿ ದಿನೇಶ್ ಕುಮಾರ್ ಸಲಹೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ : ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ : ಎಎಸ್ಪಿ ದಿನೇಶ್ ಕುಮಾರ್ ಸಲಹೆ*

January 14, 20263 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.14 NEWS DESK : ವಾಹನ ಚಲಾಯಿಸುವ ಪ್ರತಿಯೊಬ್ಬರಲ್ಲಿಯೂ ಸಹ ಸಂಚಾರ ನಿಯಮವನ್ನು ಪಾಲಿಸುತ್ತೇವೆ ಎಂಬ ದೃಢಸಂಕಲ್ಪ ಮಾಡಬೇಕು. ಇದರಿಂದ ಅಪಘಾತವನ್ನು ತಡೆಯಬಹುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ,ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಂಭವಿಸುವ ವಿವಿಧ ರೀತಿಯ ಅಪಘಾತಗಳ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿ ಯುವ ಜನರಲ್ಲಿ  ಜಾಗೃತಿ ಮೂಡಿಸಿದರು.  ವಾಹನ ಸಂಚಾರ ಸಂಬಂಧಿಸಿದಂತೆ ಎಲ್ಲಾ ನಿಯಮಗಳು ಗೊತ್ತಿದೆ ಎಂದು ಉದಾಸೀನ ಮಾಡಬಾರದು. 18 ವರ್ಷದೊಳಗಿನವರು ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಚಲಾಯಿಸಬಾರದು. 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಜೊತೆಗೆ ವಾಹನದ ವಿಮೆ ಇರಬೇಕು ಎಂದು ದಿನೇಶ್ ಕುಮಾರ್ ಅವರು ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ವೀಲಿಂಗ್ ಸಂಚಾರ ಬೈಕ್ ಓಡಿಸುವುದು ಹೆಚ್ಚಾಗಿದೆ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ ಎಂದು ಅವರು ತಿಳಿಸಿದರು. ಸಾರಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಹಾಗೆಯೇ ತಮ್ಮ ಜೀವ ಕಳೆದುಕೊಳ್ಳಬೇಕಾಗುತ್ತದೆ. ವಾಹನ ಚಲಾಯಿಸುವಾಗ ಕುಟುಂಬದವರ ನೆನಪು ಸದಾ ಇರಬೇಕು. ಆ ನಿಟ್ಟಿನಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಸಲಹೆ ಮಾಡಿದರು. ರಾಷ್ಟ್ರದಲ್ಲಿ ವಾಹನ ಅಪಘಾತದಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಶಿಸ್ತುಬದ್ಧವಾಗಿ ಸಂಚಾರ ನಿಯಮ ಪಾಲಿಸಬೇಕು ಎಂದರು. ದ್ವಿಚಕ್ರ ವಾಹನ ಚಲಾಯಿಸುವವರು ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. ಸೀಟ್ ಬೆಲ್ಟ್ ಅಳವಡಿಸಿಕೊಳ್ಳಬೇಕು. ಪರವಾನಗಿ ಇಲ್ಲದೆ ವಾಹನ ಚಲಾಯಿಸಬಾರದು. ಆ ನಿಟ್ಟಿನಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದು ಅತ್ಯಗತ್ಯ ಎಂದು ದಿನೇಶ್ ಕುಮಾರ್ ಅವರು ಪ್ರತಿಪಾದಿಸಿದರು.  ಅತೀ ವೇಗವಾಗಿ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕಂಡುಬಂದಲ್ಲಿ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಎಚ್ಚರಿಸಿದರು.  ಜೊತೆಗೆ ವಾಹನದ ಆರ್‍ಸಿಯ ಪರವಾನಗಿಯನ್ನು ಒಂದು ವರ್ಷದವರೆಗೆ ರದ್ದು ಮಾಡಲಾಗುತ್ತದೆ. ಈ ಎಲ್ಲಾ ನಿಯಮಗಳನ್ನು ತಿಳಿದುಕೊಂಡು ವಾಹನ ಚಲಾಯಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿದರು. ‘ಅಪ್ರಾಪ್ತರು ಸಾರ್ವಜನಿಕ ಸ್ಥಳದಲ್ಲಿ ವಾಹನ ಚಾಲನೆ ಮಾಡುವುದಿಲ್ಲ ಎಂಬ ಶಪಥ ಮಾಡಬೇಕು. ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರತಿಯೊಬ್ಬರೂ ಸುಖ, ಶಾಂತಿ, ನೆಮ್ಮದಿಯಾಗಿ ಬದುಕುವತ್ತ ಗಮನಹರಿಸಬೇಕು ಎಂದರು.’  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ ಪ್ರತಿನಿತ್ಯ ಚಟುವಟಿಕೆಯ ಸಂಚಾರಕ್ಕೆ ವಾಹನ ಅತ್ಯಗತ್ಯ. ಆ ನಿಟ್ಟಿನಲ್ಲಿ ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವುದು ಹೆಚ್ಚಿನ ಅಗತ್ಯ ಎಂದು ಹೇಳಿದರು.  ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ನ್ಯಾಯಾಲಯದಲ್ಲಿ ಹೆಚ್ಚು ದಾಖಲಾಗುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ರಸ್ತೆ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಕಾನೂನಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಸಾಕಷ್ಟು ಮಾಹಿತಿ ಇದ್ದು, ಜೀವ ಮುಖ್ಯ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ‘ಪ್ರತಿಯೊಬ್ಬರ ಮನೆಯಲ್ಲಿರುವ ವಾಹನವು ರಥ ಇದ್ದಂತೆ. ರಥವನ್ನು ಯಾವ ರೀತಿ ಪೂಜಾ ಭಾವನೆಯಿಂದ ಕಾಣುತ್ತೇವೆ. ಅಷ್ಟು ಗೌರವ ನೀಡಿ, ತಾಳ್ಮೆ, ಸಹನೆಯಿಂದ, ಸಂಯಮದಿಂದ ವಾಹನ ಚಲಾಯಿಸಬೇಕು ಎಂದು ಶುಭ ಅವರು ಒತ್ತಿ ಹೇಳಿದರು.’  ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಅವರು ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಪ್ರತಿಜ್ಞಾ ವಿಧಿ ಬೋಧಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಹೊಸೂರು ರಮೇಶ್ ಜೋಯಪ್ಪ, ವಾಹನ ಚಾಲನಾ ತರಬೇತಿ ಶಾಲೆಗಳ ಸಂಘದ ಅಧ್ಯಕ್ಷರಾದ ಗಿಲ್ಬರ್ಟ್ ಲೋಬೋ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕರಾದ ಸಲೀಮ, ಮೋಹನ್ ಕುಮಾರ್, ಮೋಟಾರು ವಾಹನ ನಿರೀಕ್ಷಕರಾದ ಮೋಹನ್ ಕುಮಾರ್, ಪ್ರದೀಪ್ ಇತರರು ಇದ್ದರು.  ನಿವೃತ್ತ ಪ್ರಾದೇಶಿಕ ಅಧಿಕಾರಿ ಪಾಷ ನಿರೂಪಿಸಿದರು. ಸಂತ ಮೈಕಲರ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ರೀಟಾ ವಂದಿಸಿದರು. :: ಜಾಥಾ :: ರಸ್ತೆ ಸುರಕ್ಷತೆ ಮಾಸಾಚರಣೆ ಪ್ರಯುಕ್ತ ನಗರದ ಹೊಸ ಖಾಸಗಿ ಬಸ್ ನಿಲ್ದಾಣದಿಂದ ಮೈತ್ರಿ ಸಭಾಂಗಣದವರೆಗೆ ಜಾಥಾ ನಡೆಯಿತು. ಜಾಥಾಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಚಾಲನೆ ನೀಡಿದರು.  ಜಾಥಾದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಖಾಸಗಿ ಬಸ್ ಹಾಗೂ ಆಟೋ ಚಾಲಕರ ಸಂಘ ಹೀಗೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಪ್ಲೇ ಕಾರ್ಡ್ ಮೂಲಕ ಜಾಗೃತಿ ಮೂಡಿಸಲಾಯಿತು.

 

Share. Facebook Twitter Pinterest LinkedIn Tumblr Email WhatsApp
Previous Article*ಮಹಿಳಾ ಶಕ್ತಿ ಮೂಲಕ ಕಾಂಗ್ರೆಸ್ ಬಲವರ್ಧನೆ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಶಶಿಕಲಾ*
Next Article *ಸಿದ್ದರಾಮೇಶ್ವರರ ಜೀವನಾದರ್ಶಗಳನ್ನು ಎಲ್ಲರೂ ಪಾಲಿಸಿ : ತಹಶೀಲ್ದಾರ್ ಶ್ರೀಧರ ಸಲಹೆ* 

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.